Friday, April 3, 2026
Friday, April 3, 2026

Elephant Arjuna ಆನೆ ಅರ್ಜುನ ಸಾವಿನ ಬಗ್ಗೆ ತನಿಖೆ ನಡೆಸಲು ಒತ್ತಾಯ

Date:

Elephant Arjuna ಮೈಸೂರು ದಸರಾದಲ್ಲಿ ಅಂಬಾರಿ ಹೊತ್ತು ನಾಡಿನ ಗಮನಸೆಳೆದಿದ್ದ ಅರ್ಜುನ ಆನೆ ಮೃತಪಟ್ಟಿದ್ದು, ಸಾವಿನ ಹಿಂದಿನ ರಹಸ್ಯವನ್ನು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕನ್ನಡಸೇನೆ ಮುಖಂಡರುಗಳು ಜಿಲ್ಲಾಡಳಿತವನ್ನು ಒತ್ತಾಯಿಸಿದರು.

ಈ ಸಂಬoಧ ಚಿಕ್ಕಮಗಳೂರು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದ ಕನ್ನಡಸೇನೆ ಮುಖಂಡರುಗಳು ಗುಂಡೇಟಿನಿoದ ಸಾವಪ್ಪಿರುವ ಅರ್ಜುನ ಆನೆಯ ಪ್ರಕರಣವನ್ನು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಬಳಿಕ ಮಾತನಾಡಿದ ಸೇನೆಯ ಜಿಲ್ಲಾಧ್ಯಕ್ಷ ಪಿ.ಸಿ.ರಾಜೇಗೌಡ ಮೈಸೂರಿನ ಇತಿಹಾಸದಲ್ಲೇ ಸುಮಾರು ಎಂಟು ಬಾರಿ ಅಂಬಾರಿಹೊತ್ತು ದಾಖಲಿಸಿದ ಕೀರ್ತಿ ಅರ್ಜುನ ಆನೆಗೆ ಸಲ್ಲಲಿದೆ. ಆದರೆ ಕಾಡಾನೆ ಹಿಡಿಯುವ ಸಂದರ್ಭದಲ್ಲಿ ಅರ್ಜುನನ ಕಾಲಿಗೆ ಗುಂಡೇಟು ನೀಡಿ ಸಾವಿಗೆ ಕಾರಣರಾಗಿರುವ ಕರ‍್ಯಾಚರಣೆಯ ಪಡೆಯ ತಪ್ಪಿ ತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.

ಅರ್ಜುನ ಆನೆಯ ಸಾವು ಇಡೀ ರಾಜ್ಯಾದ್ಯಂತ ಬಹಳಷ್ಟು ನೋವುಂಟು ಮಾಡಿರುವ ಜೊತೆಗೆ ತುಂಬಾನೇ ನಷ್ಟವಾಗಿದೆ ಎಂದ ಅವರು ಇದಕ್ಕೆಲ್ಲಾ ಮೂಲ ಕಾರಣರಾಗಿರುವ ಕಾರ್ಯಾಚರಣೆ ಪಡೆಯವರನ್ನು ಕೆಲಸದಿಂದ ವಜಾಗೊಳಿಸಿ ಘೋರ ಶಿಕ್ಷೆಗೆ ಗುರಿಪಡಿಸಬೇಕು ಎಂದರು.

ಮುoದಿನ ದಿನಗಳಲ್ಲಿ ಮೈಸೂರಿನ ದಸರಾ ಆನೆಗಳ ರಕ್ಷಣೆಗೆ ರಾಜ್ಯಸರ್ಕಾರ ವಿಶೇಷ ಕ್ರಮ ಕೈಗೊಳ್ಳಬೇಕು. ನಿರ್ಲಕ್ಷ್ಯ ಧೋರಣೆ ವಹಿಸಿದರೆ ಕನ್ನಡಸೇನೆಯಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

Elephant Arjuna ಈ ಸಂದರ್ಭದಲ್ಲಿ ಕನ್ನಡಸೇನೆ ಆಟೋ ಘಟಕದ ಅದ್ಯಕ್ಷ ಜಯಪ್ರಕಾಶ್, ಕಾರ್ಯದರ್ಶಿಗಳಾದ ಹರೀಶ್ ಶಂಕರ್, ಅಶೋಕ್, ಸಹ ಕಾರ್ಯದರ್ಶಿ ಪಾಲಾಕ್ಷಿ, ಮುಖಂಡರುಗಳಾದ ಜೆ.ಡಿ.ಲೋಕೇಶ್, ಶಾಕೀಬ್, ಶಿವಕು ಮಾರ್ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಶ್ರೀಬಿಷ್ಟಪ್ಪಯ್ಯನವರು

ಲೇ: ಪ್ರಸಾದ್ ಶ್ರೀವತ್ಸ. Klive Special Article ಭಾರತವೆಂದರೆ ಅದು ಕೇವಲ ದೇಶವಲ್ಲ ಅದೆಷ್ಟೋ...

B.Y. Vijayendra ದಾವಣಗೆರೆ ಚುನಾವಣೆ: ಬಿಜೆಪಿ ಅಭ್ಯರ್ಥಿಗೇ ಗೆಲುವು- ಬಿ.ವೈ.ವಿಜಯೇಂದ್ರ.

B.Y. Vijayendra  ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಾಧ್ಯಮ ಮಿತ್ರರೊಂದಿಗೆ...

Drinking water supply ಗಮನಿಸಿ!.ಏಪ್ರಿಲ್ 4 & 5 ರಂದುಶಿವಮೊಗ್ಗ ನಗರದಲ್ಲಿ ಹಲವೆಡೆ ನೀರು ಸರಬರಾಜು ವ್ಯತ್ಯಯ.

Drinking water supply ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ಮಾಡುವ...

Hanuman Jayanti ಪಾರಂಪರಿಕ ಶ್ರದ್ದಾಭಕ್ತಿಗಳಿಂದ ದಾವಣಗೆರೆಯಲ್ಲಿ ಹನುಮ ಜಯಂತಿ

Hanuman Jayanti  ದಾವಣಗೆರೆ.ಏ.2. ನಗರದ ಜಯದೇವ ವೃತ್ತದಲ್ಲಿರುವ ಅಧ್ಯಾತ್ಮ ಮಂದಿರದಲ್ಲಿ ಶ್ರೀ...