Monday, December 15, 2025
Monday, December 15, 2025

National Farmer’s Day ಅನ್ನದಾತನಿಗೆ ಕೃತಜ್ಞತೆ ಹೇಳಲು ರೈತದಿನ ಆಚರಿಸಲು ಒತ್ತಾಯ

Date:

National Farmer’s Day ನಾಡಿಗೆ ಅನ್ನ ನೀಡುವ ರೈತರಿಗೆ ಕೃತಜ್ಞತೆ ಹೇಳಲು ಸರ್ಕಾರ ‘ರೈತ ದಿನ’ ಆಚರಿಸುವ ನಿರ್ಧಾರ ಕೈಗೊಳ್ಳಲಿ ಎಂದು ಸಾರ್ವಜನಿಕ ಹಿತರಕ್ಷಣಾ ಹೋರಾಟ ಸಮಿತಿ ಅಧ್ಯಕ್ಷ ಜೆ.ಎಸ್. ಚಿದಾನಂದ ಗೌಡ ಆಗ್ರಹಿಸಿದರು.

ಸೊರಬಪಟ್ಟಣದ ತಾಲೂಕು ಕಚೇರಿ ಮುಂಭಾಗ ಸರ್ಕಾರದಿಂದ ರಾಷ್ಟ್ರೀಯ ರೈತ ದಿನಾಚರಣೆಯನ್ನು ಅಧಿಕೃತವಾಗಿ ಆಚರಿಸುವಂತೆ ಆಗ್ರಹಿಸಿ ಸಾರ್ವಜನಿಕ ಹಿತರಕ್ಷಣಾ ಹೋರಾಟ ಸಮಿತಿ ವತಿಯಿಂದ ಮಂಗಳವಾರ ಹಮ್ಮಿಕೊಂಡ ಪ್ರತಿಭಟನೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.

ನಾನಾ ಸಂತರು, ಮಹಾಪುರುಷರ ಜಯಂತಿಯಂತೆ ನಾಡಿಗೆ ಅನ್ನ ನೀಡುವ ಕೃಷಿಕರನ್ನು ಗೌರವಿಸಲು ರೈತ ದಿನ ಆಚರಿಸದಿರುವುದು ವಿಷಾದನೀಯ. ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದಿಂದ ರೈತದಿನಾಚರಣೆಯನ್ನು ಅಧಿಕೃತವಾಗಿ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದ ಅವರು, ಈಗಾಗಲೇ ಸಮಿತಿಯಿಂದ ಕಳೆದ 2016ರಿಂದಲೂ ರೈತ ದಿನಾಚರಣೆ ಆಚರಿಸುತ್ತಾ ಮನವಿ ಸಲ್ಲಿಸುತ್ತಲೆ ಬರಲಾಗುತ್ತಿದೆ.

ಸರ್ಕಾರದಿಂದಲೇ ರೈತ ದಿನ ಆಚರಿಸಿ ಈ ಮೂಲಕ ವಿಶೇಷ ಯೋಜನೆಗಳನ್ನು ಅಂದು ಸರ್ಕಾರ ವಿಶೇಷ ಯೋಜನೆಗಳನ್ನು ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.

National Farmer’s Day ಪಟ್ಟಣದ ಪುರಸಭೆ ಮುಂಭಾಗದ ವೃತ್ತ ಸೇರಿದಂತೆ ಪ್ರತಿ ತಾಲೂಕು ಕೇಂದ್ರಗಳಲ್ಲಿ ರೈತ ವೃತ್ತ ಸ್ಥಾಪಿಸಬೇಕು. ರೈತ ದಿನಾಚರಣೆಯಂದು ಉತ್ತಮ ರೈತರನ್ನು ಗೌರವಿಸಬೇಕು. ಪ್ರತಿ ಗ್ರಾಮಗಳಲ್ಲಿ ಎರಡು ಎಕರೆ ಒಕ್ಕಲು ಕಣ ನಿರ್ಮಿಸಬೇಕು. ಗೋಮಾಳಗಳನ್ನು ಜಾನುವಾರುಗಳಿಗೆ ಮೀಸಲಿರಿಸಬೇಕು.

ಅಧಿವೇಶನದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳದಿದ್ದರೆ ಡಿ. 15ರಿಂದ ಪುರಸಭೆ ಮುಂಭಾಗ ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ ತಿಳಿಸಿದರು.

ಪ್ರತಿಭಟನೆಯಲ್ಲಿ ಸಮಿತಿಯ ಗೌರವಾಧ್ಯಕ್ಷ ಕೆ. ಪ್ರಭಾಕರ ರಾಯ್ಕರ್, ಉಪಾಧ್ಯಕ್ಷ ಕೆ.ವಿ. ದತ್ತಾತ್ರೇಯ, ಕಾರ್ಯದರ್ಶಿ ಶರತ್ ಸ್ವಾಮಿ, ಪ್ರಮುಖರಾದ ಶಿವಯೋಗಿಸ್ವಾಮಿ ಸುತ್ತೂರುಮಠ, ಶಿವಾನಂದ, ಹನುಮಂತ, ರಮೇಶ್, ರಾಜು ಎಲ್. ಶೇಟ್, ಲೋಹಿತ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...