Sunday, August 2, 2026
Sunday, August 2, 2026

B. Y. Vijayendra ಪ್ರಧಾನಿ ಮೋದಿ ಭೇಟಿ ಮಾಡಿದ ಬಿ.ವೈ.ವಿಜಯೇಂದ್ರ,ಭಾವ ಪರವಶ

Date:

B. Y. Vijayendra ಬಿ.ವೈ. ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ನೆಚ್ಚಿನ ಪ್ರಧಾನಿ ಶ್ರೀ. ನರೇಂದ್ರ ಮೋದಿ ಅವರನ್ನು ಇಂದು ಭೇಟಿಯಾಗಿ ಆಶೀರ್ವಾದ ಪಡೆದರು.

ಈ ಸಂದರ್ಭ ಸಂತ ತೇಜಸ್ಸಿನ ಭಾರತಾಂಬೆಯ ಮಹಾನ್ ಸುಪುತ್ರನ ದರ್ಶನ ಪಡೆದ ಅನುಭವವಾಯಿತು ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

ರಾಷ್ಟ್ರ ಭಕ್ತಿ, ಸಂಘ ನಿಷ್ಠೆ, ಸಮರ್ಪಣೆ, ಶಿಸ್ತು, ಬದ್ಧತೆ, ಕ್ರಿಯಾಶೀಲತೆ, ಸಾಧಿಸುವ ಛಲದ ಗುರಿ ಇವೆಲ್ಲಕ್ಕೂ ಭಾರತದ ಇತಿಹಾಸದಲ್ಲಿ ಉದಾಹರಿಸಬಲ್ಲ ಏಕೈಕ ವ್ಯಕ್ತಿತ್ವ ಮಾನ್ಯ ಮೋದಿ ಜೀ ಅವರದು, ಅವರ ಸ್ವಾವಲಂಬಿ ಹಾಗೂ ಬಲಿಷ್ಠ ಭಾರತ ಕಟ್ಟುವ ಮಹಾನ್ ಸಂಕಲ್ಪ ಪರಿಪೂರ್ಣವಾಗಿ ಈಡೇರಿದರೆ ವಿಶ್ವಮಟ್ಟದಲ್ಲಿ ನಮ್ಮ ಭವ್ಯ ಭಾರತ ಅಗ್ರಸ್ಥಾನದಲ್ಲಿ ನಿಲ್ಲಲಿದೆ. ಈ ನಿಟ್ಟಿನಲ್ಲಿ ಅವರೊಂದಿಗೆ ಹೆಗಲು ಕೊಡುವ ಪುಣ್ಯದ ಕಾರ್ಯದಲ್ಲಿ ಸಮರ್ಪಿಸಿಕೊಳ್ಳಲು ‘ಬಿಜೆಪಿ-ಕರ್ನಾಟಕ’ದ ರಥ ಮುನ್ನಡೆಸುವ ಜವಾಬ್ದಾರಿ ವಹಿಸಿಕೊಟ್ಟಿರುವುದು
ನನ್ನ ಸೌಭಾಗ್ಯ ಎಂಬುದು ನನ್ನ ವಿನಮ್ರ ಭಾವವಾಗಿದೆ.
2024 ರ ಮಹಾ ಚುನಾವಣೆಯಲ್ಲಿ
B. Y. Vijayendra ಕರ್ನಾಟಕದಲ್ಲಿ ಅತಿ ಹೆಚ್ಚು ಲೋಕಸಭಾ ಸ್ಥಾನಗಳನ್ನು ಮೋದಿ ಜೀ ಅವರ ಮಡಿಲಿಗೆ ಸಮರ್ಪಿಸಬೇಕೆಂಬ ನನ್ನ ಹೆಗ್ಗುರಿಯ ಹೆಜ್ಜೆಗೆ ಇಂದಿನ ಭೇಟಿಯ ಅವರ ಪ್ರೇರಣೆಯ ಮಾತುಗಳು ನನ್ನಲ್ಲಿ ಅದಮ್ಯ ಆತ್ಮ ವಿಶ್ವಾಸ ಮೂಡಿಸಿದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...