Thursday, March 19, 2026
Thursday, March 19, 2026

Silkyara tunnel Incident ಸಿಲ್ಕ್ಯಾರಾ ಸುರಂಗದಿಂದ ಕಾರ್ಮಿಕರು ಪಾರು ಮುಂದೇನು?

Date:

Silkyara tunnel Incident ಒಟ್ಟು 41 ಕಾರ್ಮಿಕರ ಜೀವ ರಕ್ಷಣೆ ಉದ್ದೇಶದಿಂದ ಸಿಲ್ಕ್ಯಾರ ಸುರಂಗದ ಪರಿಸರದಲ್ಲಿ ಮಣ್ಣಿನ ಕೊರೆತ ಮಾಡಲಾಗಿತ್ತು.. ಆದ್ದರಿಂದ ಹಾಳಾಗಿರುವ ಸುರಂಗದ ಸ್ವರೂಪವನ್ನು ಮತ್ತೆ ಮೊದಲ ರೂಪಕ್ಕೆ ತರುವ ಪ್ರಯತ್ನ ಮಾಡಲಾಗುತ್ತದೆ. ಜೋಜೀರಾ ಟನಲ್ ಸಂಸ್ಥೆಯ ಮುಖ್ಯಸ್ಥ ಹರ್ಪಾಲ್ ಸಿಂಗ್ ಅವರ ಪ್ರಕಾರ ಸುರಂಗ ಕುಸಿತಕ್ಕೆ ನಾನಾ ಕಾರಣಗಳಿವೆ ಎಂದಿದ್ದಾರೆ.

ದೇಶದ ಎಲ್ಲಾ ಹೆದ್ದಾರಿಗಳು ಮತ್ತು ರೈಲ್ವೆ ಮಾರ್ಗದ ಸುರಂಗಗಳಲ್ಲಿ ತುರ್ತು ಬಿಡುಗಡೆಗೆ ಸಾಧ್ಯವಾಗುವ ಸುರಂಗ ಮಾರ್ಗಗಳನ್ನು ಸಮಾನಾಂತರವಾಗಿ ಯೋಜನೆ ಮಾಡಬೇಕಾಗಿದೆ. ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಸಿಲ್ಕ್ಯಾರ ಸುರಂಗ ಕುಸಿತದ ಬಗ್ಗೆ ಎದ್ದಿರುವ ಆರೋಪಗಳ ಬಗ್ಗೆ ಅದು ತಪ್ಪು ಮಾಹಿತಿ ಯಿಂದ ಕೂಡಿದ ಎಂದಿದ್ದಾರೆ… ಇಂತಹ ಯೋಜನೆಗಳನ್ನ ಕೈಗೊಳ್ಳುವಾಗ ಸರ್ಕಾರವು ಬಹಳ ಗಂಭೀರವಾಗಿ ಪರಿಸರ ಬಗ್ಗೆ ತೀವ್ರ ಗಮನ ಹರಿಸುತ್ತದೆ ಎಂದೂ ಕೂಡ ತಿಳಿಸಿದ್ದಾರೆ. ಸದ್ಯ ಸುರಂಗದ ಅವಶೇಷಗಳನ್ನು ಖಾಲಿ ಮಾಡುವ ಕೆಲಸ ತ್ವರಿತವಾಗಿ ನಡೆಯುತ್ತಿದೆ. ಪೂರೈಸಲು ಮೂರರಿಂದ ನಾಲ್ಕು ತಿಂಗಳು ಬೇಕಾಗಬಹುದು ಎಂದು ಹೇಳಿದ್ದಾರೆ.

Silkyara tunnel Incident 41 ಕಾರ್ಮಿಕರೆಲ್ಲರೂ ಈಗ ಆಸ್ಪತ್ರೆಯಿಂದ ಬಿಡುಗಡೆ ಪಡೆದಿದ್ದಾರೆ. ಎಲ್ಲರ ಆರೋಗ್ಯವು ದೃಢವಾಗಿದೆ ಎಂದು ವರದಿಯಾಗಿದೆ. ಕಾಮಗಾರಿ ಸಂಸ್ಥೆ ನವಯುಗದ ಪ್ರತಿನಿಧಿಗಳು ಎಲ್ಲಾ ಕಾರ್ಮಿಕರನ್ನು ಭೇಟಿ ಮಾಡಿ ಪ್ರತಿಯೊಬ್ಬರಿಗೂ ಎರಡು ಲಕ್ಷ ರೂಪಾಯಿ ಚೆಕ್ ನೀಡಿದೆ. ರಾಜ್ಯ ಸರ್ಕಾರವು ಪ್ರತಿ ಕಾರ್ಮಿಕರಿಗೂ ಒಂದು ಲಕ್ಷ ರೂಪಾಯಿ ನೀಡಿದೆ. ಇತಿಹಾಸದಲ್ಲಿ ಅತ್ಯಂತ ಕಷ್ಟಕರವಾದ ಪಾರುಗಾಣಿಕಾ ಕಾರ್ಯಚರಣೆಗಳಲ್ಲಿ ದೃಢಸಂಕಲ್ಪದಿಂದ ಕಾರ್ಯನಿರ್ವಹಿಸಿದ ತಂಡಗಳು ಹಾಗೂ ತಜ್ಞರಿಗೆ ನಾನು ಅಭಿನಂದಿಸುತ್ತೇನೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.–

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...