CM Siddharamaih ರಾಜ್ಯದ 223 ತಾಲೂಕುಗಳನ್ನು ಬರಪೀಡಿತ ಎಂದು ಈಗಾಗಲೇ ಘೋಷಣೆ ಮಾಡಿದ್ದು, ಪರಿಹಾರ ಕಾರ್ಯಗಳು ಸಮರೋಪಾದಿಯಲ್ಲಿ ಸಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ.
CM Siddharamaih ಮಳೆ ಕೊರತೆಯಿಂದಾಗಿ ಈ ಬಾರಿ ಒಟ್ಟು 48 ಲಕ್ಷ ಹೆಕ್ಟೇರ್ ಬೆಳೆ ನಷ್ಟವಾಗಿದೆ. ಇದರಿಂದಾಗಿ ಲಕ್ಷಾಂತರ ರೈತರು ಆರ್ಥಿಕ ಸಮಸ್ಯೆಗೆ ತುತ್ತಾಗಿದ್ದಾರೆ. ಕೇಂದ್ರದ ನೆರವಿಗೆ ಕಾಯುತ್ತಾ ಕೂರದೆ ರೈತರ ಕಷ್ಟಕ್ಕೆ ತಕ್ಷಣ ನೆರವಿಗೆ ಧಾವಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ರೂ.2,000 ಮೊದಲ ಕಂತಿನ ಬೆಳೆನಷ್ಟ ಪರಿಹಾರಧನವನ್ನು ಈ ವಾರವೇ ರೈತರ ಖಾತೆಗಳಿಗೆ ನೇರ ವರ್ಗಾವಣೆ ಮಾಡಲಿದ್ದು, ಚಳ್ಳಕೆರೆ ತಾಲೂಕಿನಿಂದ ಚಾಲನೆ ನೀಡಲಾಗುವುದು ಎಂದಿದ್ದಾರೆ.
