Monday, December 15, 2025
Monday, December 15, 2025

Dr. Selvamani R ಬರ ನಿರ್ವಹಣೆ ಸಂಬಂಧ ಟಾಸ್ಕ್ ಫೋರ್ಸ್ ಸಭೆ‌ ನಡೆಸಲು ಎಲ್ಲಾ ತಹಶೀಲ್ದಾರುಗಳಿಗೆ ಸೂಚನೆ- ಡಾ.ಸೆಲ್ವಮಣಿ

Date:

Dr. Selvamani R ಬರುವ ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಅಭಾವ ತಲೆದೋರುವ ಸಂಭವವಿದ್ದು, ಎಲ್ಲಾ ತಾಲ್ಲೂಕು ತಹಶೀಲ್ದಾರ್‍ಗಳು ಹಾಗೂ ತಾ.ಪಂ ಕಾರ್ಯ ನಿರ್ವಾಹಕ ಅಧಿಕಾರಿಗಳು ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಸೂಚನೆ ನೀಡಿದರು.

ಶಿವಮೊಗ್ಗ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಬರ ಮತ್ತು ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬರ ನಿರ್ವಹಣೆ ಸಂಬಂಧ ನವೆಂಬರ್ ಮಾಸಾಂತ್ಯದೊಳಗಾಗಿ ತಾಲ್ಲೂಕು ಟಾಸ್ಕ್‍ಪೋರ್ಸ್ ಸಭೆ ನಡೆಸುವಂತೆ ತಹಶೀಲ್ದಾರರಿಗೆ ಸೂಚಿಸಿದ ಅವರು ಜಾನುವಾರುಗಳ ಮೇವಿನ ಸಮಸ್ಯೆ ಪರಿಹರಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಗ್ರಾ.ಪಂ ವಾರು ರೈತರ ಜಮೀನುಗಳನ್ನು ಗುರುತಿಸಿ ಫ್ರೂಟ್ಸ್ ತಂತ್ರಾಂಶದಲ್ಲಿ ರೈತರ ಆಧಾರ್ ಲಿಂಕ್ ಮಾಡಬೇಕು. ತೋಟಗಾರಿಕೆ, ಕೃಷಿ, ನರೇಗಾ ಯೋಜನೆಗಳಿಗೆ ಸಂಬಂಧಿಸಿದಂತೆ ಫ್ರೂಟ್ಸ್ ತಂತ್ರಾಂಶದಲ್ಲಿ ಆಧಾರ್ ಲಿಂಕ್ ಮಾಡಬೇಕು. ಈಗಾಗಲೇ ತಂತ್ರಾಂಶದಲ್ಲಿ ಜಮೀನನ್ನು ಗುರುತಿಸಿ ಲಿಂಕ್ ಮಾಡಲಾಗುತ್ತಿದ್ದು, ಇನ್ನೊಂದು ತಿಂಗಳ ಒಳಗೆ ತೋಟಗಾರಿಕೆ, ಕೃಷಿ ಮತ್ತು ಕಂದಾಯ ಇಲಾಖೆ ವತಿಯಿಂದ ಈ ಕೆಲಸವನ್ನು ಪೂರ್ಣಗೊಳಿಸಬೇಕೆಂದರು.

ನರೇಗಾ ಅಡಿಯಲ್ಲಿ ತಾ.ಪಂ ಇಓ ಗಳು ಕಾರ್ಮಿಕರಿಗೆ ಕೆಲಸಗಳನ್ನು ನೀಡಬೇಕು. ಸಾಗರ ಮತ್ತು ಸೊರಬದಲ್ಲಿ ಬೇಡಿಕೆ ಹೆಚ್ಚಿದೆ. ಗುರುತಿಸಿ ಕೆಲಸಗಳನ್ನು ನೀಡಬೇಕು ಎಂದು ಸೂಚನೆ ನೀಡಿದರು. ಹಾಗೂ ಮಳೆ ಬಂದು ಬಿದ್ದಿರುವ, ಹಾನಿಗೊಳಗಾದ ಮನೆಗಳ ಜಿಪಿಎಸ್ ಬಾಕಿ ಇರುವುದನ್ನು ಪಿಡಿಓ ಗಳು ಪರಿಶೀಲಿಸಿ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.

ಎಲ್ಲ ತಹಶೀಲ್ದಾರ್, ಇಓ ಗಳು ಪಿಡಿಓ ಗಳ ಜೊತೆಗೂಡಿ ಪ್ರತಿ 15 ದಿನಗಳಿಗೆ ಒಮ್ಮೆ ಬರ ನಿರ್ವಹಣೆ ಕುರಿತು ಪ್ರಗತಿ ಪರಿಶೀಲನೆ ಸಭೆ ನಡೆಸಬೇಕು ಎಂದು ಸೂಚಿಸಿದ ಅವರು ಜಾನುವಾರು ಮೇವಿಗೆ ಕೊರತೆಯಾಗದಂತೆ ಕ್ರಮ ವಹಿಸಬೇಕೆಂದು ತಿಳಿಸಿದರು.
ಪಶುಪಾಲನಾ ಇಲಾಖೆ ಉಪನಿರ್ದೇಶಕ ಡಾ.ಶಿವಯೋಗಿ ಯಲಿ ಮಾತನಾಡಿ, ಮುಂದಿನ 23 ವಾರುಗಳಿಗೆ ಜಾನುವಾರುಗಳ ಮೇವಿಗೆ ಕೊರತೆ ಇಲ್ಲ. ಶಿಕಾರಿಪುರ ಸೊರಬದಲ್ಲಿ 16 ವಾರಗಳಿಗೆ ಸಾಕಾಗುವಷ್ಟು ಮೇವಿದೆ. 29 ಸಾವಿರ ಮೇವಿನ ಕಿಟ್‍ಗಳನ್ನು ತರಿಸಲಾಗಿದೆ ಎಂದು ಮಾಹಿತಿ ನೀಡಿದರು.

Dr. Selvamani R ಜಿ.ಪಂ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ, ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ, ಎಸಿ ಗಳಾದ ಸತ್ಯನಾಯರಾಯಣ್ ಮತ್ತು ಪಲ್ಲವಿ ಸಾತೇನಹಳ್ಳಿ, ಡಿಯುಡಿಸಿ ಪಿಡಿ ಮನೋಹರ್, ಕೃಷಿ ಜಂಟಿ ನಿರ್ದೇಶಕಿ ಪೂರ್ಣಿಮಾ, ತಹಶೀಲ್ದಾರರು, ತಾ.ಪಂ ಇಓ ಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...