Saturday, June 21, 2025
Saturday, June 21, 2025

Youth empowerment ಯುವ ಜನರ ಸ್ವಾವಲಂಬನೆಗಿರುವ ಸರ್ಕಾರದ ಕಾರ್ಯಕ್ರಮಗಳನ್ನ ಬಳಸಿಕೊಳ್ಳಿ- ಎಸ್.ಎನ್.ಚನ್ನಬಸಪ್ಪ

Date:

Youth empowerment ಯುವ ಜನತೆ ಪರಸ್ಪರ ಒಳೆಯ ಕಾರ್ಯಗಳನ್ನು ಮಾಡುವ ಮೂಲಕ ಉತ್ತಮ ಸಮಾಜ ನಿರ್ಮಾಣ ಮಾಡಬೇಕೆಂದು ಶಿವಮೊಗ್ಗ ನಗರ ಕ್ಷೇತ್ರ ಶಾಸಕರಾದ ಎಸ್.ಎನ್ ಚನ್ನಬಸಪ್ಪ ನುಡಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಸೇವಾ ಯೋಜನೆ, ನೆಹರೂ ಯುವ ಕೇಂದ್ರ, ನಿಸರ್ಗ ಯುವತಿ ಮಂಡಳಿ, ಶಿವಮೊಗ್ಗ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ 2023-24ನೇ ಸಾಲಿನ ಶಿವಮೊಗ್ಗ ಜಿಲ್ಲಾ ಮಟ್ಟದ ಯುವ ಜನೋತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಅವರು ಮಾತನಾಡಿದರು.

ಯುವಕರಿದ್ದಾಗ ಅತ್ಯುತ್ತಮ ಕೆಲಸಗಳನ್ನು ಮಾಡಲು ಸಾಧ್ಯವಿದ್ದು, ದೇಶಕ್ಕಾಗಿ ದುಡಿಯಬೇಕು. ಇಂತಹ ಯುವಜನೋತ್ಸವದಲ್ಲಿ ಯುವಕರು ಸ್ಪರ್ಧಾ ಮನೋಭಾವದಿಂದ ಭಾಗವಹಿಸಿ ಇತರರು ಭಾಗವಹಿಸುವಂತೆ ಮಾಡಬೇಕು. ಹಾಗೂ ಸಾಂಸ್ಕoತಿಕ ಮತ್ತು ಕಲಾ ಪರಂಪರೆಯನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಬೇಕು. ಯುವಕರ ಸ್ವಾವಲಂಬನೆಗಾಗಿ ಅನೇಕ ಕಾರ್ಯಕ್ರಮಗಳನ್ನು ಸರ್ಕಾರ ರೂಪಿಸಿದ್ದು ಅದನ್ನು ಬಳಕೆ ಮಾಡಿಕೊಳ್ಳಿರಿ ಎಂದು ಕರೆ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿದ ವಿಧಾನ ಪರಿಷತ್ ಶಾಸಕರಾದ ಡಿ.ಎಸ್ ಅರುಣ್ ಮಾತನಾಡಿ, ನೈತಿಕತೆ, ಸಂವಿಧಾನ ಮತ್ತು ಪ್ರಸ್ತುತದ ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯ ರಾಜ್ಯಾಂಗ, ಶಾಸಕಾಂಗ, ಕಾರ್ಯಾಂಗದ ವ್ಯವಸ್ಥೆಯನ್ನು ಇಂದಿನ ವಿದ್ಯಾರ್ಥಿಗಳು ಹೆಚ್ಚು ಒಗ್ಗೂಡಿಸಿಕೊಳ್ಳಬೇಕು. ಶಾಸಕಾಂಗದ ಟೀಕೆ ಸರ್ವೇ ಸಾಮಾನ್ಯ ಆದರೆ ಶಾಸಕಾಂಗದ ಬಗ್ಗೆ ತಿಳಿದುಕೊಂಡು ಯುವಜನತೆ ವ್ಯವಸ್ಥೆಯನ್ನು ಸರಿ ಮಾಡುವ ಕೆಲಸ ಮಾಡಬೇಕು. ದೇಶದಲ್ಲಿ ಶೇ.55 ರಷ್ಟು ಯುವಜನತೆ ಇದ್ದು, ಮುಂದಿನ ಪೀಳಿಗೆಗೆ ಏನಾದರೂ ಕಾಣಿಕೆ ಕೊಡುವಂತಿರಬೇಕು. ನಿಜ ಜೀವನದಲ್ಲಿ ನೈತಿಕವಾಗಿ ಸದೃಢರಾಗಬೇಕು. ಆಗ ಉತ್ತಮ ಭವಿಷ್ಯ ಸಾಧ್ಯ. ಶುಇಕ್ಷಣದೊಂದಿಗೆ ವ್ಯಕ್ತಿತ್ವ ನಿರ್ಮಾಣ ಕೆಲಸವಾದರೆ ಮಾತ್ರ ದೇಶದ ಬೆಳವಣಿಗೆ ಉತ್ತಮವಾಗುತ್ತದೆ. ಇದನ್ನು ಮಾಡುವುದು ನಮ್ಮೆಲ್ಲರ ಕರ್ತವ್ಯ. ಯುವಜನತೆ ದುಶ್ಚಟಗಳಿಂದ ದೂರವಿರಬೇಕು. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ನಮ್ಮ ಕಲೆ, ಸಂಸ್ಕøತಿಯನ್ನು ಕಾಪಾಡಲು ಹಲವು ಸಾಂಸ್ಕoತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಯುವಜನತೆ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

