Thursday, June 18, 2026
Thursday, June 18, 2026

Akhila Bharath Veerashaiva Mahasabha ದಾವಣಗೆರೆಯಲ್ಲಿ ಅ.ಭಾ.ಲಿಂಗಾಯಿತ ಮಹಾಸಭಾದ24ನೇ ಮಹಾ ಅಧಿವೇಶನ

Date:

Akhila Bharath Veerashaiva Mahasabha ವೀರಶೈವ ಲಿಂಗಾಯಿತ ಸಮಾಜವನ್ನು ಓಬಿಸಿ ಪಟ್ಟಿಗೆ ಸೇರಿಸುವ ಸಲುವಾಗಿ ದಾವಣಗೆರೆಯಲ್ಲಿ ಅಖಿಲ ಭಾರತ ಲಿಂಗಾಯಿತ ಮಹಾಸಭಾದ 24ನೇ ಮಹಾ ಅಧಿವೇಶನಕ್ಕೆ ಜಿಲ್ಲೆಯ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೇಡಿಕೆ ಈಡೇರಿಸಲು ಕೈಜೋಡಿಸಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಹೆಚ್.ಎಂ.ಲೋಕೇಶ್ ಆಗ್ರಹಿಸಿದರು.

ಚಿಕ್ಕಮಗಳೂರು ನಗರದ ರೇಣುಕಾಚಾರ್ಯ ಕಲ್ಯಾಣ ಮಂಟಪದ ಕಚೇರಿಯಲ್ಲಿ ಭಾನುವಾರ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ದಾವಣಗೆರೆಯ ಎಂಬಿಎ ಕಾಲೇಜಿನಲ್ಲಿ ಎರಡು ದಿನಗಳ ನಡೆಯುವ ಅಧಿವೇಶನದಲ್ಲಿ ಜನಾಂಗದ ಮೂಲ ಬೇಡಿಕೆಗಳಾದ ಓಬಿಸಿ ಪಟ್ಟಿಗೆ ಸೇರ್ಪಡೆ ಹಾಗೂ ಜಾತಿ ಸಮೀಕ್ಷೆ ಅವ್ಶೆಜ್ಞಾನಿಕವಾಗಿರುವ ಬಗ್ಗೆ ಹಕ್ಕೋತ್ತಾಯಿಸಲು ಧಾರ್ಮಿಕ-ಸಾಮಾಜಿಕ, ಶೈಕ್ಷಣ ಕವಾಗಿ ಸಂಘಟಿಸುವ ಉದ್ದೇಶದಿಂದ ಅಧಿವೇಶನ ನಡೆಯ ಲಿದೆ ಎಂದು ತಿಳಿಸಿದರು.

ಈ ಮಹಾಅಧಿವೇಶನದಲ್ಲಿ ಚಿಕ್ಕಮಗಳೂರು, ಚಿತ್ರದುರ್ಗ, ಬಳ್ಳಾರಿ, ಹಾವೇರಿ ಸೇರಿದಂತೆ ಹಲವಾರು ಜಿಲ್ಲೆ ಗಳಿಂದ ಜನಾಂಗದವರು ಭಾಗವಹಿಸಲಿದ್ದಾರೆ. ಜೊತೆಗೆ ನಾಡಿನ ಹಿರಿಯ ಮಠಾಧೀಶರು, ರಾಜಕೀಯ ಮುಖಂಡರು, ಸಮಾಜದ ಗಣ್ಯರು, ಸಾಹಿತಿಗಳು, ಕಲಾವಿದರು ಆಗಮಿಸಲಿದ್ದಾರೆ ಎಂದರು.

ಎರಡು ದಿನಗಳ ಕಾಲ ನಡೆಯುವ ಈ ಸಮಾವೇಶದಲ್ಲಿ ಸಾಂಸ್ಕೃತಿಕ ಪರಂಪರೆಗಳ ಗೋಷ್ಟಿ, ಮಹಾಸಭೆಯ ಇತಿಹಾಸ, ಕಾರ್ಯಚಟುವಟಿಕೆಗಳನ್ನು ಪರಿಚಯಿಸುವ ವಸ್ತು ಮತ್ತು ಪುಸ್ತಕ ಪ್ರದರ್ಶನ ಹಾಗೂ ಕೈಗಾರಿಕೆ ಮತ್ತು ವಾಣ ಜ್ಯ, ಕೃಷಿ ಸಂಬಂಧಿತ ಪ್ರದರ್ಶನವಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಚಿಕ್ಕಮಗಳೂರು ವೀರಶೈವ-ಲಿಂಗಾಯಿತ ಬಂಧುಗಳು ಪ್ರತಿನಿಧಿಗಳಾಗಿ ಭಾಗವಹಿಸಬೇಕು ಎಂದು ಒತ್ತಾಯಿಸಿದ್ದಾರೆ.

Akhila Bharath Veerashaiva Mahasabha ಈ ಸಂದರ್ಭದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಪಿ.ಚಂದ್ರಮೌಳಿ, ಮೂಡಿಗೆರೆ ತಾಲ್ಲೂಕು ಅಧ್ಯಕ್ಷ ಓಂಕಾರ, ವೀರಶೈವ ಲಿಂಗಾಯಿತ ಸಮಾಜದ ಮುಖಂಡರಾದ ಹೆಚ್.ಎಂ.ರೇಣುಕಾರಾಧ್ಯ, ಪೂಣೇಶ್, ಜಿ.ವೀರೇಶ್, ಪ್ರಸಾದ್ ಸಿರಿಮನೆ, ಜಯಪ್ರಕಾಶ್, ಅಶೋಕ್‌ಕುಮಾರ್, ಮಂಜುನಾಥಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...