Friday, March 20, 2026
Friday, March 20, 2026

Cybercrime: ಮುಂಜಾಗ್ರತೆ ಮೂಲಕ ಅನೇಕ ಅಪರಾಧ ತಡೆ ಸಾಧ್ಯ-ಅನಿಲ್ ಕುಮಾರ್ ಭೂಮರೆಡ್ಡಿ

Date:

Cybercrime: ಸಾರ್ವಜಿಕರು ಮುಂಜಾಗ್ರತೆ ವಹಿಸುವ ಮೂಲಕ ಮುಂಬರುವ ಅನೇಕ ಅಪರಾಧಗಳನ್ನು ತಡೆಯಬಹುದು. ಆದ್ದರಿಂದ ಯಾರೇ ಅಪರಿಚಿತರೊಂದಿಗೆ ವ್ಯವಹರಿಸುವಾಗ ಒಂದು ಕ್ಷಣ ಯೋಚಿಸಿ ಎಚ್ಚರಿಕೆಯಿಂದ ಇರಬೇಕೆಂದು ಎಎಸ್‍ಪಿ ಅನಿಕುಮಾರ್ ಭೂಮರಡ್ಡಿ ತಿಳಿಸಿದರು.


ಜಿಲ್ಲಾ ಪೊಲೀಸ್ ಮತ್ತು ಜಯನಗರ ಪೊಲೀಸ್ ಠಾಣೆ ವತಿಯಿಂದ ಅಪರಾಧ ತಡೆ ಮಾಚಾರಣೆ ಅಂಗವಾಗಿ ಡಿ.20 ರಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳಿಗೆ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಅವಸರವೇ ಅನಾಹುತಕ್ಕೆ ಕಾರಣವಾಗುತ್ತದೆ. ಇತ್ತೀಚೆಗೆ ಸರಗಳ್ಳತನ, ಮನೆಗೆ ಬಂದು ಬಂಗಾರ ಇತರೆ ಬೆಲೆ ಬಾಳುವ ವಸ್ತುವನ್ನು ಪಾಲಿಶ್ ಮಾಡುವುದಾಗಿ ಹೇಳಿ ಬರುವುದು ಸೇರಿದಂತೆ ಅನೇಕ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು.
ವಿಜ್ಞಾನ ಮತ್ತು ತಂತ್ರಜ್ಞಾನ ಬೆಳೆದಂತೆ ಅಪರಾಧದ ಸ್ವರೂಪ ಕೂಡ ಹೊಸ ಆಯಾಮದಲ್ಲಿ ಬದಲಾಗುತ್ತಿದೆ. ವರ್ಚುವಲ್ ಜಗತ್ತಿನ ಮೂಲಕ ಸೈಬರ್ ಅಪರಾಧಗಳು ದಿನೇ ದಿನೇ ಹೆಚ್ಚುತ್ತಿವೆ. ಆದ್ದರಿಂದ ಜನರು ಅತಿ ಎಚ್ಚರಿಕೆಯಿಂದ ಇರಬೇಕು.
ಸಾರ್ವಜನಿಕರು ಒಂದಕ್ಕಿಂತ ಹೆಚ್ಚು ದಿವಸ ಮನೆಗೆ ಬೀಗಹಾಕಿಕೊಂಡು ಹೋಗುವಾಗ ಸ್ಥಳೀಯ ಪೆÇಲೀಸ್ ಠಾಣೆಗೆ ಮಾಹಿತಿ ನೀಡುವುದು ಹಾಗೂ ಬೆಲೆ ಬಾಳುವ ವಸ್ತುಗಳನ್ನು ಬ್ಯಾಂಕ್ ಲಾಕರ್‍ನಲ್ಲಿ ಇಡುವುದು. ಮನೆಯಿಂದ ಹೊರಗೆ ಹೋಗುವಾಗ ಬಾಗಿಲಿಗೆ ಟಾಪ್‍ಲಾಕ್‍ನ್ನು ಹಾಕುವ ಬದಲು ಇಂಟರ್‍ಲಾಕ್ ಮಾಡುವುದು ಹಾಗೂ ಹಾಲಿನವರಿಗೆ, ಪೇಪರ್ ಹಾಕುವವರಿಗೆ ಮನೆಯಿಂದ ಹೊರಗೆ ಹೋಗುವಾಗ ಪೇಪರ್ ಮತ್ತು ಹಾಲು ಹಾಕದಂತೆ ತಿಳಿಸುವುದು. ಮನೆಯ ಕಿಟಕಿಯ ಪಕ್ಕದಲ್ಲಿ ಬೆಲೆಬಾಳುವ ವಸ್ತುಗಳನ್ನು ಇಡದಂತೆ ಎಚ್ಚರ ವಹಿಸುವುದು. ಹೆಂಗಸರು ಒಬ್ಬಂಟಿಯಾಗಿ ರಸ್ತೆಯಲ್ಲಿ ಓಡಾಡುವ ಸಮಯದಲ್ಲಿ ಕುತ್ತಿಗೆಯಲ್ಲಿನ ಬಂಗಾರದ ಆಭರಣಗಳು ಹೊರಗೆ ಎದ್ದುಕಾಣದಂತೆ ಮುಂಜಾಗ್ರತೆ ವಹಿಸುವುದು.