Youth empowerment ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಎಂ.ಟಿ ಮಂಜುನಾಥಸ್ವಾಮಿ ಮಾತನಾಡಿ, ಜಾನಪದದ ಜೊತೆಗೆ ಈ ಬಾರಿ ಹಲವು ಸೃಜನಾತ್ಮಕ ಸ್ಪರ್ಧೆಗಳನ್ನೂ ಸಹ ಆಯೋಜಿಸಲಾಗಿದೆ. ಇಲ್ಲಿ ಆಯ್ಕೆಯಾದವರು ರಾಜ್ಯ ಮಟ್ಟದಲ್ಲು ಭಾಗವಹಿಸುತ್ತಾರೆ ಎಂದು ಪ್ರಾಸ್ತಾವಿಕ ನುಡಿದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕoತಿ ಇಲಾಖೆ ಸಹಾಯಕ ನಿದೇರ್ಶಕರಾದ ಉಮೇಶ್.ಹೆಚ್, ಎನ್‍ಎಸ್‍ಎಸ್ ಕಾರ್ಯಕ್ರಮ ಸಂಯೋನಾಧಿಕಾರಿಗಳಾದ ಪರಿಸರ ನಾಗರಾಜ್, ಜಿಲ್ಲಾ ಯುವ ಅಧಿಕಾರಿ ಉಲ್ಲಾಸ್ ಕೆ.ಟಿ.ಕೆ, ಮಹೇಶ್, ಗಣೇಶ್ ಕೆಂಚನಾಲ್, ಮಹೇಂದ್ರ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಮಕ್ಕಳಿಗೆ ಜಾನಪದದ ಅರಿವು ಮೂಡಿಸುವುದು ಅವಶ್ಯ: ಕವಿತಾ ಸುಧೀಂದ್ರ

ಮಕ್ಕಳಲ್ಲಿ ಬಾಲ್ಯದಿಂದಲೇ ಜಾನಪದ ಸಂಸ್ಕೃತಿಯ ಮಹತ್ವದ ಕುರಿತು ಅರಿವು ಮೂಡಿಸಬೇಕು ಎಂದು...

Shivamogga District Minority Welfare Department ವಿದ್ಯಾರ್ಥಿನಿಲಯಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ, ಅವಧಿ ವಿಸ್ತರಣೆ

Shivamogga District Minority Welfare Department ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ...

ರಾಜ್ಯ ಮಟ್ಟದ ಅಂಬೆಗಾಲು – 6 ಕಿರು ಚಿತ್ರ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

ಶಿವಮೊಗ್ಗ ನಗರದ ಸಿನಿಮೊಗೆ - ಶಿವಮೊಗ್ಗ ಚಿತ್ರ ಸಮಾಜದ ವತಿಯಿಂದ...