Saturday, September 28, 2024
Saturday, September 28, 2024

Chikkamagaluru News ಅಧಿಕಾರ ಎಂಬುದು ಹುದ್ದೆಯಲ್ಲ ಅದೊಂದು ಜವಾಬ್ದಾರಿ- ರೇಖಾ ಹುಲಿಯಪ್ಪಗೌಡ

Date:

Chikkamagaluru News ಚಿಕ್ಕಮಗಳೂರು, ತಾಲ್ಲೂಕಿನ ಕಳಸಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಡಿ.ಸಿ. ಯೋಗೀಶ್ ಅವರು ಸೋಮವಾರ ಅವಿರೋಧವಾಗಿ ಆಯ್ಕೆಯಾದರು.
ಪಂಚಾಯಿತಿ ಸಭಾಂಗಣದ ನಡೆದ ಸಭೆಯಲ್ಲಿ ಸರ್ವ ಸದಸ್ಯರು ಅಧ್ಯಕ್ಷ ಸ್ಥಾನಕ್ಕೆ ಯೋಗೀಶ್ ಅವರಿಗೆ ನಿಶ್ಚಳ ಬಹುಮತ ಸೂಚಿಸಿದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಶಿವಕುಮಾರ್ ಅವಿರೋಧ ಆಯ್ಕೆಯನ್ನು ಘೋಷಿ ಸಿದರು.
ಅಭಿನಂದನೆ ಸಲ್ಲಿಸಿ ಮಾತನಾಡಿದ ಜಿ.ಪಂ. ಮಾಜಿ ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ ಗ್ರಾ.ಪಂ. ವ್ಯಾಪ್ತಿಯ ನಿವಾಸಿಗಳಿಗೆ ಮೂಲಭೂತ ಸೌಕರ್ಯವನ್ನು ಸಕಾಲ ಒದಗಿಸುವ ಮೂಲಕ ಸೇವಾಮನೋಭಾವ ಮಾದರಿಯಲ್ಲಿ ಕೆಲಸ ಮಾಡಬೇಕು ಎಂದು ಸಲಹೆ ಮಾಡಿದರು.

ಅಧಿಕಾರ ಎಂಬುದು ಹುದ್ದೆಯಲ್ಲ, ಅದೊಂದು ಜವಾಬ್ದಾರಿ. ಅರಿತುಕೊಂಡು ಸಾರ್ವಜನಿಕ ಸೇವೆ ಮಾಡು ವವರಿಗೆ ಉತ್ತಮ ಅವಕಾಶ ಇದಾಗಿದೆ. ಯೋಗೀಶ್ ಅವರು ಕೂಡಾ ಸಾರ್ವಜನಿಕ ವಲಯದಲ್ಲಿ ಅನೇಕ ವರ್ಷ ಗಳಿಂದ ಗುರುತಿಸಿಕೊಂಡಿದ್ದು ತಮ್ಮ ಅಧಿಕಾರವನ್ನು ಗ್ರಾಮಸ್ಥರ ಸಕ್ರಿಯ ಕೆಲಸಗಳಿಗೆ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.

ಕಳಸಾಪುರ ವ್ಯಾಪ್ತಿಯು ಬಯಲುಸೀಮೆ ಪ್ರದೇಶವಾಗಿರುವ ಹಿನ್ನೆಲೆಯಲ್ಲಿ ನೂತನ ಅಧ್ಯಕ್ಷರು ಮೊದಲು ಕುಡಿಯುವ ನೀರಿಗೆ ಹೆಚ್ಚು ಆದ್ಯತೆ ನೀಡಬೇಕು. ಜೊತೆಗೆ ರಸ್ತೆ, ಚರಂಡಿ ಸೇರಿದಂತೆ ಮೂಲಸೌಕರ್ಯಗಳನ್ನು ಜಾತಿ ತಾರತಮ್ಯವೆಸಗದೇ ಸಮರ್ಪಕವಾಗಿ ಒದಗಿಸಿಕೊಡಬೇಕು ಎಂದರು.

