Monday, December 15, 2025
Monday, December 15, 2025

Bharat Scouts and Guides ಬೌದ್ಧಿಕ ತಿಳುವಳಿಕೆ ಜೊತೆ ಆತ್ಮವಿಶ್ವಾಸ ಬೆಳೆಸಲು ತರಬೇತಿ ಶಿಬಿರಗಳು ಸಹಕಾರಿ- ರಮೇಶ್ ಶಾಸ್ತ್ರಿ

Date:

Bharat Scouts and Guides ತರಬೇತಿ ಶಿಬಿರಗಳು ಬೌದ್ಧಿಕ ತಿಳವಳಿಕೆ ವೃದ್ಧಿಸುವ ಜತೆಯಲ್ಲಿ ಆತ್ಮವಿಶ್ವಾಸ ಮೂಡಿಸಲು ಸಹಕಾರಿ ಆಗುತ್ತವೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಘಟಕದ ಪ್ರಧಾನ ಆಯುಕ್ತ ಎಚ್.ಡಿ.ರಮೇಶ್ ಶಾಸ್ತ್ರೀ ಅವರು ಹೇಳಿದರು.

ಹುಂಚದ ಅತಿಶಯ ಕ್ಷೇತ್ರ ಹೊಂಬುಜ ಶ್ರೀ ಪದ್ಮಾವತಿ ದೇವಸ್ಥಾನದ ಆವರಣದಲ್ಲಿ ಶಿಕ್ಷಕರಿಗೆ ಆಯೋಜಿಸಿದ್ದ ಸ್ಕೌಟ್ ಗೈಡ್, ಕಬ್, ಬುಲ್ ಗೈಡ್, ಕ್ಯಾಪ್ಟನ್, ಸ್ಕೌಟ್ ಮಾಸ್ಟರ್, ಬುಲ್, ಫ್ಲಾಕ್ ಲೀಡರ್ ಗಳಿಗೆ ಏಳು ದಿನಗಳ ಕಾಲ ಜಿಲ್ಲಾ ಮಟ್ಟದ ತರಬೇತಿ ಶಿಬಿರ ಸಮಾರೋಪದಲ್ಲಿ ಮಾತನಾಡಿದರು.

ತರಬೇತಿ ಪಡೆದಿರುವ ಶಿಕ್ಷಕರು ಶಾಲೆಗಳಲ್ಲಿ ಸ್ಕೌಟ್ ಮತ್ತು ಗೈಡ್ ಘಟಕವನ್ನು ಪರಿಣಾಮಕಾರಿ ಅನುಷ್ಠಾನ ಮಾಡಲು ಮುಂದಾಗಬೇಕು. ಸ್ಕೌಟ್ಸ್ ಮತ್ತು ಗೈಡ್ಸ್ ಮಹತ್ವದ ಕುರಿತು ಮಕ್ಕಳಿಗೆ ಅರಿವು ಮೂಡಿಸಬೇಕು. ಮುಂದಿನ ದಿನಗಳಲ್ಲಿ ಹೆಚ್ಚು ಘಟಕಗಳನ್ನು ಸ್ಥಾಪಿಸಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಸ್ಕೌಟ್ ಆಯುಕ್ತ ಕೆ.ಪಿ.ಬಿಂದುಕುಮಾರ್ ಮಾತನಾಡಿ, ತರಬೇತಿ ಶಿಬಿರಗಳು ಯಶಸ್ವಿಯಾಗಲು ಶಿಕ್ಷಕರ ಪಾತ್ರ ಮಹತ್ತರವಾಗಿತ್ತು. ಇಲ್ಲಿ ಸಮಗ್ರ ಮಾಹಿತಿ ತಿಳಿದುಕೊಂಡಿರುವ ಎಲ್ಲ ಶಿಬಿರಾರ್ಥಿಗಳು ಸಮಾಜಮುಖಿಯಾಗಿ ಕೆಲಸ ಮಾಡುವ ದಿಸೆಯಲ್ಲಿ ಮುನ್ನಡೆಯಬೇಕು. ಮಕ್ಕಳು ಸಹ ಉತ್ತಮ ನಾಯಕರಾಗಿ ರೂಪುಗೊಳ್ಳುವಲ್ಲಿ ಸಹಕಾರಿ ಆಗುತ್ತದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ರಾಜ್ಯ ಸಹಾಯಕ ಸಂಘಟನಾ ಆಯುಕ್ತೆ ಭಾರತಿ ಡಯಾಸ್ ಸರ್ವಧರ್ಮ ಪ್ರಾರ್ಥನೆ ನಡೆಸಿಕೊಟ್ಟರು. ಒಂದು ವಾರ ತರಬೇತಿ ಪಡೆದ ಶಿಕ್ಷಕರು ಅನಿಸಿಕೆ ಹಂಚಿಕೊಂಡರು. ಎಲ್ಲರಿಗೂ ಪ್ರಮಾಣಪತ್ರ ವಿತರಿಸಲಾಯಿತು.

ಶಿಬಿರ ನಡೆಸಲು ಅವಕಾಶ ಮಾಡಿಕೊಟ್ಟ ಹೊಂಬುಜ ಜೈನಮಠದ ಶ್ರೀ ದೇವೆಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ಅವರಿಗೆ ಜಿಲ್ಲಾ ಸಂಸ್ಥೆಯು ಅಭಿನಂದಿಸಿತು.

Bharat Scouts and Guides ಕೇಂದ್ರ ಸ್ಥಾನಿಕ ಆಯುಕ್ತ, ಶಿಬಿರದ ನಾಯಕ ಕೆ.ರವಿ, ಶಿವಶಂಕರ್, ತರಬೇತುದಾರರಾದ ಪರಮೇಶ್ವರಯ್ಯ, ಜಿ.ವಿಜಯ್‌ಕುಮಾರ್, ಸಂಧ್ಯಾರಾಣಿ, ರಾಧಿಕಾ, ಮುರಳಿ, ವಿನಯಭೂಷಣ್, ಮೀನಾಕ್ಷಮ್ಮ, ಪುಟ್ಟಪ್ಪ, ಗೀತಾ ಚಿಕಮಠ, ಸಿ.ಎಸ್.ಅಶೋಕ್‌ಕುಮಾರ್, ಹೇಮಲತಾ, ಪ್ರಹ್ಲಾದ್, ಕಾರ್ಯದರ್ಶಿ ಪರಮೇಶ್ವರ್, ವೈ.ಆರ್.ವಿರೇಶಪ್ಪ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...