Saturday, December 6, 2025
Saturday, December 6, 2025

Shivamogga Police ಈ-ಸ್ಟೋರ್ ಹೆಸರಲ್ಲಿ ಹಣ ಸಂಗ್ರಹಿಸಿ ವಂಚನೆಕ್ರಮ ಕೈಗೊಳ್ಳಲು ಮನವಿ

Date:

Shivamogga Police ಈ ಸ್ಟೋರ್ ಹೆಸರಿನಲ್ಲಿ ನಂಬಿಕೆ ದ್ರೋಹ ಮಾಡಿ ವಂಚಿಸಿ ಹಣ ನೀಡದೆ ಕೊಲೆ ಬೆದರಿಕೆ ಹಾಕಿರುವ ವ್ಯಕ್ತಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಶಿವಮೊಗ್ಗದ ಮಾಲತೇಶ್, ರವಿಕುಮಾರ್, ಅಮೃತ ಹಾಗೂ ಇತರರು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಶಿವಮೊಗ್ಗ ತಾಲ್ಲೂಕಿನ ಸುಮಾರು ಹದಿನೈದು ಜನ ಈ ಸ್ಟೋರ್ ಹೆಸರಿನ ಸಂಸ್ಥೆಗೆ ಹಣ ಹೂಡಲು ಮನವೊಲಿಸಿ ಏನಾದರೂ ಮೋಸವಾದರೆ ನಾವೇ ಕೊಡುವುದಾಗಿ ಹೇಳಿದ್ದ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಚಿರಾಗ್ ಅರ್ಥ್ ಮೂವರ್ಸ್ನ ರೇವಪ್ಪ ಗೌಡ, ಶಿವಮೊಗ್ಗದ ಶಿಕ್ಷಕ ಉಮೇಶ್, ರಾಣೆಬೆನ್ನೂರಿನ ವೀರೇಂದ್ರ ಪಾಟೀಲ್ ಎಂಬುವರು ಸೇರಿ ನಮಗೆ ನಂಬಿಕೆ ದ್ರೋಹ ಮಾಡಿ ಲಕ್ಷಾಂತರ ರೂ ಕಟ್ಟಿಸಿಕೊಂಡು ಈಗ ಹಣ ಕೇಳಿದರೆ ಕೊಲೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ನಾವು ಚಿಕ್ಕ ಪುಟ್ಟ ಕೆಲಸ ಮಾಡಿಕೊಂಡು ಬದುಕು ಸಾಗಿಸುತ್ತಿದ್ದು, ಇವರು ಈ ಸ್ಟೋರ್‌ಂತಹ ಹತ್ತಾರು ಸಂಸ್ಥೆಗಳ ಮೇಲೆ ನಮಗೆ ನಂಬಿಕೆ ತೋರುವಂತೆ ಮಾಡಿ ನಮ್ಮಿಂದ ಹಣ ಕಟ್ಟಿಸಿಕೊಳ್ಳುವ ಜೊತೆ ಸಂಪೂರ್ಣ ಜವಾಬ್ದಾರಿ ಹೊತ್ತು ವಾಪಸ್ ಕೊಡುತ್ತೇವೆ ಎಂದು ಹಣವನ್ನು ಸಹ ಕೊಡದೆ ವಂಚಿಸಿದ್ದಾರೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಈ ಮೂವರು ನಮ್ಮ ಹಣವನ್ನು ಈ ಸ್ಟೋರ್ ಗೆ ಹಣ ಕಟ್ಟಿದ್ದಾರೋ ಇಲ್ಲವೋ ಎಂಬುದು ಸಹ ನಮಗೆ ಗೊತ್ತಿಲ್ಲ. ಮೊದಲು ನಿಮಗೆ ಹಣ ಬರುತ್ತದೆ ಎಂದು ಹೇಳುತ್ತಲೇ ದಿನ ತಳ್ಳುತ್ತಿದ್ದ ರೇವಪ್ಪ ಗೌಡ ಈಗ ಹಣದ ವಿಚಾರ ಕೇಳಿದರೆ ಯಾರ ಬಳಿ ಹೇಳಿದರೂ ನನ್ನನ್ನು ಏನು ಮಾಡಲು ಆಗುವುದಿಲ್ಲ. ನಮ್ಮ ಹುಡುಗರಿಗೆ ಹೇಳಿ ನಿಮಗೆ ಬಡಿಸುತ್ತೇನೆ. ನನ್ನ ತಂಟೆಗೆ ಬರಬೇಡಿ ಎಂದು ಬೆದರಿಸುತ್ತಿದ್ದಾರೆಂದು ಹೇಳಿದ್ದಾರೆ.

ನಾವು ಈ ವಿಚಾರದಲ್ಲಿ ಈಗಾಗಲೇ ಸುಮಾರು 15 ಲಕ್ಷಕ್ಕೂ ಹೆಚ್ಚು ಹಣ ಕಳೆದುಕೊಂಡಿದ್ದು ಕೂಡಲೇ ಇವರನ್ನು ಕರೆಸಿ, ಅವನ ಜೊತೆಗೆ ನಮ್ಮ ನಿಯತ್ತಿನ ದುಡಿಮೆಯ ಹಣವನ್ನು ವಾಪಸ್ ಕೊಡಿಸಲು ಹಾಗೂ ಅವರ ವಿರುದ್ಧ ಕೊಲೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಶಿಕ್ಷೆ ಕೊಡಿಸುವಂತಹ ಪ್ರಕರಣವನ್ನು ದಾಖಲಿಸಲು ವಿನಂತಿಸಿದ್ದಾರೆ.

