Tuesday, April 21, 2026
Tuesday, April 21, 2026

B.Y.Raghavendra ಅಭಿವೃದ್ಧಿಯು ದೇಶದ ಕಟ್ಟಕಡೆಯ ವ್ಯಕ್ತಿಗೂ ತಲುಪಿರುವುದು ಮೋದೀಜಿ ಅವರ ಸಾಧನೆ- ಸಂಸದ ರಾಘವೇಂದ್ರ

Date:

B.Y.Raghavendra ಸ್ವಾತಂತ್ರ್ಯ ಬಂದು ಆರು ದಶಕದಲ್ಲಿ ಕಾಣದ ಅಭಿವೃದ್ಧಿ, ಕೇವಲ 10 ವರ್ಷಗಳಲ್ಲಿ ಗ್ರಾಮೀಣ ಪ್ರದೇಶದ ಕಟ್ಟ ಕಡೆಯ ವ್ಯಕ್ತಿಗೂ ತಲುಪಿರುವುದು ಕೇಂದ್ರದ ಮೋದಿಜಿ ಸರ್ಕಾರದ ಸಾಧನೆಯಾಗಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ ವೈ ರಾಘವೇಂದ್ರ ಹೇಳಿದರು.

ರಿಪ್ಪನ್ ಪೇಟೆ ಪಟ್ಟಣದ ಭೂಪಾಳ ಚಂದ್ರಶೇಖರಯ್ಯ ಸಭಾಭವನದಲ್ಲಿ ಆಯೋಜಿಸಿದ್ದ ಕೇಂದ್ರದ ವಿಕಸಿತ ಸಂಕಲ್ಪ ಯಾತ್ರೆ ಗೆ ಚಾಲನೆ ನೀಡಿ ಅವರು ಮಾತನಾಡಿದರು.

ಅಭಿವೃದ್ಧಿಯನ್ನು ಹೊಂದಿದ, ಅಭಿವೃದ್ಧಿ ಹೊಂದುತ್ತಿರುವ ಹಾಗೂ ಅಭಿವೃದ್ಧಿ ಹೊಂದದ ದೇಶಗಳಾಗಿ ಪ್ರಪಂಚವನ್ನು ಮೂರು ವಿಭಜನೆ ಮಾಡಿದರೆ, ಭಾರತವು ಎರಡನೇ ಪಟ್ಟಿಯಲ್ಲಿದೆ.ಜಿಲ್ಲೆಯ ಸಮಗ್ರ ಅಭಿವೃದ್ಧಿಯ ದೃಷ್ಟಿಯನ್ನು ಇಟ್ಟುಕೊಂಡು, ಕೇಂದ್ರ ಸಚಿವರ ಸಮ್ಮುಖದಲ್ಲಿ ಸುಮಾರು ನಾಲ್ಕು ತಿಂಗಳಲ್ಲಿ ರೂ 2500 ಕೋಟಿ ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿ ಜರುಗಲಿದೆ ಎಂದರು.

ಈಗಾಗಲೇ 16,000 ಕೋಟಿ ಕಾಮಗಾರಿ ಪೂರ್ಣವಾಗಿದ್ದು, ತುಂಗಾ ಸೇತುವೆ ಬಳಿ 22 ಕೋಟಿ ವೆಚ್ಚದ ಕಾಮಗಾರಿ ಲೋಕಾರ್ಪಣೆಗೊಳ್ಳಲಿದೆ ಎಂದರು.

2.25 ಲಕ್ಷ ಜನರಿಗೆ 128 ಕೋಟಿ ರೂ ವೆಚ್ಚದಲ್ಲಿ ಕೇಂದ್ರ ಸರ್ಕಾರದ ಆರ್ಥಿಕ ನೆರವಿನ ಸೌಲಭ್ಯ ಪಡೆದಿದ್ದಾರೆಂದು ವಿವರಿಸಿದರು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಆ ಕಿಸಾನ್ ಸನ್ಮಾನ ಫಸಲು ಭೀಮಾ ಕೃಷಿ ಸಿಂಚೆಯ ಮಹಿಳಾ ಸಬಲೀಕರಣ ಜನೌಷಧಿ ಉಜಾಲ ಯೋಜನೆ ಜನಧನ್ ಮುದ್ರಾ ಯೋಜನೆ ಯಿಂದ ರೈತ ಕುಟುಂಬಗಳು ಸೇರಿದಂತೆ ಕುಶಲ ಕಸುಬುದಾರರು ಬ್ಯಾಂಕ್ ಸಾಲ ಸೌಲಭ್ಯದೊಂದಿಗೆ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಕೇಂದ್ರ ಸರ್ಕಾರ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ.

