Monday, February 2, 2026
Monday, February 2, 2026

Dinesh Gundu Rao ಡಯಾಲಿಸಿಸ್ ಕೇಂದ್ರಗಳನ್ನ ಸುವ್ಯವಸ್ಥೆಗೆ ತರುವತ್ತ ಗಮನ ಹರಿಸಿದ್ದೇನೆ- ಸಚಿವ ದಿನೇಶ್ ಗುಂಡೂರಾವ್

Date:

Dinesh Gundu Rao ಡಯಾಲಿಸಿಸ್ ಸಮಸ್ಯೆಗೆ ಹಿಂದಿನ ಸರ್ಕಾರದಲ್ಲಾದ ಎಡವಟ್ಟುಗಳು ಕಾರಣವೇ ಹೊರತು, ನಮ್ಮ ಸರ್ಕಾರದಿಂದ ಆಗಿದ್ದಲ್ಲ. ಸಾರ್ವಜನಿಕರಿಗೆ ತಪ್ಪು ಮಾಹಿತಿ ಹೋಗಬಾರದು ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.

ಡಯಾಲಿಸಿಸ್ ಕೇಂದ್ರಗಳನ್ನು ಸುವ್ಯವಸ್ಥೆಗೆ ತರುವತ್ತ ಹೆಚ್ಚಿನ ಗಮನ ಹರಿಸಿದ್ದೇನೆ. ಪಿಪಿಪಿ ಮಾದರಿಯಲ್ಲಿ ರಾಜ್ಯಾದ್ಯಂತ 800 ಏಕ ಬಳಕೆಯ ಡಯಾಲಿಸಿಸ್ ಯಂತ್ರಗಳನ್ನು ಅಳವಡಿಸಲು ಕ್ರಮ ವಹಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಸಿಬ್ಬಂದಿಗಳ ವೇತನ, ಹಾಗೂ ಇಎಸ್ಐ ಪಿಎಫ್ ಹಿಂದಿನ ಸರ್ಕಾರದ ಅವಧಿಯಲ್ಲಿ ಬಿಆರ್ ಎಸ್ ಮತ್ತು ಇಎಸ್ ಕೆಎಜಿ ಸಂಸ್ಥೆಯವರು ಬಾಕಿ ಉಳಿಸಿಕೊಂಡಿದ್ದಾರೆ. ಈ ಎರಡು ಸಂಸ್ಥೆಗಳ‌ ಬಗ್ಗೆ ಸಾರ್ವಜನಿಕರು, ಸಿಬ್ಬಂದಿಗಳಿಂದ ಸಾಕಷ್ಟು ದೂರುಗಳು ಬಂದಿದ್ದವು. ಜಿಲ್ಲಾ ಪ್ರವಾಸದ ವೇಳೆ ಹಲವು ಕಡೆ ಡಯಾಲಿಸಿಸ್ ಕೇಂದ್ರಗಳು ಸರಿಯಾಗಿ ನಿರ್ವಹಣೆ ಆಗದಿರುವುದನ್ನ ಗಮನಿಸಿದ್ದೆ ಎಂದಿದ್ದಾರೆ.

Dinesh Gundu Rao ಹೀಗಾಗಿ ಡಯಾಲಿಸಿಸ್ ಕೇಂದ್ರಗಳ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ, ನಾಲ್ಕು ವಿಭಾಗವಾರು ಟೆಂಡರ್ ಆಹ್ವಾನಿಸಿ ಬಹುತೇಕ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ ಎಂದಿದ್ದಾರೆ.

ಎಲ್ಲೆಡೆ ಸೊಂಕು ರಹಿತ ಏಕಬಳಕೆಯ ಡಯಾಲಿಸಿಸ್ ಯಂತ್ರಗಳು ಬರಲಿವೆ. ಉತ್ತಮ ಡಯಾಲಿಸಿಸ್ ಸೇವೆ ಜನಸಾಮಾನ್ಯರಿಗೆ ದೊರೆಯಲಿದೆ.‌ ವ್ಯವಸ್ಥೆ ಸರಿಪಡಿಸಲು ಸಿಬ್ಬಂದಿಗಳು ಸಹಕರಿಸಬೇಕೆಂದು ಕೋರಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...