Monday, December 15, 2025
Monday, December 15, 2025

Scheduled Caste and Scheduled Tribe Community ಆಲ್ದೂರಿಗೆ ಸ್ಮಶಾನ ಜಾಗ ಮೀಸಲಿಗೆ ಗ್ರಾಮಸ್ಥರ ಒತ್ತಾಯ

Date:

Scheduled Caste and Scheduled Tribe Community ಪರಿಶಿಷ್ಟ ಜಾತಿ ಹಾಗೂ ಪ.ಪಂಗಡದ ಸಮುದಾಯಕ್ಕೆ ಸ್ಮಶಾನ ಜಾಗ ವನ್ನು ಗ್ರಾಮದಲ್ಲಿ ಮೀಸಲಿರಿಸಬೇಕು ಎಂದು ಒತ್ತಾಯಿಸಿ ಆಲ್ದೂರಿನ ಗ್ರಾಮಸ್ಥರು ಜಿಲ್ಲಾಡಳಿತವನ್ನು ಒತ್ತಾಯಿಸಿದರು.

ಈ ಸಂಬಂಧ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಅವರಿಗೆ ಮನವಿ ಸಲ್ಲಿಸಿದ ಗ್ರಾಮಸ್ಥರು ಶವಸಂಸ್ಕಾರಕ್ಕೆ ಜಾಗವಿಲ್ಲದೇ ತೀವ್ರ ತೊಂದರೆಯಾಗಿರುವ ಹಿನ್ನೆಲೆಯಲ್ಲಿ ಜಾಗವನ್ನು ಜನಾಂಗದ ಸ್ಮಶಾನಕ್ಕೆ ಮಾತ್ರ ಮೀಸಲಿಡಬೇಕು ಎಂದು ಆಗ್ರಹಿಸಿದರು.

ಬಳಿಕ ಮಾತನಾಡಿದ ಭೀಮ್ ಆರ್ಮಿ ಅಧ್ಯಕ್ಷ ಗಿರೀಶ್ ತಾಲ್ಲೂಕಿನ ಆಲ್ದೂರು ಹೋಬಳಿ ಚಿಕ್ಕಮಾಗರವಳ್ಳಿ ಗ್ರಾಮದ ಸ.ನಂ.೧೦೮ರ ಬೀರಂಜಿ ಹೊಳೆ ಸಮೀಪ ೨.೩೨ ಎಕರೆ ಪ.ಜಾತಿ ಮತ್ತು ವರ್ಗದವರ ಸ್ಮಶಾನ ಜಾಗವಿದ್ದು ಈ ಜಾಗವನ್ನು ಆಲ್ದೂರು ಗ್ರಾ.ಪಂ.ನವರು ಒಕ್ಕಲಿಗರ ನಿವೇಶನಕ್ಕೆ ಮೀಸಲಿಟ್ಟು ಕಂದಾಯ ಪಾವತಿಸಲಾಗುತ್ತಿದೆ ಎನ್ನುತ್ತಿದ್ದಾರೆ.
ಕಳೆದ ಹಲವಾರು ವರ್ಷಗಳಿಂದ ಜನಾಂಗದ ಶವಸಂಸ್ಕಾರ ನಡೆಸಲು ತೀವ್ರ ಸಮಸ್ಯೆಯಾಗಿದೆ. ಬಿರಂಜಿ ಹೊಳೆ ಸಮೀಪದ ಸ್ಮಶಾನದ ಜಾಗದ ವಿಚಾರವಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ಕೂಡಾ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ಹೊರಹಾಕಿದರು.

Scheduled Caste and Scheduled Tribe Community ಆ ನಿಟ್ಟಿನಲ್ಲಿ ಜಿಲ್ಲಾಡಳಿತ ಪ.ಜಾತಿ ಮತ್ತು ಪ.ಪಂಗಡದವರಿಗೆ ಆಲ್ದೂರು ಗ್ರಾಮದಲ್ಲಿ ೨.೩೨ ಎಕರೆ ಸ್ಮಶಾನ ಜಾಗವನ್ನು ಜನಾಂಗಕ್ಕೆ ಮಿಸಲಿಟ್ಟು ಶವಸಂಸ್ಕಾರಕ್ಕೆ ಅನುವು ಮಾಡಿಕೊಡಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಆಲ್ದೂರು ಗ್ರಾಮಸ್ಥರಾದ ಮನು, ವೆಂಕಟೇಶ್, ಎ.ಎಸ್.ನಿಂಗಪ್ಪ, ಪುನೀತ್, ಚಂದ್ರಶೇಖರ್ ಹಾಜ ರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...