ಅಮಾಯಕರಾದ ನಮ್ಮನ್ನು ವಂಚಿಸಿ ನಂಬಿಕೆ ದ್ರೋಹ ಮಾಡಿದ್ದಾರೆ. ದಾಖಲೆ ಕೇಳಿದರೆ ಏನು ಇಲ್ಲ ಎಂಬ ಕುಂಟು ನೆಪ ಹೇಳುತ್ತಾ ವಂಚಿಸುತ್ತಿರುವ ರೇವಪ್ಪಗೌಡ ಸೇರಿದಂತೆ ಬಹಳಷ್ಟು ಜನ ಇದೇ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚಿಸಿದ್ದು, ತಾವುಗಳು ಈ ಪ್ರಕರಣವನ್ನು ಭೇದಿಸಿ ನ್ಯಾಯ ಕೊಡಿಸುವ ಮೂಲಕ ಸಾವಿರಾರು ಜನರಿಗೆ ನ್ಯಾಯ ಕೊಡಿಸಬೇಕೆಂದು ಕೋರಿದ್ದಾರೆ.

ಜಯನಗರ ಇನ್ಸ್ಸ್ಪೆಕ್ಟರ್‌ಗೆ ಎಸ್.ಪಿ. ಸೂಚನೆ:
ಮನವಿ ಸ್ವೀಕರಿಸಿ ಜಯನಗರ ಪೊಲೀಸ್ ಇನ್ಸ್ ಪೆಕ್ಟರ್ ಗೆ ಸೂಚನೆ ನೀಡಿದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ಪ್ರಕರಣದ ಆರೋಪಿಗಳನ್ನು ಪೊಲೀಸ್ ಠಾಣೆಗೆ ಕರೆತಂದು ವಿಚಾರಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಹಾಗೂ ಪ್ರಕರಣ ದಾಖಲಿಸುವಂತೆ ಸೂಚನೆ ನೀಡಿದ್ದಾರೆ.

Shivamogga Police ಇಂತಹ ಆಮಿಷಗಳಿಗೆ ಬಲಿಯಾಗದಿರಲು ಮಿಥುನ್ ಕುಮಾರ್ ಕರೆ:
ಈ ಸ್ಟೋರ್ ನಂತಹ ಸಂಸ್ಥೆಗಳಿಗೆ ಹಣವನ್ನು ತೊಡಗಿಸುವ ಮೂಲಕ ದುರಾಸೆಯ ಪ್ರಕ್ರಿಯೆಗೆ ಜನರು ಕೈ ಹಾಕಬಾರದು. ಇಂತಹ ಸಂಸ್ಥೆಗಳ ವಿರುದ್ಧ ಈಗಾಗಲೇ ದೊಡ್ಡ ಮಟ್ಟದ ವಿಚಾರಣೆ ನಡೆಯುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಇಂತಹ ಹತ್ತಾರು ಪ್ರಕರಣಗಳು ಈಗಾಗಲೇ ದಾಖಲಾಗಿವೆ. ಇದೊಂದು ನಂಬಿಕೆ ದ್ರೋಹದ ಕೆಲಸವಾಗಿದೆ ಜನ ಎಚ್ಚರಿಕೆಯಿಂದ ಇರಬೇಕು. ಮೋಸಕ್ಕೆ ಒಳಗಾಗಬಾರದು ಎಂದು ಕರೆ ನೀಡಿದ್ದಾರೆ.

ಮೋಸಕ್ಕೊಳಗಾದರು ಸಂಪರ್ಕಿಸಿ:
ಈ ಸ್ಟೋರ್ ಹೆಸರಿನಲ್ಲಿ ಲಕ್ಷಾಂತರ ರೂ ಕಳೆದುಕೊಂಡವರು ಒಗ್ಗಟ್ಟಾಗಿ ನಮ್ಮ ಹಣ ಪಡೆಯಲು ಕೆಲಸ ಮಾಡಬೇಕಾಗಿದೆ. ಇಲ್ಲಿ ಮೋಸಕ್ಕೆ ಒಳಗಾದವರು ಕೂಡಲೇ ಸಮೀಪದ ಪೊಲೀಸ್ ಠಾಣೆಗೆ ದೂರು ನೀಡಿ. ಅದರಲ್ಲಿ ನಿಮಗೆ ನಂಬಿಕೆ ದ್ರೋಹ ಮಾಡಿದವರ ವಿರುದ್ದ ಪ್ರಕರಣ ದಾಖಲಿಸುವಂತೆ ಮಾಡಿ. ಹೆಚ್ಚಿನ ವಿವರ ಹಾಗೂ ಸಂಪರ್ಕಕ್ಕೆ 9986237799, 7899574555, 7204824788, 9980065925ಗೆ ಕರೆ ಮಾಡುವಂತೆ ಕೋರಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...