Saturday, May 23, 2026
Saturday, May 23, 2026

Elephant Arjuna ಆನೆ ಅರ್ಜುನ ಸಾವಿನ ಬಗ್ಗೆ ತನಿಖೆ ನಡೆಸಲು ಒತ್ತಾಯ

Date:

Elephant Arjuna ಮೈಸೂರು ದಸರಾದಲ್ಲಿ ಅಂಬಾರಿ ಹೊತ್ತು ನಾಡಿನ ಗಮನಸೆಳೆದಿದ್ದ ಅರ್ಜುನ ಆನೆ ಮೃತಪಟ್ಟಿದ್ದು, ಸಾವಿನ ಹಿಂದಿನ ರಹಸ್ಯವನ್ನು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕನ್ನಡಸೇನೆ ಮುಖಂಡರುಗಳು ಜಿಲ್ಲಾಡಳಿತವನ್ನು ಒತ್ತಾಯಿಸಿದರು.

ಈ ಸಂಬoಧ ಚಿಕ್ಕಮಗಳೂರು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದ ಕನ್ನಡಸೇನೆ ಮುಖಂಡರುಗಳು ಗುಂಡೇಟಿನಿoದ ಸಾವಪ್ಪಿರುವ ಅರ್ಜುನ ಆನೆಯ ಪ್ರಕರಣವನ್ನು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಬಳಿಕ ಮಾತನಾಡಿದ ಸೇನೆಯ ಜಿಲ್ಲಾಧ್ಯಕ್ಷ ಪಿ.ಸಿ.ರಾಜೇಗೌಡ ಮೈಸೂರಿನ ಇತಿಹಾಸದಲ್ಲೇ ಸುಮಾರು ಎಂಟು ಬಾರಿ ಅಂಬಾರಿಹೊತ್ತು ದಾಖಲಿಸಿದ ಕೀರ್ತಿ ಅರ್ಜುನ ಆನೆಗೆ ಸಲ್ಲಲಿದೆ. ಆದರೆ ಕಾಡಾನೆ ಹಿಡಿಯುವ ಸಂದರ್ಭದಲ್ಲಿ ಅರ್ಜುನನ ಕಾಲಿಗೆ ಗುಂಡೇಟು ನೀಡಿ ಸಾವಿಗೆ ಕಾರಣರಾಗಿರುವ ಕರ‍್ಯಾಚರಣೆಯ ಪಡೆಯ ತಪ್ಪಿ ತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.

ಅರ್ಜುನ ಆನೆಯ ಸಾವು ಇಡೀ ರಾಜ್ಯಾದ್ಯಂತ ಬಹಳಷ್ಟು ನೋವುಂಟು ಮಾಡಿರುವ ಜೊತೆಗೆ ತುಂಬಾನೇ ನಷ್ಟವಾಗಿದೆ ಎಂದ ಅವರು ಇದಕ್ಕೆಲ್ಲಾ ಮೂಲ ಕಾರಣರಾಗಿರುವ ಕಾರ್ಯಾಚರಣೆ ಪಡೆಯವರನ್ನು ಕೆಲಸದಿಂದ ವಜಾಗೊಳಿಸಿ ಘೋರ ಶಿಕ್ಷೆಗೆ ಗುರಿಪಡಿಸಬೇಕು ಎಂದರು.

ಮುoದಿನ ದಿನಗಳಲ್ಲಿ ಮೈಸೂರಿನ ದಸರಾ ಆನೆಗಳ ರಕ್ಷಣೆಗೆ ರಾಜ್ಯಸರ್ಕಾರ ವಿಶೇಷ ಕ್ರಮ ಕೈಗೊಳ್ಳಬೇಕು. ನಿರ್ಲಕ್ಷ್ಯ ಧೋರಣೆ ವಹಿಸಿದರೆ ಕನ್ನಡಸೇನೆಯಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

Elephant Arjuna ಈ ಸಂದರ್ಭದಲ್ಲಿ ಕನ್ನಡಸೇನೆ ಆಟೋ ಘಟಕದ ಅದ್ಯಕ್ಷ ಜಯಪ್ರಕಾಶ್, ಕಾರ್ಯದರ್ಶಿಗಳಾದ ಹರೀಶ್ ಶಂಕರ್, ಅಶೋಕ್, ಸಹ ಕಾರ್ಯದರ್ಶಿ ಪಾಲಾಕ್ಷಿ, ಮುಖಂಡರುಗಳಾದ ಜೆ.ಡಿ.ಲೋಕೇಶ್, ಶಾಕೀಬ್, ಶಿವಕು ಮಾರ್ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ತಾತ್ಕಾಲಿಕ ನೇರ ನೇಮಕಾತಿ ಮೂಲಕಖಾಯಂ ಶಿಕ್ಷಕರ ನೇಮಕಾತಿವರೆಗೆ ಅತಿಥಿ ಶಿಕ್ಷಕರ ನೇಮಕ

Shimoga News 2026-27ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು...

Klive Special Article ನೇಪಾಳದಲ್ಲಿ ಶೃಂಗೇರಿ ಜಗದ್ಗುರುಗಳು.

ವಿಶೇಷ ವರದಿ: ಪ್ರಭಾಕರ ಕಾರಂತ Klive Special Article ಜಗದ್ಗುರು ಶ್ರೀ ವಿಧುಶೇಖರ ಭಾರತೀ...

Eshwara Khandre ಶ್ರಾವ್ಯಾ ಸಾಗರ್ ನಿರ್ಮಾಣದ ಸಾಕ್ಷ್ಯಚಿತ್ರಕ್ಕೆ ಜೀವವೈವಿಧ್ಯ ಪ್ರಶಸ್ತಿ.

Eshwara Khandre ಕರ್ನಾಟಕ ಸರ್ಕಾರದ ಜೀವವೈವಿದ್ಯ ಮಂಡಳಿ ಕೊಡಮಾಡುವ ೨೦೨೫-೨೬ನೇ ಸಾಲಿನ...