Thursday, March 19, 2026
Thursday, March 19, 2026

DC Chikkamagaluru ದಿನಗೂಲಿ ಕೆಲಸ ನೆಪದಲ್ಲಿ ಮುಗ್ಧರಿಗೆ ಮೋಸ ಮಾಡಿದ ಸೊಸೈಟಿ ವಿರುದ್ಧ ಕ್ರಮಕ್ಕೆ ಆಗ್ರಹ

Date:

DC Chikkamagaluru ಪ್ರತಿನಿತ್ಯ ದಿನಗೂಲಿ ಕೆಲಸ ಮಾಡುವ ಅಮಾಯಕ ಹಾಗೂ ಮುಗ್ದ ಕಾರ್ಮಿಕರಿಗೆ ಸಾಲ ಕೊಡಿಸುವುದಾಗಿ ಹೇಳಿ ವಂಚನೆವೆಸಗಿರುವ ಸೊಸೈಟಿ ವಿರುದ್ಧ ಕಾನೂನು ಕ್ರಮ ಕೈಗೊಂಡು ಕ್ರಿಮಿನಲ್ ಮೊಕದ್ದಮೆ ಹೂಡಬೇಕು ಎಂದು ನೊಂದ ಫಲಾನುಭವಿಗಳು ಜಿಲ್ಲಾಡಳಿತವನ್ನು ಒತ್ತಾಯಿಸಿದರು.

ಈ ಸಂಬಂಧ ಅಪರ ಜಿಲ್ಲಾಧಿಕಾರಿ ನಾರಾಯಣಕನಕರಡ್ಡಿ ಅವರಿಗೆ ಶುಕ್ರವಾರ ಫಲಾನುಭವಿಗಳು ಬಿಎಸ್ಪಿ ನೇತೃತ್ವದಲ್ಲಿ ಮನವಿ ಸಲ್ಲಿಸಿ ಜ್ಯೋತಿನಗರ ಸಮೀಪದ ಯುವ ಕರುನಾಡು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮ್ಯಾನೇಜರ್ ಹಾಗೂ ಕಾರ್ಯದರ್ಶಿ ಫಲಾನುಭವಿಗಳಿಗೆ 50 ಸಾವಿರ ಸಹಾಯಧನ ಕೊಡಿಸುವುದಾಗಿ ಹೇಳಿ ಹಣ ಪಡೆದುಕೊಂಡು ವಂಚಿಸಿದ್ದಾರೆ ಎಂದು ಆರೋಪಿಸಿದರು.

ಬಳಿಕ ಮಾತನಾಡಿದ ಬಿಎಸ್ಪಿ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ ಪ್ರತಿ ಕಾರ್ಮಿಕರು 15250 ರೂ.ಗಳಂತೆ ಷೇರು ಇರಿಸಿದರೆ ಮುಂಬರುವ ದಿನ ಸಬ್ಸಿಡಿಯಲ್ಲಿ ಒಬ್ಬರಿಗೆ 50 ಸಾವಿರ ಸಹಾಯಧನ ಕೊಡಿಸುವುದಾಗಿ ಹೇಳಿ ಸೊಸೈಟಿ ಮ್ಯಾನೇಜರ್ ಮತ್ತು ಕಾರ್ಯದರ್ಶಿ ಬಹುದೊಡ್ಡ ವಂಚನೆವೆಸಗಿದ್ದು ಈ ಸುಳಿಯಲ್ಲಿ ಸುಮಾರು 17 ಮಂದಿ ಹಣ ಕಟ್ಟಿ ಸಹಾಯಧನವಿಲ್ಲದೇ ಹಾಗೂ ಅಸಲಿಲ್ಲದೇ ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ ಎಂದರು.

ಈ ಸಮಸ್ಯೆಯಲ್ಲಿ ಸಿಲುಕಿ ಸುಮಾರು ಮೂರು ತಿಂಗಳ ಬಳಿಕವು ಕಚೇರಿಗೆ ತೆರಳಿ ವಿಚಾರಿಸಿದರೆ ಅವಾಚ್ಯ ಶಬ್ದಗಳಿಂದ ನಿಂದಿಸುವುದು, ಪೋನ್ ಮೂಲಕ ಸಂಪರ್ಕಿಸಿದರೆ ಹಣದ ಬಗ್ಗೆ ಚಕಾರವೆತ್ತದೇ ಜಾತಿ ಬಗ್ಗೆ ಹಿಯ್ಯಾ ಳಿಸುವ ರೀತಿಯಲ್ಲಿ ಮಾತನಾಡಲಾಗುತ್ತಿದೆ ಎಂದು ದೂರಿದರು.

DC Chikkamagaluru ಹಾಗಾಗಿ ಕರುನಾಡ ಸೊಸೈಟಿಯಲ್ಲಿ ಪ್ರಸ್ತುತ ಷೇರಿನಲ್ಲಿ ಹಣ ಇರಿಸಿದವರೆಲ್ಲಾ ಕೂಲಿ ಕಾರ್ಮಿಕರಾಗಿದ್ದು ಕಟ್ಟಿದ ಹಣವನ್ನು ವಾಪಸ್ ಕೊಡಿಸುವ ಮೂಲಕ ಮುಂದೆ ಯಾವುದೇ ಅಮಾಯಕರಿಗೆ ಅನ್ಯಾಯವಾಗದಂತೆ ಸಂಸ್ಥೆಯನ್ನು ಮುಚ್ಚಿಸಿ ಮ್ಯಾನೇಜರ್ ಹಾಗೂ ಕಾರ್ಯದರ್ಶಿ ವಿರುದ್ಧ ಕ್ರಿಮಿನಲ್ ಮೊಖದ್ದಮೆ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಬಿಎಸ್ಪಿ ರಾಜ್ಯ ಕಾರ್ಯದರ್ಶಿ ಕೆ.ಬಿ.ಸುಧಾ, ಲೋಕಸಭಾ ಕ್ಷೇತ್ರದ ಸಂಯೋಜಕ ಗಂಗಾ ಧರ್, ಫಲಾನುಭವಿಗಳಾದ ಜಗದೀಶ್, ರಾಮಸ್ವಾಮಿ, ಉಮೇಶ್, ಕಿರಣ್‌ಕುಮಾರ್, ರೇಖಾ, ಶಾಂತಮ್ಮ, ಮಾಲತೇಶ್, ಹನುಮಮ್ಮ, ರಾಜಮ್ಮ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...