Sunday, August 2, 2026
Sunday, August 2, 2026

Dalit Sangarsha Samiti ವಕೀಲರು;& ಪೊಲೀಸ್ ಸಮಾಜದ ಆಧಾರ ಸ್ಥಂಭಗಳು

Date:

Dalit Sangarsha Samiti ವಕೀಲರು ಮತ್ತು ಪೊಲೀಸರ ಮಧ್ಯೆ ಉದ್ಬವಿಸಿರುವ ದ್ವೇಷಭಾವನೆಯ ಕಲಹವನ್ನು ಬಗೆಹರಿಸಿಕೊಂಡು ಜನಸಾಮಾನ್ಯರಿಗೆ ಪೂರಕವಾಗಿರಬೇಕು ಎಂದು ದಲಿತ ಸಂಘರ್ಷ ಸಮಿತಿ (ಸಾಗರ ಬಣ) ಮುಖಂಡರುಗಳು ಪೊಲೀಸ್ ವರಿಷ್ಟಾಧಿಕಾರಿಗಳನ್ನು ಆಗ್ರಹಿಸಿದರು.

ಈ ಸಂಬಂಧ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೃಷ್ಣಮೂರ್ತಿ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದ ದಸಂಸ ಮುಖಂಡರುಗಳು ಎರಡು ಆಧಾರಸ್ಥಂಬಗಳು ದ್ವೇಷಭಾವನೆ ಕಲಹ ಉಂಟಾಗದಂತೆ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಬಳಿಕ ಮಾತನಾಡಿದ ದಸಂಸ ಜಿಲ್ಲಾ ಸಂಚಾಲಕ ಬಾಲಕೃಷ್ಣ ಬಿಳೇಕಲ್ಲು ವಕೀಲ ಪ್ರೀತಮ್ ಮೇಲೆ ಪಿಎಸ್‌ಐ ಹೆಲ್ಮೆಟ್ ವಿಚಾರದಲ್ಲಿ ಹಲ್ಲೆಗೊಳಿಸಿರುವುದು ದುರಾದೃಷ್ಟಕರ ವಿಷಯವಾಗಿದೆ ಎಂದ ಅವರು ಸಮಾಜಕ್ಕೆ ಎರಡು ಆಧಾರ ಸ್ಥಂಭಗಳಾದ ಪೊಲೀಸರಂತೆ ವಕೀಲರು ಕೂಡಾ ಅಷ್ಟೇ ಮುಖ್ಯವಾಗಿದ್ದಾರೆ ಎಂದು ಹೇಳಿದರು.

ಈಗಾಗಲೇ ವಕೀಲ ಪ್ರೀತಮ್, ಪೊಲೀಸರ ಮೇಲೆ ಮೊಖದ್ದಾಮೆ ದಾಖಲಿಸಿರುವ ಪ್ರಕರಣಕ್ಕೆ ಅಮಾನತ್ತು ಮಾಡಲಾಗಿದೆ. ಇದರಿಂದಾಗಿ ವಕೀಲರು ಮತ್ತು ಪೊಲೀಸ್ ಇಲಾಖೆ ಮಧ್ಯೆ ದ್ವೇಷಭಾವನೆ ಉಂಟಾಗುವ ಸಂಭವ ವಿದ್ದು ಎರಡು ಇಲಾಖೆಗಳು ಭಿನ್ನಾಪ್ರಾಯಗಳ ಪರಿಣಾಮ ಜನಸಾಮಾನ್ಯರ ಬದುಕು ಅತಂತ್ರವಾಗವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಕೂಡಲೇ ಪೊಲೀಸ್ ಇಲಾಖೆ ಹಾಗೂ ವಕೀಲರ ಮುಖಸ್ಥರು ಸಭೆ ಕರೆದು ಮುಂದಿನ ದಿನಗಳಲ್ಲಿ ಯಾವು ದೇ ಭಿನ್ನಾಪ್ರಾಯ ಮರುಕಳಿಸದಂತೆ ಪರಸ್ಪರ ಸ್ನೇಹದಿಂದ ಹೊಂದಾಣ ಕೆ ಮಾಡಿಕೊಂಡು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Dalit Sangarsha Samiti ಈ ಸಂದರ್ಭದಲ್ಲಿ ದಸಂಸ ಜಿಲ್ಲಾ ಖಜಾಂಚಿ ಕೆ.ಕೆ.ಬಾಬು, ತಾಲ್ಲೂಕು ಸಂಚಾಲಕ ಯು.ಸಿ.ರಮೇಶ್, ಸಹ ಸಂಚಾಲಕ ಓಂಕಾರಪ್ಪ, ಸಂಘಟನಾ ಸಂಚಾಲಕ ಯಲಗುಡಿಗೆ ಬಸವರಾಜ್, ಕೊಪ್ಪ ತಾಲ್ಲೂಖು ಅಧ್ಯಕ್ಷ ರವಿ, ಮುಖಂಡರುಗಳಾದ ಪ್ರಸನ್ನ, ನಾಗರಾಜ್, ಸಿದ್ದಯ್ಯ, ಆರ್.ಶೇಖರ್, ಚಂದ್ರು ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...