Monday, December 15, 2025
Monday, December 15, 2025

B. Y. Raghavendra ಈ ಆಶೀರ್ವಾದ- ಪುರಸ್ಕಾರ ನನ್ನನ್ನು ಇನ್ನಷ್ಟು ವಿನೀತನನ್ನಾಗಿ ಮಾಡಿದೆ- ಸಂಸದ ಬಿ.ವೈ.ರಾಘವೇಂದ್ರ

Date:

B. Y. Raghavendra ಮಲೆನಾಡು ವೀರಶೈವ ಲಿಂಗಾಯತ ಮಠಾಧೀಶರ ಪರಿಷತ್ ವತಿಯಿಂದ ಶಿವಮೊಗ್ಗದ ಸರ್ಜಿ ಕನ್ವೆನ್ಷನ್ ಹಾಲ್ ನಲ್ಲಿ ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ ಅವರಿಗೆ ಅಭಿನಂದನಾ ಸಮಾರಂಭವನ್ನು ಆಯೋಜಿಸಲಾಗಿತ್ತು.

ಈ ಸಮಾರಂಭದಲ್ಲಿ ಬಿ.ವೈ ರಾಘವೇಂದ್ರ ಅವರ ದಂಪತಿಯನ್ನು ಸನ್ಮಾನಿಸಲಾಯಿತು. ನಂತರ ಮಾತನಾಡಿದ ಅವರು,
ನನಗೆ ನಿಜವಾಗಿಯೂ ಗೊತ್ತಿಲ್ಲ. ನಾನು ಇಂಥದ್ದೊಂದು ಗೌರವ ಪಡೆಯುವುದಕ್ಕೆ ಎಷ್ಟು ಪುಣ್ಯ ಮಾಡಿದ್ದೆನೋ ಅನ್ನುವುದು.
ನನ್ನ ಪಾಲಿಗೆ ಸದಾ ಪೂಜನೀಯರುಗಳಾದ ಜಗದ್ಗುರುಗಳ ಸನ್ನಿಧಿಯಲ್ಲಿ ನನಗೆ ನೆನ್ನೆ ಸಿಕ್ಕ ಆಶೀರ್ವಾದ-ಪುರಸ್ಕಾರ ನನ್ನನ್ನು ಇನ್ನಷ್ಟು ವಿನೀತನನ್ನಾಗಿ, ಹೊಣೆಗಾರನನ್ನಾಗಿ ಮಾಡಿದೆ. ಜೊತೆಗೆ, ಇಂಥಾ ಪೂಜನೀಯರ ಶ್ರೀರಕ್ಷೆ ನನಗೆ ದೊರೆತಿದೆಯೆಂಬ ಭಾವವೇ ನನ್ನಲ್ಲಿ ಇನ್ನಷ್ಟು ಆತ್ಮ ವಿಶ್ವಾಸ ತುಂಬಿದೆ, ಸಾರ್ವಜನಿಕ ಬದುಕಿನಲ್ಲಿ ನಾನು ನಡೆಯುತ್ತಿರುವ ದಾರಿ ಸರಿಯಾಗಿದೆ ಅನ್ನುವ ನಂಬಿಕೆ ಕೊಟ್ಟಿದೆ ಎಂದು ಹೇಳಿದರು.

B. Y. Raghavendra ನನ್ನನ್ನು ಹರಸಿದ ಎಲ್ಲ ಪೂಜನೀಯರಿಗೂ ನನ್ನ ತುಂಬು ಹೃದಯದ ಕೃತಜ್ಞತೆಗಳು. ಅವರ ಆಶೀರ್ವಾದವನ್ನು ಸದಾ ಸತ್ಕಾರ್ಯಗಳಿಗೆ ಬಳಸಿ ಸಮಾಜದ ಒಳಿತಿಗಾಗಿ ಶ್ರಮಿಸುತ್ತೇನೆ ಅನ್ನುವ ಭರವಸೆ ನನ್ನದು ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...