Tuesday, December 16, 2025
Tuesday, December 16, 2025

H.D.Kumarswami ಅರ್ಜುನ ಸಲಗ ಇನ್ನು ನೆನಪಷ್ಟೆ- ಎಚ್.ಡಿ.ಕುಮಾರಸ್ವಾಮಿ

Date:

H.D.Kumarswami ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ ಕಾಡಾನೆಗಳ ಸೆರೆಗೆ ನಡೆಸಿದ ಕಾರ್ಯಾಚರಣೆ ವೇಳೆ ಒಂಟಿ ಸಲಗದ ದಾಳಿಗೆ ತುತ್ತಾಗಿ ಸಾಕಾನೆ ಅರ್ಜುನ ವೀರಮರಣ ಹೊಂದಿದ ಘಟನೆ ತಿಳಿದು ಬಹಳ ನೋವುಂಟಾಯಿತು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರು ಸಂತಾಪ ಸೂಚಿಸಿದ್ದಾರೆ . ದಸರಾ ಅಂಬಾರಿಯನ್ನು ಹೊತ್ತು ಸಾಗಿದ್ದ ಅರ್ಜುನ ಇನ್ನು ನೆನಪಷ್ಟೇ.ಸ್ಥಳಾಂತರ ಕಾರ್ಯಾಚರಣೆ ವೇಳೆ ಸಾಕಾನೆಗಳು-ಕಾಡಾನೆಗಳ ನಡುವಿನ ಭೀಕರ ಕಾಳಗದ ವೇಳೆ ಇತರೆ ಸಾಕಾನೆಗಳು ಪಲಾಯನ ಮಾಡಿದರೆ, ಅರ್ಜುನ ಮಾತ್ರ ಒಂಟಿ ಸಲಗದ ಜತೆ ವಿರೋಚಿತವಾಗಿ ಸೆಣಸಾಡಿತ್ತು. ಇಂಥ ವಿರೋಚಿತ ಆನೆ ಸಾವನ್ನಪ್ಪಿರುವುದು ಅತ್ಯಂತ ದುಃಖದ ಸಂಗತಿಯಾಗಿದೆ ಎಂದಿದ್ದಾರೆ.

H.D.Kumarswami ಕಾಡಾನೆಗಳನ್ನು ಸೆರೆ ಹಿಡಿಯುವಾಗ ತಮ್ಮ ಪ್ರಾಣ ರಕ್ಷಣೆಯ ಜತೆಗೆ ವನ್ಯಮೃಗಗಳ ಜೀವಕ್ಕೆ ಹಾನಿ ಆಗದಂತೆ ಅರಣ್ಯ ಸಿಬ್ಬಂದಿ ಮುನ್ನೆಚ್ಚರಿಕೆ ವಹಿಸಲಿ.
ಅರ್ಜುನನ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 16 & 17 ಶಿವಮೊಗ್ಗದ ರವೀಂದ್ರನಗರಕ್ಕೆ ವಿದ್ಯುತ್ ಸರಬರಾಜು ಇಲ್ಲ, ಮೆಸ್ಕಾಂ ಪ್ರಕಟಣೆ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯ ರವೀಂದ್ರ ನಗರದಲ್ಲಿ ಓವರ್...

Shamanur Shivashankarappa ವಿಧಾನ ಸಭಾ ಕಲಾಪ: ಅಗಲಿದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ

Shamanur Shivashankarappa ಎಲ್ಲ ರಾಜಕಾರಣಿಗಳೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದ ಶಾಮನೂರು ಶಿವಶಂಕರಪ್ಪ...

Dr. G.S. Shivarudrappa ರಾಷ್ಟ್ರಕವಿ ಜಿ.ಎಸ್.ಎಸ್. ರಚಿತ ಕವನಗಳ ಆನ್ ಲೈನ್ ಗಾಯನ ಸ್ಪರ್ಧೆ

Dr. G.S. Shivarudrappa ಶಿವಮೊಗ್ಗದಲ್ಲಿ ರಾಷ್ಟ್ರಕವಿ ಡಾ. ಜಿ.ಎಸ್ . ಶಿವರುದ್ರಪ್ಪ...

ಸಿಗಂದೂರು ಸೇತುವೆ: ಆತ್ಮಹತ್ಯೆಗೆ ಯತ್ನಿಸಿದಾತನ ಜೀವವುಳಿಸಿದ ಇಂಜಿನಿಯರ್ ಮಾತಿನ ಕೌಶಲ

ಮೈಸೂರಿನ ವ್ಯಕ್ತಿಯೊಬ್ಬರು ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಂಜಿನಿಯರ್ ಒಬ್ಬರ...