Wednesday, December 17, 2025
Wednesday, December 17, 2025

Mahatma Gandhi Narega Scheme ಲಕ್ಕಮ್ಮನಹಳ್ಳಿ ಗ್ರಾಪಂ ವ್ಯಾಪ್ತಿಯ ಕಾಮಗಾರಿ ಕಳಪೆ

Date:

Mahatma Gandhi Narega Scheme ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಲಕ್ಕಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿ ಜೆಸಿಬಿ ಯಂತ್ರ ಬಳಕೆಯಿಂದ ನಿರ್ವಹಿಸಿರುವ ಕಾಮಗಾರಿಗಳು ಸಂಪೂರ್ಣ ಕಳಪೆಯಾಗಿದೆ ಎಂದು ಗ್ರಾಮಸ್ಥರು ಜಿಲ್ಲಾ ಪಂಚಾಯಿತಿ ಒಂಬಡ್ಸ್ಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.

ಈ ವೇಳೆ ಮಾತನಾಡಿದ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ತಮ್ಮೇಗೌಡ ಲಕ್ಯಾ ಹೋಬಳಿಯ ಲಕ್ಕಮನಹಳ್ಳಿ ಗ್ರಾ.ಪಂ. ವ್ಯಾಪ್ತಿಯಲ್ಲಿ 2023-24ನೇ ಸಾಲಿನ ಮಹಾತ್ಮಗಾಂಧಿ ನರೇಗಾ ಯೋಜನೆಯಡಿಯಲ್ಲಿ ಜೆಸಿಬಿ ಯಂತ್ರ ಬಳಸಿ ನಿರ್ವಹಿಸಿರುವ ಪರಿಣಾಮ ಸಂಪೂರ್ಣ ಕಾಮಗಾರಿ ಕಳಪೆಯಾಗಿದೆ ಎಂದು ಆರೋಪಿಸಿದ್ದಾರೆ.

ಲಕ್ಕಮ್ಮನಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಬೀರನಹಳ್ಳಿ ಗ್ರಾಮದ ಕೆಜಿ ಹಟ್ಟಿ ನಾಗನಕಟ್ಟೆ ಹನುಮಂತೇಗೌಡರ ಜಮೀನಿಂದ ಸಂತೆ ಮರದ ಹಳ್ಳದವರೆಗೆ, ಸಿರಬಡಿಗೆ ಗ್ರಾಮದ ಗುಂಡಿಯಿಂದ ಕಾಲೋನಿವರೆಗೆ, ಕುಬೇರನ ಜಮೀ ನಿಂದ ಕೋಳಿ ಫಾರಂವರೆಗೆ ಮತ್ತು ಭಾಸ್ಕರನ ಕಟ್ಟೆಯಿಂದ ರಾಮೇಗೌಡರ ಜಮೀನಿವರೆಗೆ ರಸ್ತೆ ಅಭಿವೃದ್ದಿಗೆ ಸರ್ಕಾರ ಲಕ್ಷಾಂತರ ರೂ. ವ್ಯಯಿಸಿದ್ದು ಕಾಮಗಾರಿ ಕಳಪೆಯಿಂದ ಕೂಡಿದೆ ಎಂದು ದೂರಿದ್ದಾರೆ.

Mahatma Gandhi Narega Scheme ಚಿಕ್ಕಮಗಳೂರು ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಕೂಲಿಕಾರ್ಮಿಕರ ಕೆಲಸವನ್ನು ಕೂಡಾ ಜೆಸಿಬಿ ಯಂತ್ರ ಬಳಸಿ ಕಾಮಗಾರಿ ನಿರ್ವಹಿಸಲಾಗಿದೆ. ಜೊತೆಗೆ ಅಕ್ರಮವಾಗಿ ಕೂಲಿಕಾರರ ಜಾಬ್‌ಕಾರ್ಡ್ ಹೆಸರಿನಲ್ಲಿ ವಸೂಲಿಗೆ ಮುಂ ದಾಗಿದ್ದು ಇದೀಗ ಅವರ ಖಾತೆಗೆ ಹಣವನ್ನು ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಕಾಮಗಾರಿಯನ್ನು ಪರಿಶೀಲನೆ ಗ್ರಾಮಸ್ಥರಿಗೆ ನ್ಯಾಯ ಒದಗಿಸಿ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...