Saturday, December 6, 2025
Saturday, December 6, 2025

Chikkamagaluru District Ex-Servicemen’s Association ದೇಶ ಕಾಯುವ ಸೈನಿಕರ ಸೇವೆ ಅವಿಸ್ಮರಣೀಯ- ಶಾಸಕ ಎಚ್.ಡಿ.ತಮ್ಮಯ್ಯ

Date:

Chikkamagaluru District Ex-Servicemen’s Association ಯುದ್ಧಭೂಮಿಯಲ್ಲಿ ಪ್ರಾಣದಹಂಗು ತೊರೆದು ದೇಶವನ್ನು ಕಾಯುತ್ತಿ ರುವ ಸೈನಿಕರ ಸೇವೆ ಅಸ್ಮರಣೀಯ. ಇವರ ತ್ಯಾಗ, ಬಲಿದಾನದಿಂದ ದೇಶದ ಜನತೆ ಪ್ರತಿನಿತ್ಯವು ನೆಮ್ಮದಿಯಿಂದ ಜೀವನ ಸಾಗಿಸಲು ಕಾರಣ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದರು.

ಚಿಕ್ಕಮಗಳೂರು ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಮಾಜಿ ಸೈನಿಕರ ಸಂಘ ವತಿಯಿಂದ ಏರ್ಪಡಿಸಿದ್ದ 1971ರ ಯುದ್ಧದ 53ನೇ ವಿಜಯೋತ್ಸವ ಕಾರ್ಯಕ್ರಮವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.

ದೇಶದ ಇತಿಹಾಸದಲ್ಲಿ ಇಂಡೋ ಪಾಕಿಸ್ತಾನ ಯುದ್ಧ, ಭಾರತ, ಪಾಕಿಸ್ತಾನ ಯುದ್ಧ ಹಾಗೂ ಈಚೆಗೆ ನಡೆದ 2019ರಲ್ಲಿ ನಡೆದ ಪುಲ್‌ವಾಮಾ ದಾಳಿ ದೇಶ ಪ್ರಜೆಗಳು ಎಂದಿಗೂ ಮರೆಯುವಂತಿಲ್ಲ ಎಂದ ಅವರು ಇಷ್ಟೆಲ್ಲಾ ಸಾಧನೆ ಮಾಡಿರುವ ಭಾರತೀಯ ಸೇನಪಡೆಗಳು ನಮ್ಮೆಲ್ಲರಿಗೂ ಕಿರೀಟವಿದ್ದಂತೆ ಎಂದು ಹೇಳಿದರು.

ಹುತಾತ್ಮಕ ಸೈನಿಕರ ತ್ಯಾಗ, ಶೌರ್ಯ ಹಾಗೂ ಬಲಿದಾನದಿಂದ ದೇಶ ನೆಮ್ಮದಿ ಜೀವನಕ್ಕೆ ದಾರಿ ಮಾಡಿ ಕೊಟ್ಟಿದೆ. ಅಂತಹ ಮಹಾನ್ ಯೋಧರನ್ನು ದೇಶದ ಪ್ರತಿಪ್ರಜೆಯು ಸ್ಮರಿಸಬೇಕು. ಜೊತೆಗೆ ನಿವೃತ್ತಿಗೊಂಡ ಬಂದA ತಹ ಸೈನಿಕರಿಗೆ ಗೌರವ ಸೂಚಿಸುವ ಗುಣ ಬೆಳೆಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.

ಯಾವುದೇ ಫಲಾಪೇಕ್ಷೆ ಇಲ್ಲದೇ ತನ್ನ ಇಡೀ ಕುಟುಂಬವನ್ನೇ ತೊರೆದು ದೇಶದ ಹಿತ ಕಾಪಾಡುವಲ್ಲಿ ತೆರಳುವ ಸೈನಿಕರು ನಮಗೆಲ್ಲಾ ಸ್ಪೂರ್ತಿಯಾಗಿರಬೇಕು. ವಿದ್ಯಾರ್ಥಿಗಳು ಕೂಡಾ ಮುಂದಿನ ಭವಿಷ್ಯದಲ್ಲಿ ಸೈನಿಕರಾಗ ಬೇಕೆಂಬ ಕನಸು ಕಂಡು ಮುನ್ನೆಡೆದರೆ ಅದಕ್ಕಿಂತ ದೊಡ್ಡಭಾಗ್ಯ ಬೇರೊಂದಿಲ್ಲ ಎಂದು ಹೇಳಿದರು.