ಸಾರ್ವಜನಿಕರು ತಮ್ಮ ದಾಖಲಾತಿ ಹಾಗೂ ಮೊಬೈಲ್ ಇನ್ನಿತರೆ ವಸ್ತುಗಳನ್ನು ಕಳೆದುಕೊಂಡಾಗ ಗೂಗಲ್ ಪ್ಲೇ ಸ್ಟೋರ್‍ನಲ್ಲಿ ಕೆಎಸ್‍ಪಿ ಆಪ್ ಡೌನ್‍ಲೋಡ್ ಮಾಡಿಕೊಂಡು ಇ-ಲಾಸ್ಟ್ ಕಂಪ್ಲೇಂಟ್ ರಿಜಿಸ್ಟರ್ ಮಾಡಿಕೊಳ್ಳುವುದು. ಯಾವುದೇ ತುರ್ತು ಸಮಯದಲ್ಲಿ 112 ನಂಬರ್‍ಗೆ ಕರೆ ಮಾಡುವುದು. ರಸ್ತೆ ಸಂಚಾರದ ಸಮಯದಲ್ಲಿ ರಸ್ತೆ ಹಾಗೂ ಟ್ರಾಫಿಕ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವುದು. ಜಾನುವಾರುಗಳನ್ನು ಸಾಕಿದ್ದಲ್ಲಿ ಅವುಗಳ ರಕ್ಷಣೆಗೆ ಕೊಟ್ಟಿಗೆ ಸುತ್ತ ಬೆಳಕಿನ ಹಾಗೂ ಮನೆಯಲ್ಲಿ ನೋಡಿದರೆ ಕಾಣುವ ಹಾಗೆ ನೋಡಿಕೊಳ್ಳುವುದು. ಸಾಧ್ಯವಾದಷ್ಟು ತಮ್ಮ ಮನೆಗಳಿಗೆ ಹಾಗೂ ಅಂಗಡಿಗಳಿಗೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿಕೊಳ್ಳುವುದು.
ಬ್ಯಾಂಕ್ ಅಧಿಕಾರಿ, ಬ್ಯಾಂಕ್ ಮ್ಯಾನೇಜರ್ ಎಂದು ತಿಳಿಸಿ ನಿಮ್ಮ ಎಟಿಎಂ ಕಾರ್ಡ್ ಬ್ಲಾಕ್ ಆಗಿದೆ ಎಂದು ಫೆÇೀನ್ ಮಾಡಿ. ಕಾರ್ಡ್ ನಂ/ಸಿವಿವಿ ನಂ/ಓಟಿಪಿ ಅನ್ನು ಪಡೆದು ಮೋಸ ಮಾಡುವವರ ಬಗ್ಗೆ ಎಚ್ಚರ ಇರಲಿ, ಯಾರಿಗೂ ಯಾವುದೇ ಕಾರಣಕ್ಕೂ ಓಟಿಪಿ ಅನ್ನು ನೀಡಬೇಡಿ. ಪ್ಲೇಸ್ಟೋರ್‍ನಲ್ಲಿ ಸಿಗುವ ಆಪ್‍ಗಳೆಲ್ಲ ಅಧಿಕೃತವಲ್ಲ. ನಕಲಿ ಆಪ್‍ಗಳ ಮೂಲಕ ಪಾರ್ಟ್ ಟೈಮ್ ಜಾಬ್ ನೀಡುವುದಾಗಿ, ಆನ್‍ಲೈನ್ ಲೋನ್ ತೆಗೆಯುವುದಾಗಲಿ, ಸೋಲಾರ್/ಎನರ್ಜಿ/ಅಮೇಜಾನ್ ಮುಂತಾದ ಮೋಸದ ಆಪ್ ಬಳಕೆ ಮೂಲಕ ಹಣ ಹೂಡಿಕೆ ಮಾಡಿ ಮೋಸ ಹೋಗಬೆಡಿ.
Cybercrime: ಕೌನ್ ಬನೇಗಾ ಕರೋಡ್‍ಪತಿ/ ಬಾರಿ ಮೊತ್ತದ ಲಾಟರಿ/ ದಿನಪತ್ರಿಕೆ/ ಟಿವಿ ಮಾಧ್ಯಮಗಳ ಮೂಲಕ ಜಾಹೀರಾತು ನೀಡಿ ಆಮಿಷಗಳ ಮೂಲಕ ಟ್ರಾನ್ಸ್‍ಪೋರ್ಟ್ ಫೀ ಇತ್ಯಾದಿ ಫೀಗಳೆಂದು ಅವರ ಖಾತೆಗಳಿಗೆ ಹಣ ಹಾಕಿಸಿಕೊಳ್ಳುವ ವಂಚಕರಿಂದ ದೂರವಿರಿ. ಸಾರ್ವಜನಿಕರು ಸೈಬರ್ ಕ್ರೈಂಗೆ ಸಂಬಂಧಪಟ್ಟ ದೂರುಗಳನ್ನು ಆನ್‍ಲೈನ್ ಮೂಲಕವೂ ದಾಖಲಿಸಬಹುದಾಗಿದ್ದು ವೆಬ್‍ಸೈಟ್ ವಿಳಾಸ : www.cybercrime.gov.in ಮತ್ತು ಜಿಲ್ಲಾ ಪೆÇಲೀಸ್ ಕಂಟ್ರೋಲ್ ರೂಂ ನಂ.112/08182-261413, ಸಿ.ಇ.ಎನ್.ಕ್ರೈಂ ಪೆÇಲೀಸ್ ಠಾಣೆ ನಂ.08182-261426/9480803383 ನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪೊಲೀಸ್ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...