Monday, December 15, 2025
Monday, December 15, 2025

Kannada Sahitya Parishath ಡಿ.29 ರಂದು ಶಿವಮೊಗ್ಗ ತಾಲ್ಲೂಕು‌ಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ

Date:

Kannada Sahitya Parishath ಡಿಸೆಂಬರ್ 29ರಂದು ಶಿವಮೊಗ್ಗ ತಾಲೂಕು ಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಶಿವಮೊಗ್ಗ ನಗರದ ಗುರುಪುರದಲ್ಲಿರುವ ಬಿ. ಜಿ. ಎಸ್. ವಸತಿ ಶಾಲಾ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ಸಮ್ಮೇಳನದಲ್ಲಿ ಕಥೆ, ಕವನ, ಪ್ರಬಂಧ ಗೋಷ್ಠಿಯನ್ನು ಏರ್ಪಡಿಸಿದೆ. ಈ ಗೋಷ್ಠಿಯಲ್ಲಿ ಪ್ರೌಢಶಾಲೆಯಲ್ಲಿ ಮತ್ತು ಪಿ.ಯು. ಕಾಲೇಜು ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಭಾಗವಹಿಸಬಹುದು. ಹೆಸರನ್ನು ಡಿಸೆಂಬರ್ 20ರೊಳಗೆ ನೋಂದಣಿಮಾಡಿಕೊಳ್ಳಬೇಕು.

ಮಕ್ಕಳು ತಮ್ಮ ಹೆಸರು, ದೂರವಾಣಿ ಸಂಖ್ಯೆ, ಯಾವ ವಿಚಾರದ ಗೋಷ್ಠಿಯಲ್ಲಿ ಭಾಗವಹಿದ್ದಾರೆ. ಕಥೆ, ಕವನ, ಪ್ರಬಂಧ ಎಷ್ಟು ಬರೆದಿದ್ದಾರೆ ಎಷ್ಟು ಸಮಯದಿಂದ ಬರೆಯುತ್ತಿದ್ದಾರೆ, ಪುಸ್ತಕ ಪ್ರಕಟವಾಗಿದೆಯೇ, ಪತ್ರಿಕೆಗಳಲ್ಲಿ, ಸಂಪುಟಗಳಲ್ಲಿ ಪ್ರಕಟಿಸಿದ್ದರೆ ಮಾಹಿತಿ ನೀಡಬೇಕೆಂದು ಕೋರಲಾಗಿದೆ.

ಹಾಗೆಯೇ ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನು ಆಯ್ಕೆ ಮಾಡಲಾಗುತ್ತಿದ್ದು, ಸಾಹಿತ್ಯ ಸಾಂಸ್ಕೃತಿಕವಾಗಿ
ಗುರುತಿಸಿಕೊಂಡಿದ್ದು, ಸಾಹಿತ್ಯದಲ್ಲಿ ವಿಶೇಷವಾಗಿ ತೊಡಗಿಸಿಕೊಂಡಿರುವ ವಿದ್ಯಾರ್ಥಿಗಳು ತಮ್ಮ ಮಾಹಿತಿಯನ್ನು ನೀಡುವುದು ಸಾಹಿತ್ಯ ಕೃತಿ ಪ್ರಕಟಿಸಿದ ವಿದ್ಯಾರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರು ಆಸಕ್ತ ಮಕ್ಕಳ ಮಾಹಿತಿಯನ್ನು ನೀಡುವುಬೇಕೆಂದು ಕನ್ನಡ ಸಾಹಿತ್ಯ ಪರಿಷತ್ತು, ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ರಿ. ಅಧ್ಯಕ್ಷರಾದ ಡಿ. ಮಂಜುನಾಥ ಅವರು ಕೋರಿದ್ದಾರೆ.

Kannada Sahitya Parishath ಹೆಚ್ಚಿನ ಮಾಹಿತಿಗಾಗಿ
ಜಿಲ್ಲಾ ಸಮಿತಿ, ಆರ್.ಟಿ.ಓ. ಕಚೇರಿ ರಸ್ತೆ,
ಶಿವಮೊಗ್ಗ
9449552795

ಮಹಾದೇವಿ, ಅಧ್ಯಕ್ಷರು, ಕಸಾಪ, ಶಿವಮೊಗ್ಗ ತಾ
8073052370

ಮಂಜಪ್ಪ ಕೆ. ಎಸ್
ಪ್ರಧಾನ ಕಾರ್ಯದರ್ಶಿ
9449921957
ಡಿ. ಗಣೇಶ್,
ಕಾರ್ಯದರ್ಶಿ, ಜಿಲ್ಲಾ ಕಸಾಪ
*9901331667 ಇವರನ್ನು ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...