Wednesday, October 2, 2024
Wednesday, October 2, 2024

Madhu Bangarappa ಕನಕದಾಸರಂಥವರು ಜಾತ್ಯಾತೀತ, ಪಕ್ಷಾತೀತ ಆಡಳಿತಕ್ಕೆ ಸ್ಫೂರ್ತಿ- ಸಚಿವ ಮಧು ಬಂಗಾರಪ್ಪ

Date:

Madhu Bangarappa ಕನಕದಾಸರ ಕೀರ್ತನೆಗಳು ಸೇರಿದಂತೆ ಮಹಾನ್‍ವ್ಯಕ್ತಿಗಳ ತತ್ವಾದರ್ಶಗಳನ್ನು ಅಳವಡಿಸಿಕೊಂಡು ನಡೆದರೆ ಅದೇ ನಮ್ಮ ಸಂವಿಧಾನ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನುಡಿದರು.

ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕoತಿ ಇಲಾಖೆ ಹಾಗೂ ಜಿಲ್ಲಾ ಕುರುಬರ ಸಂಘ, ಶಿವಮೊಗ್ಗ ಇವರುಗಳು ಸಂಯುಕ್ತಾಶ್ರಯದಲ್ಲಿ ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಶ್ರೀ ಕನಕದಾಸರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಾತ್ಯಾತೀತ, ಪಕ್ಷಾತೀತ ಆಡಳಿತಕ್ಕೆ ಸ್ಪೂರ್ತಿ ಕನಕದಾಸರಂತಹವರು. 16 ನೇ ಶತಮಾನದಲ್ಲೇ ಜಾತಿ ಮತ, ಧರ್ಮವನ್ನು ದೂರ ತಳ್ಳಿ, ಸಮಾನತೆ ಸಾರಿದ ಇವರಿಗೆ ಮುಂದಾಲೋಚನೆ ಹೆಚ್ಚಿತ್ತು. ಅವರ ‘ಕುಲ ಕುಲವೆಂದು ಹೊಡೆದಾಡದಿರಿ, ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ’ ಎಂಬ ಪದ್ಯ ಇಂದಿಗೂ ಪ್ರಸ್ತುತವಾಗಿದೆ. ನಾವ್ಯಾರೂ ಇಂತಹ ಜಾತಿಯಲ್ಲಿಯೇ ಹುಟ್ಟುತ್ತೇವೆಂದು ಅರ್ಜಿ ಹಾಕಿರುವುದಿಲ್ಲ ಎಂದರು.

ದೈವಭಕ್ತಿಯಿಂದ ಶ್ರೀಕೃಷ್ಣನನ್ನೇ ಒಲಿಸಿಕೊಂಡ ಕನಕದಾಸರ ಕೊಡುಗೆ ಅಪಾರವಾಗಿದ್ದು, ಅವರು ಕೇವಲ ಒಂದು ಜಾತಿಗೆ ಸೀಮಿತರಾದವರಲ್ಲ. ಮಾನ್ಯ ಮುಖ್ಯಮಂತ್ರಿಗಳು ಸಹ ಕಾಗಿನೆಲೆ ಕನಕಪೀಠದಲ್ಲಿ ಇದನ್ನೇ ಹೇಳಿದ್ದಾರೆ.

ಯಾವುದೇ ಜಾತಿ ಇರಲಿ ಅದು ಒಂದು ತಾಯಿಯಂತೆ. ನಾವು ಬೇರೆ ಜಾತಿಗಳನ್ನು ಗೌರವಿಸಿದರೆ ನಮ್ಮ ತಾಯಿಯನ್ನು ಗೌರವಿಸಿದಂತೆ. ಅತಿಯಾದ ಜಾತಿ-ಧರ್ಮ ಮಾಡಬಾರದು. ಕನಕದಾಸರು, ಬಸವಣ್ಣ, ನಾರಾಯಣಗುರು ಹೀಗೆ ಹಿರಿಯರ ಜೀವನಾದರ್ಶಗಳನ್ನು ಅಳವಡಿಸಿಕೊಂಡು ಕೆಲಸ ಮಾಡುತ್ತೇನೆ ಎಂದರು.

