Friday, June 19, 2026
Friday, June 19, 2026

Actor Vishnuvardhan ನಟ ವಿಷ್ಣುವರ್ಧನ್ ಶೀಘ್ರ ಸ್ಮಾರಕ ನಿರ್ಮಾಣಕ್ಕಾಗಿ ಅಭಿಮಾನಿಗಳ ಒತ್ತಾಯ

Date:

Actor Vishnuvardhan ಸಾಹಸ ಸಿಂಹ ವಿಷ್ಣುವರ್ಧನ್‌ ಅಗಲಿ ಡಿಸೆಂಬರ್‌ 30 ಕ್ಕೆ ಬರೋಬ್ಬರಿ 14 ವರ್ಷ ಆಗಲಿದೆ. 2009ರ ಡಿಸೆಂಬರ್ 30ರಂದು ವಿಷ್ಣವರ್ಧನ್ ಇಹಲೋಕ ತ್ಯಜಿಸಿದರು.

ಅಂದಿನಿಂದಲೂ ಅವರ ಅಭಿಮಾನಿಗಳಿಂದ ವಿಷ್ಣು ಸ್ಮಾರಕ ನಿರ್ಮಾಣದ ಕುರಿತು ಚರ್ಚೆಯಾಗುತ್ತಲೇ ಇವೆ.

ಇದೀಗ ವಿಷ್ಣು ಅಭಿಮಾನಿಗಳು ಸ್ಮಾರಕಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ. ಇದಕ್ಕೆ ಕಿಚ್ಚ ಸುದೀಪ್‌ ಮತ್ತು ಡಾಲಿ ಧನಂಜಯ ಬೆಂಬಲ ನೀಡಿದ್ದಾರೆ.

Actor Vishnuvardhan ವಿಷ್ಣುವರ್ಧನ್ ಅಂತ್ಯ ಸಂಸ್ಕಾರವಾದ ಜಾಗದಲ್ಲಿ ಪುಣ್ಯಭೂಮಿ ಆಗಬೇಕು ಎಂದು ವಿಷ್ಣು ಅಭಿಮಾನಿಗಳು ಪ್ರತಿಭಟನೆಗೆ ಮುಂದಾಗಿದ್ದಾರೆ. ವಿಷ್ಣುವರ್ಧನ್ ಅಭಿಮಾನಿಗಳೆಲ್ಲರೂ ಸೇರಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ

ವಿಷ್ಣವರ್ಧನ್ ಅವರು ನಿಧನರಾದಾಗಿನಿಂದಲೂ ಅಭಿಮಾನ್‌ ಸ್ಟುಡಿಯೋದಲ್ಲಿ ಅವರ ಸ್ಮಾರಕಕ್ಕೆ ಭೂಮಿ ಒದಗಿಸುವಂತೆ ವಿಷ್ಣು ಫ್ಯಾನ್ಸ್‌ ಮನೆವಿ ಮಾಡುತ್ತಿದ್ದಾರೆ. ಮೈಸೂರಿನಲ್ಲಿ ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ ಆಗಿದ್ದರೂ ಬೆಂಗಳೂರಿನಲ್ಲಿ ಇದುವರೆಗೆ ಸ್ಮಾರಕ ನಿರ್ಮಾಣ ಕಾರ್ಯ ಆರಂಭ ಕೂಡ ಆಗಿಲ್ಲ. ಬೆಂಗಳೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕಾಗಿ ಅವರ ಅಭಿಮಾನಿಗಳು ಹೋರಾಟ ಆರಂಭಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...