ಮಾಜಿ ಸೈನಿಕರ ಸಂಘದ ಮಾಜಿ ಅಧ್ಯಕ್ಷ ಪಿ.ಎನ್.ನಾಗರಾಜ್ ಮಾತನಾಡಿ ನಿವೃತ್ತ ಸೈನಿಕರು ಸಣ್ಣಪುಟ್ಟ ಸಭೆ ಅಥವಾ ಇನ್ನಿತರೆ ಕಾರ್ಯಚಟುವಟಿಕೆ ರೂಪಿಸಲು ಕಚೇರಿಯ ಸಮಸ್ಯೆಯಾಗಿದೆ. ಆ ನಿಟ್ಟಿನಲ್ಲಿ ಬೇಲೂರು ರಸ್ತೆ ಸಮೀಪವಿರುವ ಹಳೇ ತಾಲ್ಲೂಕು ಕಚೇರಿಯನ್ನು ಸಂಘಕ್ಕೆ ನೀಡಿದರೆ ಬಹಳಷ್ಟು ಅನುಕೂಲವಾಗಲಿದೆ ಎಂದು ಮನವಿ ಮಾಡಿದರು.

Chikkamagaluru District Ex-Servicemen’s Association ಸಂಘದ ಅಧ್ಯಕ್ಷ ಸಿ.ಎಸ್.ಮಂಜುನಾಥ ಮಾತನಾಡಿ 1971ರ ಭಾರತ-ಪಾಕಿಸ್ತಾನ ಯುದ್ಧವು ಭಾರತ ಮತ್ತು ಪಾಕಿಸ್ತಾನಗಳ ನಡುವಿನ ಒಂದು ಪ್ರಮುಖ ಸೈನಿಕ ಸಂಘರ್ಷವಾಗಿದೆ. ಈ ಯುದ್ಧವು ಬಾಂಗ್ಲಾ ವಿಮೋಚನೆಗೆ ಸಂಬಂಧಿಸಿದ್ದು ಅದನ್ನು ಕೆಲವು ಸಲ ಪಾಕಿಸ್ತಾನದ ಆಂತರಿಕ ಯುದ್ಧವಾಗಿತ್ತು ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಮಾಜಿ ಸೈನಿಕರ ಸಂಘದ ಕಾರ್ಯದರ್ಶಿ ಗೋಪಾಲಕೃಷ್ಣ, ಸಹ ಕಾರ್ಯದರ್ಶಿ ರಾಜೇಗೌಡ, ಖಜಾಂಚಿ ಎಸ್.ಪಾಯಿಸ್, ನಿರ್ದೇಶಕ ಕೃಷ್ಣೇಗೌಡ, ಸದಸ್ಯರಾದ ಕುಮಾರಸ್ವಾಮಿ, ರೇವಣ್ಣ, ಮಂಜುನಾಥಸ್ವಾಮಿ, ರಾಮಚಂದ್ರ, ಫರ್ನಾಂಡೀಸ್, ಸುರೇಶ್ ಮತ್ತಿತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bangalore Television Centre ಕಲಾತ್ಮಕ ಧಾರಾವಾಹಿ ನಿರ್ಮಾಣ & ಫೋಕ್ ರಿಯಾಲಿಟಿ ಶೋ ನಲ್ಲಿ ಭಾಗವಹಿಸಲು ಅರ್ಜಿ ಆಹ್ವಾನ

Bangalore Television Centre ಬೆಂಗಳೂರು ದೂರದರ್ಶನ ಕೇಂದ್ರವು ನಿರ್ಮಿಸಲಿರುವ ಕಲಾತ್ಮಕ ಧಾರಾವಾಹಿಯನ್ನು...

ಭಗವದ್ಗೀತೆ ಪಠ್ಯದಲ್ಲಿ ಅಳವಡಿಸಲು ಸಚಿವ ಕುಮಾರಣ್ಣ ಬರೆದ ಪತ್ರಕ್ಕೆ ಅಶೋಕ ಜಿ.ಭಟ್ ಕೃತಜ್ಞತೆ

ಶಿವಮೊಗ್ಗದಲ್ಲಿ ಇತ್ತೀಚೆಗೆ ಭಗವದ್ಗೀತಾ ಅಭಿಯಾನವು ಅತ್ಯಂತ ಯಶಸ್ವಿಯಾಗಿ ನೆರವೇರಿತು.ರಾಜ್ಯಮಟ್ಟದ ಬೃಹತ್ಸಮಾರಂಭದಲ್ಲಿ ವಿವಿಧ...

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...