Sunday, August 2, 2026
Sunday, August 2, 2026

Kannadasene Chikkamagaluru ವಾಣಿಜ್ಯ ಮಳಿಗೆಗಳ ಫಲಕಗಳು ಕನ್ನಡದಲ್ಲೇ ಇರಬೇಕೆಂದು ಕ್ರಮಕೈಗೊಳ್ಳಲು ಆಗ್ರಹ

Date:

Kannadasene Chikkamagaluru ಚಿಕ್ಕಮಗಳೂರು ನಗರ ವ್ಯಾಪ್ತಿಯಲ್ಲಿರುವ ಎಲ್ಲಾ ವಾಣಿಜ್ಯ ಮಳಿಗೆಗಳ ನಾಮಫಲಕವನ್ನು ಕನ್ನಡದಲ್ಲೇ ಅಳವಡಿಸುವಂತೆ ಸೂಕ್ತ ಕ್ರಮ ವಹಿಸಬೇಕು ಎಂದು ನಗರಸಭಾ ಅಧ್ಯಕ್ಷರಿಗೆ ಕನ್ನಡಸೇನೆ ಮುಖಂಡರುಗಳು ಒತ್ತಾಯಿಸಿದರು.

ಈ ಸಂಬಂಧ ನಗರಸಭಾ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಅವರಿಗೆ ಮನವಿ ಸಲ್ಲಿಸಿದ ಕನ್ನಡಸೇನೆ ಮುಖಂಡರುಗಳು ಶೇ.70ರಷ್ಟು ಕನ್ನಡದ ಪದಗಳನ್ನೇ ಬಳಸಿ ನಾಮಫಲಕ ಅಳವಡಿಸುವಂತೆ ಸೂಚನೆ ನೀಡಬೇಕು ಎಂದರು.

ಬಳಿಕ ಮಾತನಾಡಿದ ಕನ್ನಡಸೇನೆ ಜಿಲ್ಲಾಧ್ಯಕ್ಷ ಪಿ.ಸಿ.ರಾಜೇಗೌಡ ನಗರದಲ್ಲಿರುವ ವಾಣಜ್ಯ ಮಳಿಗೆಗಳಾದ ಲಾಡ್ಜ್, ಹೋಟೆಲ್, ರೆಸ್ಟೋರೆಂಟ್ ಹಾಗೂ ಹೋಂಸ್ಟೆ, ರೆಸಾರ್ಟ್ಗಳಿಗೆ ಕನ್ನಡದಲ್ಲೇ ಹೆಚ್ಚು ನಾಮಫಲಕ ಹಾಕಿಸಿ ಭಾಷೆಯ ಬೆಳವಣಿಗೆಗೆ ಸಹಕರಿಸಬೇಕು ಎಂದರು.

Kannadasene Chikkamagaluru ಇತ್ತೀಚೆಗೆ ನಾಮಫಲಕಗಳಲ್ಲಿ ಶೇ.30ರಷ್ಟು ಕನ್ನಡ ಪದಗಳ ಬಳಕೆಯಾಗುತ್ತಿದ್ದು ಇದನ್ನು ಕೂಡಲೇ ತಡೆಹಿಡಿ ದು ಶೇ.70 ರಷ್ಟು ಕನ್ನಡವನ್ನು ಬಳಸುವಂತೆ ಅಂಗಡಿ ಮುಂಗಟ್ಟುದಾರರಿಗೆ ಕಡ್ಡಾಯವಾಗಿ ಸೂಚಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕನ್ನಡಸೇನೆ ಆಟೋ ಘಟಕದ ಅಧ್ಯಕ್ಷ ಜಯಪ್ರಕಾಶ್, ಸಂಘಟನಾ ಕಾರ್ಯದರ್ಶಿ ಸತೀಶ್, ಮುಖಂಡರುಗಳಾದ ಶಂಕರೇ ಗೌಡ, ಹರೀಶ್, ಪಾಲಾಕ್ಷಿ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...