Thursday, June 18, 2026
Thursday, June 18, 2026

Prajapita Brahma Kumari Ishwari University ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ರಾಜಯೋಗ ಶಿಕ್ಷಣ ಕೇಂದ್ರ ಕಟ್ಟಡಕ್ಕೆ ಶಂಕುಸ್ಥಾಪನೆ

Date:

Prajapita Brahma Kumari Ishwari University ಪ್ರಜಾಪಿತ ಬ್ರಹ್ಮ ಕುಮಾರಿ ಈಶ್ವರಿ ವಿಶ್ವವಿದ್ಯಾಲಯ ದಿಂದ ರಾಜಯೋಗ ಶಿಕ್ಷಣ ಮತ್ತು ಸಂಶೋಧನ ಪ್ರತಿಷ್ಠಾನದ ಅಂಗವಾಗಿ ಡಿ.20ರಂದು ಬೆಳಿಗ್ಗೆ 9:30ಕ್ಕೆ ವಾಜಪೇಯಿ ಬಡಾವಣೆಯಲ್ಲಿ ರಾಜಯೋಗ ಭವನದ ಶಂಕು ಸ್ಥಾಪನೆ ಕಾರ್ಯಕ್ರಮ ಹಮ್ಮಿಕೊಳಲಾಗಿದೆ.

ಸಾಗರ ರಸ್ತೆಯ ಮಲ್ಲಿಗೇನಹಳ್ಳಿಯ ವಾಜಪೇಯಿ ಬಡಾವಣೆಯ ದಿ ಡೆಲ್ಲಿ ವರ್ಲ್ಡ್ ಸ್ಕೂಲ್ ರಸ್ತೆಯಲ್ಲಿ ಬ್ರಹ್ಮಕುಮಾರಿ ನಿವೇಶನ ಇದ್ದು, ಈ ನಿವೇಶನದಲ್ಲಿ ಅಂದು ಬೆಳಿಗ್ಗೆ 9:30ಕ್ಕೆ ಈಶ್ವರಿ ವಿವಿಯ ಎಕ್ಸ್ಕ್ಯೂಟಿವ್ ಸೆಕ್ರೇಟರಿ ರಾಜಯೋಗಿ ಬ್ರಹ್ಮಕುಮಾರ ಡಾ. ಮೃತ್ಯುಂಜಯ ಅಣ್ಣಾಜಿಯವರು ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ.

ವಿವಿ ಯ ನಿರ್ದೇಶಕ ಡಾ. ಬಸವರಾಜ ರಾಜಋಷಿ ಸಾನ್ನಿಧ್ಯ ವಹಿಸುವರು. ಸಂಸದ ಬಿ.ವೈ. ರಾಘವೇಂದ್ರ ಮಾಜಿ ಶಾಸಕ ಹೆಚ್.ಎಂ. ಚಂದ್ರಶೇಖರಪ್ಪ, ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಎಸ್. ರುದ್ರೇಗೌಡ, ಶಾರದಾ ಪರ‍್ಯಾನಾಯ್ಕ್, ಅರುಣ್, ಮಾಜಿ ಮೇಯರ್ ಎಸ್. ಶಿವಕುಮಾರ್, ಮಾಜಿ ಸದಸ್ಯ ಹೆಚ್.ಸಿ. ಯೋಗೀಶ್, ಮುದ್ದಿನ ಕೊಪ್ಪ, ಗ್ರಾಪಂ ಅಧ್ಯಕ್ಷ ರಘು ಕೆ. ಮುಂತಾದವರು ಉಪಸ್ಥಿತರಿರುವರು.

Prajapita Brahma Kumari Ishwari University ಸಂಜೆ 05 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಹುಣಸಘಟ್ಟ ದಿ. ಮಲ್ಲಿಕಾರ್ಜುನಪ್ಪ÷ನವರ ಸ್ಮರಣಾರ್ಥ ವಾಗಿ ಪ್ರವಚನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ರಾಜಯೋಗಿ ಬ್ರಹ್ಮ ಕುಮಾರ ಡಾ. ಮೃತ್ಯುಂಜಯ ಅಣ್ಣಾಜಿ, ಡಾ. ಬಸವರಾಜ ರಾಜ ಋಷಿ ಆಶೀರ್ವಚನ ನೀಡಲಿದ್ದಾರೆ ಎಂದು ಎಂದು ವಿ.ವಿ. ಯ ಸಂಚಾಲಕಿ ರಾಜಯೋಗಿನಿ ಬ್ರ.ಕು. ಅನಸೂಯಾಜಿ ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...