Monday, February 2, 2026
Monday, February 2, 2026

D. K. Shivakumar ಮೂಕ ಪ್ರಾಣಿಗಳಿಗಾಗಿ ಆಸ್ಪತ್ರೆ ನಿರ್ಮಿಸಿದ ಹಿರಿಯ ನಟಿ ಲೀಲಾವತಿ ಅವರ ಕಳಕಳಿ ಶ್ಲಾಘನೀಯ- ಡಿ.ಕೆ.ಶಿವಕುಮಾರ್

Date:

D. K. Shivakumar ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರು ನೆಲಮಂಗಲದ ಸೋಲದೇವನಹಳ್ಳಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶ್ರೀಮತಿ ಎಂ.ಲೀಲಾವತಿ ಪಶು ವೈದ್ಯಕೀಯ ಆಸ್ಪತ್ರೆಯನ್ನು ಇಂದು ಉದ್ಘಾಟಿಸಿ, ಮಾತನಾಡಿದರು.

ಹಿರಿಯ ನಟಿ ಶ್ರೀಮತಿ ಲೀಲಾವತಿ ಹಾಗೂ ಅವರ ಮಗ ವಿನೋದ್ ರಾಜ್’ರವರು ನನ್ನ ನಿವಾಸಕ್ಕೆ ಬಂದು ತಾವು ಕಟ್ಟಿರುವ ಪಶು ವೈದ್ಯಕೀಯ ಆಸ್ಪತ್ರೆಯನ್ನು ಉದ್ಘಾಟಿಸಬೇಕೆಂದು ಕೇಳಿಕೊಂಡಿದ್ದರು. ಅದರಂತೆ ನನ್ನ ಸರ್ಕಾರಿ ಕೆಲಸಗಳ ನಡುವೆ ಬಿಡುವು ಮಾಡಿಕೊಂಡು ಇಂದು ಈ ಆಸ್ಪತ್ರೆಯನ್ನು ಉದ್ಘಾಟಿಸಿದ್ದೇನೆ. ಪಶು ವೈದ್ಯಕೀಯ ಆಸ್ಪತ್ರೆಯನ್ನು ನಿರ್ಮಾಣ ಮಾಡುವ ಮೂಲಕ ಇಂದು ಲೀಲಾವತಿಯವರು ಹಾಗೂ ವಿನೋದ್ ರಾಜ್’ರವರು ಸಮಾಜಕ್ಕೆ ಒಂದು ದೊಡ್ಡ ಸಂದೇಶವನ್ನು ನೀಡಿದ್ದಾರೆ ಎಂದು ಹೇಳಿದರು.

D. K. Shivakumar ಶ್ರೀಮಂತರು ಹಲವಾರು ರೀತಿಯಲ್ಲಿ ದಾನ, ಧರ್ಮ ಮಾಡಿರುವುದನ್ನು ನಾವು ನೋಡಿದ್ದೇವೆ. ಆದರೆ ಲೀಲಾವತಿಯವರು ಮೂಕ ಪ್ರಾಣಿಗಳಿಗಾಗಿ ಆಸ್ಪತ್ರೆಯೊಂದನ್ನು ನಿರ್ಮಿಸಿ ತೋರಿದ ಸಾಮಾಜಿಕ ಕಳಕಳಿ ಇದೆಲ್ಲವನ್ನು ಮೀರಿದ್ದು. 60 ವರ್ಷಗಳ ಕಾಲ ಕಲಾ ಸೇವೆ ಮಾಡಿರುವ ಲೀಲಾವತಿಯವರು, ಇಂದು ಸಾಮಾಜಿಕ ಸೇವೆಯ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ. ಪಶುಗಳ ಚಿಕಿತ್ಸೆಗಾಗಿ ಕಟ್ಟಿರುವ ಈ ಆಸ್ಪತ್ರೆ ಯಶಸ್ವಿಯಾಗಿ ನಡೆದುಕೊಂಡು ಹೋಗಲಿ ಹಾಗೂ ಇದಕ್ಕೆ ಬೇಕಾದ ಸಹಕಾರ ಹಾಗೂ ಬೆಂಬಲವನ್ನು ನೀಡುತ್ತೇನೆ ಎಂದು ಹೇಳಿ ಅವರಿಗೆ ಶುಭ ಹಾರೈಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...