Monday, February 2, 2026
Monday, February 2, 2026

Dalit Sangarsha Samiti ವಕೀಲರು;& ಪೊಲೀಸ್ ಸಮಾಜದ ಆಧಾರ ಸ್ಥಂಭಗಳು

Date:

Dalit Sangarsha Samiti ವಕೀಲರು ಮತ್ತು ಪೊಲೀಸರ ಮಧ್ಯೆ ಉದ್ಬವಿಸಿರುವ ದ್ವೇಷಭಾವನೆಯ ಕಲಹವನ್ನು ಬಗೆಹರಿಸಿಕೊಂಡು ಜನಸಾಮಾನ್ಯರಿಗೆ ಪೂರಕವಾಗಿರಬೇಕು ಎಂದು ದಲಿತ ಸಂಘರ್ಷ ಸಮಿತಿ (ಸಾಗರ ಬಣ) ಮುಖಂಡರುಗಳು ಪೊಲೀಸ್ ವರಿಷ್ಟಾಧಿಕಾರಿಗಳನ್ನು ಆಗ್ರಹಿಸಿದರು.

ಈ ಸಂಬಂಧ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೃಷ್ಣಮೂರ್ತಿ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದ ದಸಂಸ ಮುಖಂಡರುಗಳು ಎರಡು ಆಧಾರಸ್ಥಂಬಗಳು ದ್ವೇಷಭಾವನೆ ಕಲಹ ಉಂಟಾಗದಂತೆ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಬಳಿಕ ಮಾತನಾಡಿದ ದಸಂಸ ಜಿಲ್ಲಾ ಸಂಚಾಲಕ ಬಾಲಕೃಷ್ಣ ಬಿಳೇಕಲ್ಲು ವಕೀಲ ಪ್ರೀತಮ್ ಮೇಲೆ ಪಿಎಸ್‌ಐ ಹೆಲ್ಮೆಟ್ ವಿಚಾರದಲ್ಲಿ ಹಲ್ಲೆಗೊಳಿಸಿರುವುದು ದುರಾದೃಷ್ಟಕರ ವಿಷಯವಾಗಿದೆ ಎಂದ ಅವರು ಸಮಾಜಕ್ಕೆ ಎರಡು ಆಧಾರ ಸ್ಥಂಭಗಳಾದ ಪೊಲೀಸರಂತೆ ವಕೀಲರು ಕೂಡಾ ಅಷ್ಟೇ ಮುಖ್ಯವಾಗಿದ್ದಾರೆ ಎಂದು ಹೇಳಿದರು.

ಈಗಾಗಲೇ ವಕೀಲ ಪ್ರೀತಮ್, ಪೊಲೀಸರ ಮೇಲೆ ಮೊಖದ್ದಾಮೆ ದಾಖಲಿಸಿರುವ ಪ್ರಕರಣಕ್ಕೆ ಅಮಾನತ್ತು ಮಾಡಲಾಗಿದೆ. ಇದರಿಂದಾಗಿ ವಕೀಲರು ಮತ್ತು ಪೊಲೀಸ್ ಇಲಾಖೆ ಮಧ್ಯೆ ದ್ವೇಷಭಾವನೆ ಉಂಟಾಗುವ ಸಂಭವ ವಿದ್ದು ಎರಡು ಇಲಾಖೆಗಳು ಭಿನ್ನಾಪ್ರಾಯಗಳ ಪರಿಣಾಮ ಜನಸಾಮಾನ್ಯರ ಬದುಕು ಅತಂತ್ರವಾಗವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಕೂಡಲೇ ಪೊಲೀಸ್ ಇಲಾಖೆ ಹಾಗೂ ವಕೀಲರ ಮುಖಸ್ಥರು ಸಭೆ ಕರೆದು ಮುಂದಿನ ದಿನಗಳಲ್ಲಿ ಯಾವು ದೇ ಭಿನ್ನಾಪ್ರಾಯ ಮರುಕಳಿಸದಂತೆ ಪರಸ್ಪರ ಸ್ನೇಹದಿಂದ ಹೊಂದಾಣ ಕೆ ಮಾಡಿಕೊಂಡು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Dalit Sangarsha Samiti ಈ ಸಂದರ್ಭದಲ್ಲಿ ದಸಂಸ ಜಿಲ್ಲಾ ಖಜಾಂಚಿ ಕೆ.ಕೆ.ಬಾಬು, ತಾಲ್ಲೂಕು ಸಂಚಾಲಕ ಯು.ಸಿ.ರಮೇಶ್, ಸಹ ಸಂಚಾಲಕ ಓಂಕಾರಪ್ಪ, ಸಂಘಟನಾ ಸಂಚಾಲಕ ಯಲಗುಡಿಗೆ ಬಸವರಾಜ್, ಕೊಪ್ಪ ತಾಲ್ಲೂಖು ಅಧ್ಯಕ್ಷ ರವಿ, ಮುಖಂಡರುಗಳಾದ ಪ್ರಸನ್ನ, ನಾಗರಾಜ್, ಸಿದ್ದಯ್ಯ, ಆರ್.ಶೇಖರ್, ಚಂದ್ರು ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...