ನೂತನ ಗ್ರಾ.ಪಂ. ಅಧ್ಯಕ್ಷ ಡಿ.ಸಿ. ಯೋಗೀಶ್ ಮಾತನಾಡಿ ದೊರೆತಿರುವ ಅಧ್ಯಕ್ಷ ಸ್ಥಾನದ ಅವಧಿಯಲ್ಲಿ ಸಂಪೂರ್ಣವಾಗಿ ಗ್ರಾಮಸ್ಥರ ಒಳಿತಿಗೆ ಪೂರಕವಾಗಿ ಹಾಗೂ ಗ್ರಾಮದ ಹಿರಿಯರ ಮಾರ್ಗದರ್ಶನ ಮತ್ತು ಪಂಚಾಯಿತಿ ಸದಸ್ಯರ ಸಹಕಾರದ ಮೂಲಕ ಕಾರ್ಯನಿರ್ವಹಿಸಲಾಗುವುದು ಎಂದು ಭರವಸೆ ನೀಡಿದರು.
ಜಿ.ಪಂ. ಮಾಜಿ ಸದಸ್ಯ ಡಿ.ಕೆ.ಚಂದ್ರೇಗೌಡ ಮಾತನಾಡಿ ಅಧ್ಯಕ್ಷರಿಗೆ ಅಧಿಕಾರ ಮುಖ್ಯವಲ್ಲ. ಅನೇಕ ಸವಾಲು ಗಳು ಎದುರಾಗುವ ಹಿನ್ನೆಲೆಯಲ್ಲಿ ತಾಳ್ಮೆಯಿಂದ ಎಲ್ಲವನ್ನು ನಿಭಾಯಿಸುವುದನ್ನು ರೂಢಿಸಿಕೊಂಡಾಗ ಮಾತ್ರ ಪಂಚಾಯಿತಿಯನ್ನು ಪ್ರಗತಿಯತ್ತ ಕೊಂಡೊಯ್ಯಲು ಸಾಧ್ಯ ಎಂದರು.

Chikkamagaluru News ಈ ಸಂದರ್ಭದಲ್ಲಿ ಪಂಚಾಯಿತಿ ಉಪಾಧ್ಯಕ್ಷೆ ಶಿವರತ್ನ, ಸದಸ್ಯರುಗಳಾದ ಕೆ.ಹೆಚ್.ರಾಧ, ಗೌಸ್‌ಖಾನ್, ರುಕ್ಮಿಣಿ, ಮಂಜುಳಾ, ಕೆ.ಎಸ್.ವೆಂಕಟೇಶ್, ಕೆ.ಸಿ.ಚಂದ್ರಶೇಖರ್, ಕೆ.ಎಸ್.ಶ್ರೀಧರ್, ಕೆ.ಸಿ.ದೇವರಾಜ್, ನಾಗೇಗೌಡ, ಗೌರಮ್ಮ, ಲಕ್ಷ್ಮಮ್ಮ, ಮಾಜಿ ಗ್ರಾ.ಪಂ. ಅಧ್ಯಕ್ಷ ತಿಮ್ಮೇಗೌಡ, ಈಶ್ವರಹಳ್ಳಿ ಗ್ರಾ.ಪಂ. ಸದಸ್ಯರಾದ ಮಧು, ಯೋಗೀಶ್, ಬೆಳವಾಡಿ ಗ್ರಾ.ಪಂ. ಅಧ್ಯಕ್ಷ ಭಾಗ್ಯಚಂದ್ರಶೇಖರ್, ಕಾಂಗ್ರೆಸ್ ಲಕ್ಯಾ ಹೋಬಳೀ ಅಧ್ಯಕ್ಷ ಶಂಕರ್ ನಾಯ್ಕ್, ಪಿಡಿಓ ಎ.ಆರ್.ಜಗದೀಶ್ ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shikaripura News ಅಹಿಂದ ಸಂಘಟನೆ ಕರೆ ನೀಡಿದ್ದ ಶಿಕಾರಿಪುರ ಬಂದ್ ಯಶಸ್ವಿ

Shikaripura News ನಾಡಿನ ಅಹಿಂದ ವರ್ಗಕ್ಕೆ ಸೇರಿದ ಜನರ ಹಿತ ಕಾಯುವ...

New Delhi News ಅಪಹರಣಕ್ಕೊಳಗಾಗಿದ್ದ ಬಾಲಕನೇ ಇಂದು ವಕೀಲನಾಗಿ ಅದೇ ಕಿಡ್ನಾಪರ್ಸ್ ಗೆ ಶಿಕ್ಷೆ ಕೊಡಿಸಿದ

New Delhi News ಈ ಹಿಂದೆ 7 ವರ್ಷದವನಾಗಿದ್ದಾಗ ಅಪಹರಣಕ್ಕೊಳಗಾಗಿದ್ದ ಬಾಲಕ...

Kasturi Rangan Comittee Report ಕಸ್ತೂರಿ ರಂಗನ್ ವರದಿ ತಿರಸ್ಕಾರ: ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

Kasturi Rangan Comittee Report ಜುಲೈನಲ್ಲಿ ಕೇಂದ್ರ ಸರ್ಕಾರ 6ನೇ ಕರಡು...

Hosanagara News ಇಸ್ಪೀಟ್ ಅಡ್ಡೆಗೆ ಪೊಲೀಸರ ದಾಳಿ – 11 ಜನರ ಬಂಧನ 17,640 ರೂಪಾಯಿ ವಶ

Hosanagara News ಹೊಸನಗರ ತಾಲ್ಲೂಕು ಮಾರುತೀಪುರ ಗ್ರಾಮ ಪಂಚಾಯಿತಿಯ ಹಳೆಬಾಣಿಗ ರಸ್ತೆಯ...