B.Y.Raghavendra ಈ ಕುರಿತು ವಿಕಸಿತ ಸಂಕಲ್ಪ ಕಾರ್ಯಕ್ರಮವನ್ನು ಪ್ರತಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಪ್ರಚಾರಪಡಿಸಲಾಗುತ್ತಿದ್ದ. ಈ ಯೋಜನೆಯ ಬಗ್ಗೆ ನಮ್ಮ ಪಕ್ಷದ ಕಾರ್ಯಕರ್ತರು ತಲುಪಿಸುವ ಎಂದು ಕರೆ ನೀಡಿದರು.

ಮಾಜಿ ಸಚಿವ ಹರತಾಳು ಹಾಲಪ್ಪ ಧನಲಕ್ಷ್ಮಿ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ ಗ್ರಾಮ ಪಂಚಾಯತ್ ಸದಸ್ಯ ಪಿಪಿ ರಮೇಶ್ ಮಂಜುಳಾ. ಅಶ್ವಿನಿ ರವಿಶಂಕರ್ ದೀಪ ಸುಧೀರ್ ವಿನೋದ ಹಿರಿಯಣ್ಣ ಜಿ.ಡಿ ಮಲ್ಲಿಕಾರ್ಜುನ ಮಧುಸೂದನ್ ಸುಂದರೇಶ್ ನವಾಡ್ ಯೋಜನೆಯ ಜಿಲ್ಲಾ ವ್ಯವಸ್ಥಾಪಕ ಶರತ್. ವ್ಯವಸ್ಥಾಪಕ ದೇವರಾಜ್ ಇನ್ನಿತರ ಹಾಜರಿದ್ದರು ನಾಗರತ್ನ ಪ್ರಾರ್ಥಿಸಿದರು ಸ್ವಾಗತಿಸಿದರು ನಿರೂಪಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಕ್ರಾಂತಿಕಾರಿ ಬಸವಣ್ಣನವರ ದಾರಿಯಲ್ಲಿ ಸಾಗುವ ಸಂಕಲ್ಪ ಮಾಡೋಣ- ಬಿ.ವೈ.ರಾಘವೇಂದ್ರ

B.Y. Raghavendra ಕಾಯಕ- ದಾಸೋಹ ಮತ್ತು ಸಾಮಾಜಿಕ ನ್ಯಾಯದ ತತ್ವಗಳನ್ನು ಸಾರಿದ...

Bharat Scouts and Guides ಕೃಷಿ ಕ್ಷೇತ್ರ ಮಾಹಿತಿಯಿಂದ ವಿದ್ಯಾರ್ಥಿಗಳು ಪರಿಪೂರ್ಣರಾಗಲು ಸಾಧ್ಯ- ಕೆ.ರವಿ

Bharat Scouts and Guides ಕೃಷಿ ಕ್ಷೇತ್ರದಲ್ಲಿ ಆಗುತ್ತಿರುವ ಪ್ರಗತಿಯ ಬಗ್ಗೆ...

Klive special Article “ಶಂಕರಂ ಲೋಕ ಶಂಕರಂ” ಎನ್.ಜಯಭೀಮ್ ಜೊಯ್ಸ್, ಶಿವಮೊಗ್ಗ

Klive special Article ಶ್ರೀಶಂಕರಾಚಾರ್ಯ ಗುರುಗಳು (ಶ್ರೀಶಂಕರಜಯಂತಿಯ ಸಂದರ್ಭದಲ್ಲಿ)ಪ್ರತಿವರ್ಷ ವೈಶಾಖಮಾಸದ...

RM Manjunath Gowda ಹುಲಿಕಲ್ ಘಾಟಿ ಪ್ರಕರಣ.ಇಂಜಿನಿಯರುಗಳೇ ಹೊಣೆ. ಎಫ್ ಐ ಆರ್ ದಾಖಲಿಸಲು ಎಸ್ ಪಿ.ಅವರಿಗೆ ಮನವಿ ಮಾಡುವೆ- ಆರ್.ಎಂ.ಮಂಜುನಾಥ ಗೌಡ.

RM Manjunath Gowda ಹುಲಿಕಲ್ ಘಾಟಿ ಪ್ರಕರಣದಲ್ಲಿ ಎಫ್ಐಆರ್ ದಾಖಲಾದ ಹಿನ್ನೆಲೆಯಲ್ಲಿ ಮಕೆನಾಡು...