Thursday, March 19, 2026
Thursday, March 19, 2026

Aam Admi Party ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ನೀಡಿದ ಜನಪರ ಉಚಿತ ಯೋಜನೆಗಳನ್ನ ರಾಜ್ಯದಲ್ಲಿ ಕಾಂಗ್ರೆಸ್ ನಕಲಿಸಿದೆ- ಮುಖ್ಯಮಂತ್ರಿ ಚಂದ್ರು

Date:

Aam Admi Party ಹಳ್ಳಿಗಳಲ್ಲಿ ಮೂಲಸೌಕರ್ಯಗಳಿಲ್ಲದೇ ಜನರು ಶೋಚನೀಯ ಸ್ಥಿತಿಯ ಲ್ಲಿದ್ದು ಜನಸಾಮಾನ್ಯರು ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳದಿದ್ದರೆ ಸಮಾಜದಲ್ಲಿರುವ ಭ್ರಷ್ಟ ವ್ಯವಸ್ಥೆಯನ್ನು ಹತೋಟಿಗೆ ತರಲು ಸಾಧ್ಯವಿಲ್ಲ ಎಂದು ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು.

ಸಖರಾಯಪಟ್ಟಣ ಸಮೀಪದ ಹುಲೀಕೆರೆ ಗ್ರಾಮದಲ್ಲಿ ಪಕ್ಷದ ವತಿಯಿಂದ ಬುಧವಾರ ಆಯೋಜಿಸಿದ್ದ ಅರಳೀಕಟ್ಟೆ ಸಂವಾದ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿದರು.

ಭ್ರಷ್ಟಾಚಾರ ಮತ್ತು ಕುಟುಂಬ ರಾಜಕಾರಣ ಎಲ್ಲಾ ಪಕ್ಷಗಳಲ್ಲಿದ್ದು ಪ್ರಥಮ ಬಾರಿ ಶಾಸಕರಾಗುವ ವ್ಯಕ್ತಿ 10 ಲಕ್ಷ ಆಧಾಯ ಹೊಂದಿದ್ದರೆ ಮುಂದಿನ ವರ್ಷಕ್ಕೆ ಹತ್ತುಪಟ್ಟು ಏರಲಿದೆ. ಈ ಸ್ಥಿತಿಯಲ್ಲಿ ನಾಯಕರುಗಳು ಮುಂ ದುವರೆದರೆ ರಾಜ್ಯದ ಗತಿಯೇನು. ಆ ನಿಟ್ಟಿನಲ್ಲಿ ಪ್ರತಿ ಮತದಾರರು ಎಚ್ಚೆತ್ತುಕೊಳ್ಳಬೇಕು. ಗ್ರಾಮದಲ್ಲಿ ಶಾಲೆ, ಆಸ್ಪತ್ರೆ ವ್ಯವಸ್ಥೆ ಸರಿಯಿದೆ ಎಂಬುದನ್ನು ಅರ್ಥೈಸಿಕೊಂಡು ಗ್ರಾ.ಪಂ. ಸದಸ್ಯರನ್ನು ಆಯ್ಕೆ ಮಾಡಬೇಕು ಎಂದರು.
ಹೊಸದಿಲ್ಲಿಯಲ್ಲಿ ಎಎಪಿ ನೀಡಿದ ಜನಪರ ಉಚಿತ ಸೌಲಭ್ಯಗಳನ್ನೇ ಕರ್ನಾಟಕದಲ್ಲಿ ಕಾಂಗ್ರೆಸ್ ನಕಲಿಸಿದೆ. ರಾಜ್ಯದ ಬಿಜೆಪಿಯ ೪೦% ರಾಜಕಾರಣ ಕಾಂಗ್ರೆಸ್ಸಿಗೂ ವಿಸ್ತರಿಸಿಕೊಂಡಿದೆ. ಶಿಕ್ಷಣ ಮತ್ತು ಆರೋಗ್ಯ ಮೂಲೆಗುಂ ಪಾಗಿದೆ. ಎಎಪಿ ಪಕ್ಷ ಎಲ್ಲವನ್ನು ಬದಲಾಯಿಸುತ್ತದೆ ಎಂದಲ್ಲ, ಹಂತ ಹಂತವಾಗಿ ಪೊರಕೆಯಿಂದ ಗುಡಿಸುತ್ತಾ ಭ್ರಷ್ಟಾಚಾರ ಮುಕ್ತಕ್ಕೆ ಪಣ ತೊಡಲಿದೆ ಎಂದರು.
ಎಎಪಿ ಮಾಧ್ಯಮ ಪ್ರತಿನಿಧಿ ಡಾ|| ಕೆ.ಸುಂದರಗೌಡ ಮಾತನಾಡಿ ದೇಶದ ಪ್ರಜೆಗಳು ಸದೃಢ ಸಮಾಜ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಕುಟುಂಬ ರಾಜಕಾರಣವನ್ನು ಬದಿಗೊತ್ತಬೇಕು. ಆಸೆ, ಆಮಿಷಗಳಿಗೆ ಒಳಗಾಗದೇ ಸಮಾಜವನ್ನು ಪರಿವರ್ತಿಸುವಲ್ಲಿ ಪ್ರಾಮಾಣ ಕರಾಗಿ ಕೆಲಸ ಮಾಡುವ ಸಾಮಾನ್ಯ ವ್ಯಕ್ತಿಗೆ ಅಧಿಕಾರ ಸಿಗುವಂತೆ ಮಾಡಬೇಕು ಎಂದು ಹೇಳಿದರು.

Aam Admi Party ಇದೇ ವೇಳೆ ಗ್ರಾಮಸ್ಥರ ಹಲವಾರು ಸಮಸ್ಯೆಗಳನ್ನು ಮುಖ್ಯಮಂತ್ರಿ ಚಂದ್ರು ಆಲಿಸಿದರು. ಈ ಸಂದರ್ಭದಲ್ಲಿ ಎಎಪಿ ರಾಜ್ಯ ಉಪಾಧ್ಯಕ್ಷ ಉಮಾಶಂಕರ್, ಜಿಲ್ಲಾಧ್ಯಕ್ಷ ಲಿಂಗಾರಾಧ್ಯ ಮುಖಂಡರುಗಳಾದ ಎಂ.ಪಿ.ಈರೇಗೌಡ, ಬಿ.ಟಿ.ನಾಗಣ್ಣ, ಹೇಮಂತ್‌ಕುಮಾರ್, ಸೈಯದ್ ಜಮೀಲ್ ಅಹ್ಮದ್ ಹಾಗೂ ಗ್ರಾಮಸ್ಥರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...