Sunday, April 20, 2025
Sunday, April 20, 2025

Shivamogga DC Dr. Selvamani R ಇವಿಎಂ & ವಿವಿಪ್ಯಾಟ್ ಬಗ್ಗೆ ಪೂರ್ಣ ಮಾಹಿತಿಯಿಂದ ಕಾರ್ಯ ನಿರ್ವಹಿಸಿ- ಡಾ.ಸೆಲ್ವಮಣಿ

Date:

Shivamogga DC Dr. Selvamani R ಇವಿಎಂ ಮತ್ತು ವಿವಿಪ್ಯಾಟ್ ಕುರಿತು ಸಮಗ್ರವಾಗಿ ತಿಳಿದುಕೊಂಡು ಅತಿ ಜಾಗೃತೆಯಿಂದ, ಸೂಕ್ಷ್ಮವಾಗಿ ನಿರ್ವಹಣೆ ಮಾಡಬೇಕೆಂದು ಚುನಾವಣೆಗೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಸೂಚನೆ ನೀಡಿದರು.

ಶಿವಮೊಗ್ಗದ ಫ್ರೀಡಂ ಪಾರ್ಕ್ ಬಳಿಯ ಗಾಂಧಿ ಭವನದಲ್ಲಿ ಇಂದು ಅಧಿಕಾರಿಗಳಿಗೆ ಮೊಬೈಲ್ ಡೆಮಾನ್‍ಸ್ಟ್ರೇಷನ್ ವೆಹಿಕಲ್(ಎಂಡಿವಿ) ಮೂಲಕ ಆಯೋಜಿಸಲಾಗಿದ್ದ ಇವಿಎಂ ಮತ್ತು ವಿವಿಪ್ಯಾಟ್ ಪ್ರಾತ್ಯಕ್ಷಿಕೆ ಹಾಗೂ ಅರಿವು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಇಂದಿನ ಪ್ರಾತ್ಯಕ್ಷಿಕೆ ಮತ್ತು ಅರಿವು ಕಾರ್ಯಕ್ರಮದಲ್ಲಿ ಮಾಸ್ಟರ್ ತರಬೇತುದಾರರು ಸಮಗ್ರವಾಗಿ ಇವಿಎಂ ಮತ್ತು ವಿವಿಪ್ಯಾಟ್ ಕಾರ್ಯಚಟುವಟಿಕೆ ಹಾಗೂ ಬಳಕೆ ವಿಧಾನವನ್ನು ತಿಳಿಸಿಕೊಡುವರು. ಅದನ್ನು ಸಮರ್ಪಕವಾಗಿ ತಿಳಿದುಕೊಂಡು ಇಂದು ಪಾಲ್ಗೊಂಡಿರುವ 7 ತಂಡಗಳು ತಾವು ಸಹ ಪ್ರಾತ್ಯಕ್ಷಿಕೆ ನೀಡಬೇಕು ಎಂದರು.

ಇವಿಎಂ ಮಷೀನ್‍ಗಳು ಅತ್ಯಂತ ಸೂಕ್ಷ್ಮವಾಗಿದ್ದು ಅವುಗಳನ್ನು ಅತಿ ಎಚ್ಚರಿಕೆಯಿಂದ ನಿರ್ವಹಿಸಬೇಕು. ಚುನಾವಣಾ ಆಯೋಗ ಈ ವಿಷಯವಾಗಿ ಅತ್ಯಂತ ನಿರ್ದಿಷ್ಟವಾಗಿದ್ದು, ಯಾವುದೇ ತಪ್ಪುಗಳು ಜರುಗದಂತೆ ಜಾಗೃತೆ ವಹಿಸಬೇಕು. ಇವಿಎಂ ಗಳ ಸಾಗಾಣಿಕೆ, ಶೇಖರಣೆ ಮತ್ತು ಬಳಕೆ ಎಲ್ಲವೂ ಅತ್ಯಂತ ಜವಾಬ್ದಾರಿಯಿಂದ ಕೂಡಿದ್ದು ಎಚ್ಚರಿಕೆಯಿಂದ ನಿರ್ವಹಣೆ ಮಾಡಬೇಕು. ಇಲ್ಲವಾದಲ್ಲಿ ಸಂಬಂಧಿಸಿದ ಅಧಿಕಾರಿಗಳೇ ಜವಾಬ್ದಾರರಾಗುತ್ತಾರೆ. ಇವಿಎಂ ಮತ್ತು ವಿವಿಪ್ಯಾಟ್ ನಲ್ಲಿ ತಾಂತ್ರಿಕ ತೊಂದರೆಗಳು, ಇತರೆ ಸ್ಪಷ್ಟನೆಗಳು ಇದ್ದಲ್ಲಿ ಮಾಸ್ಟರ್ ಟ್ರೈನರ್ ಮತ್ತು ತಂತ್ರಜ್ಞರೊಂದಿಗೆ ಚರ್ಚಿಸಿ ಸರಿಪಡಿಸಿಕೊಳ್ಳುವಂತೆ ತಿಳಿಸಿದರು.

Shivamogga DC Dr. Selvamani R ಮಾಸ್ಟರ್ ಟ್ರೈನರ್ ರವಿಕುಮಾರ್ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು. ಈ ವೇಳೆ ಜಿಲ್ಲಾ ಪಂಚಾಯತ್ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ, ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ, ಎಲ್ಲ ತಾಲ್ಲೂಕುಗಳ ತಹಶೀಲ್ದಾರರು, ಮಾಸ್ಟರ್ ತರಬೇತುದಾರರು, ಅಧಿಕಾರಿ/ಸಿಬ್ಬಂದಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Chidambara Mahaswami ಗುಬ್ಬಿ ಚಿದಂಬರಾಶ್ರಮದಲ್ಲಿಎಲೆಕ್ಟ್ರಿಷಿಯನ್ ವೃತ್ತಿ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Sri Chidambara Mahaswami ಶ್ರೀ ಶ್ರೀ ಚಿದಂಬರ ಮಹಾಸ್ವಾಮಿಗಳು ಶ್ರೀ ಚಿದಂಬರಾಶ್ರಮವನ್ನು...

CM Siddharamaih ಪೌರ ಕಾರ್ಮಿಕರ ಸೇವೆ ಖಾಯಂಗೊಳಿಸುವ ಕಾರ್ಯ ನಡೆಯುತ್ತಿದೆ- ಸಿದ್ಧರಾಮಯ್ಯ

CM Siddharamaih ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ.ಈಗಾಗಲೇ...

DC Shivamogga ಪರೀಕ್ಷಾರ್ಥಿಯ ಜನಿವಾರ ತೆಗೆಸಿದ ಪ್ರಕರಣ, ಈರ್ವರು ಗೃಹ ರಕ್ಷಕ ದಳ ಸಿಬ್ಬಂದಿ ಅಮಾನತು-ಗುರುದತ್ತ‌ ಹೆಗಡೆ

DC Shivamogga ಶಿವಮೊಗ್ಗ ನಗರದ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಇತ್ತೀಚಿಗೆ...

Mental health ಮಾನಸಿಕ ಸಮಸ್ಯೆಗಳು‌‌ ಮತ್ತು‌ ಸೂಕ್ತ ಪರಿಹಾರಗಳು ...

Mental health ಮಾನಸಿಕ ಖಾಯಿಲೆಗಳು ಯಾರಿಗಾದರೂ ಬರಬಹುದು : ಸೂಕ್ತ...