Monday, December 15, 2025
Monday, December 15, 2025

Forest Department ಆನೆ ದಾಳಿಗೆ ಬಲಿಯಾದ ಕುಟುಂಬಕ್ಕೆ ₹ 1 ಕೋಟಿ ಪರಿಹಾರ ಘೋಷಿಸಿ- ಹೇಮಂತ್ ಕುಮಾರ್

Date:

Forest Department ಕಾಫಿ ತೋಟಗಳಲ್ಲಿ ಬೀಡು ಬಿಟ್ಟಿರುವ ಪುಂಡಾನೆಗಳ ಹಾವಳಿಯಿಂದ ಕಾಫಿ ಬೆಳೆಗಾರರು ತತ್ತರಿಸಿ ಜೀವನ ಸಂಕಷ್ಟದ ಸ್ಥಿತಿಗೆ ತಂದೊಡ್ಡಿದೆ ಎಂದು ಎಎಪಿಯ ಕಾಫಿ ಮತ್ತು ತೆಂಗು ಬೆಳೆಗಾರರ ರಾಜ್ಯಾಧ್ಯಕ್ಷ ಹೇಮಂತ್ ಕುಮಾರ್ ತಿಳಿಸಿದ್ದಾರೆ.

ಈ ಸಂಬಂಧ ಅರಣ್ಯ ಇಲಾಖೆ ಸಚಿವ ಈಶ್ವರ್‌ಖಂಡ್ರೆ ಅವರಿಗೆ ಅಂಚೆ ಮೂಲಕ ಮನವಿ ಸಲ್ಲಿಸಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುವ ಅವರು ಚಿಕ್ಕಮಗಳೂರು, ಹಾಸನ, ಹಾಗೂ ಮಡಿಕೇರಿ ಜಿಲ್ಲೆಗಳಲ್ಲಿ ಪುಂಡಾನೆಗಳ ದಾಳಿಯಿಂದ ಕಾಫಿ ಬೆಳೆಯು ನೆಲಕಚ್ಚಿರುವ ಪರಿಣಾಮ ಬೆಳೆಗಾರರ ಜೀವನ ಸಂಕಷ್ಟಕ್ಕೆ ಸಿಲುಕಿದೆ ಎಂದು ಹೇಳಿದ್ದಾರೆ.

ಈಗಾಗಲೇ ಸುಮಾರು ಎಂಟು ಕೂಲಿಕಾರ್ಮಿಕರ ಬಲಿ ಪಡೆದಿರುವ ಕಾಡಾನೆಗಳನ್ನು ಸೆರೆಹಿಡಿಯಲು ಪ್ರಯ ತ್ನಿಸಿದರೂ ಸೆರೆಸಿಕ್ಕಿಲ್ಲ. ಕಾಡಂಚಿನ ತೋಟಗಳಲ್ಲಿ 50- 60ಆನೆಗಳು ಬೀಡುಬಿಟ್ಟಿದ್ದು ತಿಂಗಳಲ್ಲಿ 3-4 ಮಂದಿ ಕಾರ್ಮಿಕರನ್ನು ಬಲಿ ಪಡೆದಿರುವ ಪರಿಣಾಮ ಗ್ರಾಮಸ್ಥರು ಭಯಭೀತರಾಗಿದ್ದಾರೆ ಎಂದಿದ್ದಾರೆ.

ಇದರಿಂದ ಕಾಫಿ ಬೆಳೆಗಾರರು ಕೊಯ್ಯಲು ಪ್ರಾರಂಭಿಸಿದ್ದು ಕೆಲಸಕ್ಕಾಗಿ ಕಾರ್ಮಿಕರ ಬರದೇ ಹಿಂಜರಿಯು ತ್ತಿದ್ದಾರೆ. ಜೊತೆಗೆ ಅಕಾಲಿಕ ಮಳೆಯಿಂದ ಹಣ್ಣು ಉದುರಲಾಂಭಿಸಿದೆ. ಇನ್ನೂ 3-4 ದಿನಗಳಲ್ಲಿ ಕೊಯ್ಲು ಕೆಲಸ ಪೂರ್ಣಗೊಳ್ಳದಿದ್ದರೆ ಕಾಫಿ ಬೆಳೆಗಾರರಿಗೆ ತೀವ್ರ ಸಮಸ್ಯೆ ಅನುಭವಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

Forest Department ಒಂದು ಕಡೆ ಆನೆಗಳ ದಾಳಿಯಿಂದ ಕಾರ್ಮಿಕರು ಧಾವಿಸದೇ ಬೆಳೆ ನಾಶವಾದರೆ, ಇನ್ನೊಂದೆಡೆ ಬ್ಯಾಂಕಿನ ಅಧಿಕಾರಿಗಳು ಸಾಲ ತೀರಿಸಲು ನೋಟಿಸ್ ನೀಡಲಾಗುತ್ತಿರುವುದು ನೋವಿನ ಸಂಗತಿ. ಕೂಡಲೇ ಕೇಂದ್ರ ಮತ್ತು ರಾಜ್ಯ ಸರ್ಕಾರ ಮಧ್ಯಪ್ರವೇಶಿಸಿ ಕಾಫಿ ಬೆಳೆಗಾರರ ಸಂಕಷ್ಟಗಳ ಬಗ್ಗೆ ಪರಿಶೀಲನೆ ನಡೆಸಿ ಕಾಫಿ ಬೆಳೆಗಾರರ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಆನೆದಾಳಿ ದಾಳಿಯಿಂದ ಬಲಿಯಾದ ಕುಟುಂಬಕ್ಕೆ ತಲಾ ಒಂದು ಕೋಟಿ ಪರಿಹಾರ ಘೋಷಿಸಬೇಕು. ಪ್ರಾಣಿಗಳ ಹಾವಳಿ ತಡೆಯಬೇಕಾದರೆ ರೈಲ್ವೆ ಕಂಬಿ 10 ಅಡಿ ಎತ್ತರ ಅಳವಡಿಸದಿದ್ದಲ್ಲಿ ಎಎಪಿ ವತಿಯಿಂದ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...