Sunday, December 14, 2025
Sunday, December 14, 2025

Kannada Rajyotsava ಡಿ,3 ರಂದು ಶಿವಮೊಗ್ಗ ಕರವೇ ವತಿಯಿಂದ ಕನ್ನಡ ರಾಜ್ಯೋತ್ಸವ

Date:

Kannada Rajyotsava ಕರವೇ ಯುವಸೇನೆಯಿಂದ ಡಿಸೆಂಬರ್ 3ರಂದು ಅದ್ದೂರಿ ಕನ್ನಡ ರಾಜ್ಯೋತ್ಸವ
ಶಿವಮೊಗ್ಗ ಅಶೋಕ ನಗರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ವತಿಯಿಂದ ಡಿಸೆಂಬರ್ ಮೂರರಂದು ಅಶೋಕನಗರ ಮುಖ್ಯ ರಸ್ತೆಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ ನಾಡಗೀತೆಯೊಂದಿಗೆ ಪ್ರಾರಂಭವಾಗುವ ಕಾರ್ಯಕ್ರಮದಲ್ಲಿಕರವೇ ಯುವ ಸೇನೆ ರಾಜ್ಯಾಧ್ಯಕ್ಷರಾದ ಶ್ರೀ ಹರೀಶ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರವೇ ಯುವಸೇನೆ ಜಿಲ್ಲಾಧ್ಯಕ್ಷರಾದ ಕಿರಣ್ ಕುಮಾರ್ ಹೆಚ್ಎಸ್ ವಹಿಸಲಿದ್ದು ಮುಖ್ಯ ಅತಿಥಿಗಳಾಗಿ ಸಂಸದ ಬಿ ವೈ ರಾಘವೇಂದ್ರ ರವರು ಹಾಗೂ ಶಾಸಕರಾದ ಚನ್ನಬಸಪ್ಪ ನವರು ಗ್ರಾಮಾಂತರ ಶಾಸಕರಾದ ಶಾರದಾ ಪುರ್ಯನಾಯ್ಕ್ ಮಾಜಿ ಶಾಸಕರಾದ ಕೆ ಬಿ ಪ್ರಸನ್ನ ಕುಮಾರ್ ಕಾಂಗ್ರೆಸ್ ಮುಖಂಡರಾದ ಶ್ರೀಕಾಂತ ಎಸ್ ಮಹಮ್ಮದ್ ಶಫಿವುಲ್ಲಾ ಅಧ್ಯಕ್ಷರು ವರ್ಕ್ ಬೋರ್ಡ್ ಸಲಹಾ ಸಮಿತಿ ಹೊಳೆ ಹೊನ್ನೂರ್ ಅಧ್ಯಕ್ಷರಾದ ಹನುಮಂತು ಹಾಗೂ ಸ್ಥಳೀಯ ಕಾರ್ಪೊರೇಟರ್ ಆದ ಮಂಜುಳಾ ಶಿವಣ್ಣ ಭಾಗವಹಿಸಲಿದ್ದಾರೆ. ಹಾಗೂ ವಿಶೇಷ ಆಹ್ವಾನಿತರಾಗಿ ಶ್ರೀ ಟಿ.ಎಸ್ ಆನಂದ್ ರೈಲ್ವೆ ಇಲಾಖೆ ಶಿವಪ್ಪ ಸಂಗಣ್ಣನವರ್ ಪತ್ರಕರ್ತ ಸಾಹಿತಿ ಗಾರಾ ಶ್ರೀನಿವಾಸ್ ಕಾನೂನು ಸಲಹೆಗಾರರ ಅನಿಲ್ ಕುಮಾರ್ ಹಾಗೂ ಸಮಾಜ ಸೇವಕರಾದ ಚಿರಂಜೀವಿ ಬಾಬು ಭಾಗವಹಿಸಲಿದ್ದಾರೆ ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸೇವಾ ರತ್ನ ಪ್ರಶಸ್ತಿ ಪ್ರಧಾನಿ ಮಾಡಲಾಗುವುದು ಹಾಗೂ Kannada Rajyotsava ಕಾರ್ಯಕ್ರಮದ ಕೊನೆಯಲ್ಲಿ ಪ್ರೀತಂ ಮಲೋಡಿ ಆರ್ಕೆಸ್ಟ್ರಾ ಅವರಿಂದ ರಸಮಂಜರಿ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಕರವೇ ಜಿಲ್ಲಾಧ್ಯಕ್ಷರಾದ ಕಿರಣ್ ಕುಮಾರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...