ಶಿಕ್ಷಣ ನೀಡುವುದು ದೇವರ ಕೆಲಸವಿದ್ದಂತೆ, ಎಲ್ಲರಿಗೂ ಸಮಾನವಾದ ಶಿಕ್ಷಣ ನೀಡುವುದು ನಮ್ಮ ಕರ್ತವ್ಯವಾಗಿದ್ದು, ಅಂತಹ ಶಿಕ್ಷಣವನ್ನು ನೀಡುತ್ತೇವೆ ಎಂದ ಅವರು ಶಿವಮೊಗ್ಗದಲ್ಲಿ ಕುರುಬರ ಸಮುದಾಯ ಭವನ ನಿರ್ಮಾಣಕ್ಕೆ ಸರ್ಕಾರದಿಂದ ಅನುದಾನ ತರಲು ಸಮಾಜದವರೇ ಆದ ನಗರಾಭಿವೃದ್ದಿ ಸಚಿವರು ಹಾಗೂ ತಾವು ಶ್ರಮಿಸುತ್ತೇವೆ. ಹಾಗೆಯೇ ಸಮಾಜದ ಮುಖಂಡರು ಸಹ ಪ್ರಯತ್ನಿಸಬೇಕೆಂದು ತಿಳಿಸಿದರು.

ಶಾಸಕರಾದ ಎಸ್.ಎನ್. ಚನ್ನಬಸಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ, ನಾಡು ಕಂಡ ಶ್ರೇಷ್ಟ ಸಂತ ಶ್ರೀಕನಕದಾಸರು. ಅವರು ಭಕ್ತಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದರು. ಭಗವಂತನನ್ನೇ ಸಾಕ್ಷಾತ್ಕರಿಸಿದ ಮಹಾನ್ ಭಕ್ತರು ಎಂಬುದಕ್ಕೆ ಉಡುಪಿಯ ಕನಕನ ಕಿಂಡಿಯೇ ಸಾಕ್ಷಿ. ಇವರು ಜಾತ್ಯಾತೀತ ಸಂತರಾಗಿದ್ದು ಜಾತಿ ಬದಲು ವ್ಯಕ್ತಿತ್ವದ ಬಗ್ಗೆ ಹೆಚ್ಚು ಯೋಚಿಸುತ್ತಿದ್ದರು. ಮೌಲ್ಯಗಳ ಮೂಲಕ ಶಕ್ತಿಯನ್ನು ಧಾರೆ ಎರೆಯುತ್ತಿದ್ದ ಇವರು ನುಡಿದಂತೆ ನಡೆದವರು. ಕೀರ್ತನೆಗಳನ್ನು ರಚಿಸಿ ತಾವೇ ಹಾಡುವ ಮೂಲಕ ಪ್ರತಿ ಮನಸ್ಸುಗಳನ್ನು ತಲುಪಿದ್ದಾರೆ ಎಂದು ಹೇಳಿದರು.

ಡಿವಿಎಸ್ ಪದವಿಪೂರ್ವ ಕಾಲೇಜಿನ ನಿವೃತ್ತ ಕನ್ನಡ ಉಪನ್ಯಾಸಕರಾದ ಕೆ.ಭಾಸ್ಕರ್ ಕನಕದಾಸರ ಜೀವನ, ತತ್ವ, ಕೀರ್ತನೆ, ಗಾಯನದ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಹಾಗೂ ವೇದಿಕೆಯಲ್ಲಿ ಶ್ರೀಕನಕದಾಸರ ಜೀವನಚರಿತ್ರೆ ಆಧರಿಸಿದ ಯಕ್ಷಗಾನ ಪ್ರದರ್ಶನ ನಡೆಯಿತು.

Madhu Bangarappa ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಪಿ ಮೈಲಾರಪ್ಪ, ಪಾಲಿಕೆ ಸದಸ್ಯರಾದ ಜ್ಞಾನೇಶ್ವರ್, ಸಮಾಜದ ಮುಖಂಡರಾದ ನರೇಂದ್ರಬಾಬು, ಎಸ್.ಕೆ.ಮರಿಯಪ್ಪ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್, ಜಿ.ಪಂ. ಸಿಇಓ ಲೋಖಂಡೆ ಸ್ನೇಹಲ್ ಸುಧಾಕರ್, ಪೋಲೀಸ್ ಅಧೀಕ್ಷಕ ಜಿ.ಕೆ.ಮಿಥುನ್ ಕುಮಾರ್, ಕನ್ನಡ ಮತ್ತು ಸಂಸ್ಕoತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್ ಹೆಚ್. ಸಮಾಜದ ಮುಖಂಡರು, ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...