Sunday, August 2, 2026
Sunday, August 2, 2026

D. K. Shivakumar ಮೂಕ ಪ್ರಾಣಿಗಳಿಗಾಗಿ ಆಸ್ಪತ್ರೆ ನಿರ್ಮಿಸಿದ ಹಿರಿಯ ನಟಿ ಲೀಲಾವತಿ ಅವರ ಕಳಕಳಿ ಶ್ಲಾಘನೀಯ- ಡಿ.ಕೆ.ಶಿವಕುಮಾರ್

Date:

D. K. Shivakumar ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರು ನೆಲಮಂಗಲದ ಸೋಲದೇವನಹಳ್ಳಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶ್ರೀಮತಿ ಎಂ.ಲೀಲಾವತಿ ಪಶು ವೈದ್ಯಕೀಯ ಆಸ್ಪತ್ರೆಯನ್ನು ಇಂದು ಉದ್ಘಾಟಿಸಿ, ಮಾತನಾಡಿದರು.

ಹಿರಿಯ ನಟಿ ಶ್ರೀಮತಿ ಲೀಲಾವತಿ ಹಾಗೂ ಅವರ ಮಗ ವಿನೋದ್ ರಾಜ್’ರವರು ನನ್ನ ನಿವಾಸಕ್ಕೆ ಬಂದು ತಾವು ಕಟ್ಟಿರುವ ಪಶು ವೈದ್ಯಕೀಯ ಆಸ್ಪತ್ರೆಯನ್ನು ಉದ್ಘಾಟಿಸಬೇಕೆಂದು ಕೇಳಿಕೊಂಡಿದ್ದರು. ಅದರಂತೆ ನನ್ನ ಸರ್ಕಾರಿ ಕೆಲಸಗಳ ನಡುವೆ ಬಿಡುವು ಮಾಡಿಕೊಂಡು ಇಂದು ಈ ಆಸ್ಪತ್ರೆಯನ್ನು ಉದ್ಘಾಟಿಸಿದ್ದೇನೆ. ಪಶು ವೈದ್ಯಕೀಯ ಆಸ್ಪತ್ರೆಯನ್ನು ನಿರ್ಮಾಣ ಮಾಡುವ ಮೂಲಕ ಇಂದು ಲೀಲಾವತಿಯವರು ಹಾಗೂ ವಿನೋದ್ ರಾಜ್’ರವರು ಸಮಾಜಕ್ಕೆ ಒಂದು ದೊಡ್ಡ ಸಂದೇಶವನ್ನು ನೀಡಿದ್ದಾರೆ ಎಂದು ಹೇಳಿದರು.

D. K. Shivakumar ಶ್ರೀಮಂತರು ಹಲವಾರು ರೀತಿಯಲ್ಲಿ ದಾನ, ಧರ್ಮ ಮಾಡಿರುವುದನ್ನು ನಾವು ನೋಡಿದ್ದೇವೆ. ಆದರೆ ಲೀಲಾವತಿಯವರು ಮೂಕ ಪ್ರಾಣಿಗಳಿಗಾಗಿ ಆಸ್ಪತ್ರೆಯೊಂದನ್ನು ನಿರ್ಮಿಸಿ ತೋರಿದ ಸಾಮಾಜಿಕ ಕಳಕಳಿ ಇದೆಲ್ಲವನ್ನು ಮೀರಿದ್ದು. 60 ವರ್ಷಗಳ ಕಾಲ ಕಲಾ ಸೇವೆ ಮಾಡಿರುವ ಲೀಲಾವತಿಯವರು, ಇಂದು ಸಾಮಾಜಿಕ ಸೇವೆಯ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ. ಪಶುಗಳ ಚಿಕಿತ್ಸೆಗಾಗಿ ಕಟ್ಟಿರುವ ಈ ಆಸ್ಪತ್ರೆ ಯಶಸ್ವಿಯಾಗಿ ನಡೆದುಕೊಂಡು ಹೋಗಲಿ ಹಾಗೂ ಇದಕ್ಕೆ ಬೇಕಾದ ಸಹಕಾರ ಹಾಗೂ ಬೆಂಬಲವನ್ನು ನೀಡುತ್ತೇನೆ ಎಂದು ಹೇಳಿ ಅವರಿಗೆ ಶುಭ ಹಾರೈಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...