Tuesday, October 1, 2024
Tuesday, October 1, 2024

Govinda Karajola ಮಾಜಿ ಡಿಸಿಎಂ ಗೋವಿಂದ ಕಾರಜೋಳ ಮೇಲೆ ಹಲ್ಲೆ ನಡೆಸಿದವರ ಮೇಲೆ ಕ್ರಮಕೈಗೊಳ್ಳಲು ಒತ್ತಾಯ

Date:

Govind Karjol ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳರವರ ಮೇಲೆ ಹಲ್ಲೆಗೆ ಯತ್ನಿಸಿ ಶಾಂತಿ ಕದಡಲು ಪ್ರಯತ್ನಿಸಿರುವವರನ್ನು ಕೂಡಲೇ ಬಂಧಿಸಬೇಕು ಎಂದು ಜಿಲ್ಲಾ ಬಿಜೆಪಿ ಮುಖಂಡರು ಪೊಲೀಸ್ ವರಿಷ್ಟಾಧಿಕಾರಿಯನ್ನು ಒತ್ತಾಯಿಸಿದರು.

ಈ ಸಂಬಂಧ ಜಿಲ್ಲಾ ಸಹಾಯಕ ಪೊಲೀಸ್ ನಿರೀಕ್ಷಕ ಕಿಣಿ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಮುಖಂ ಡರುಗಳು ಚಿತ್ರದುರ್ಗಾದಲ್ಲಿ ಕೆಲವು ಕಾಂಗ್ರೆಸ್ ಮುಖಂಡರುಗಳು ಗೋವಿಂದ ಕಾರಜೋಳ ಅವರು ಪತ್ರಿಕಾಗೋಷ್ಠಿ ನಡೆಸುವ ಸಂದರ್ಭದಲ್ಲಿ ಅಡ್ಡಿಪಡಿಸಿ ಬೆದರಿಕೆ ಹಾಕಿ ಹಲ್ಲೆಗೂ ಯತ್ನ ನಡೆಸಿದ್ದಾರೆ ಎಂದು ಆರೋಪಿಸಿದರು.

Govind Karjol ಭಾರತ ದೇಶದಲ್ಲಿ ವಾಕ್‌ಸ್ವಾತಂತ್ರ್ಯವನ್ನು ನಿಗ್ರಹಿಸಲು ಕಾಂಗ್ರೆಸ್ ಮುಖಂಡರುಗಳ ನಡೆ ಸಂವಿಧಾನ ವಿರೋಧಿಯಾಗಿದೆ. ಕೂಡಲೇ ಸಾರ್ವಜನಿಕ ಶಾಂತಿ ಕದಡುವವರನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರುಗಳಾದ ಕೇಶವ, ಎಸ್.ಡಿ.ಎಂ. ಮಂಜು, ಶಿವಪ್ರಸಾದ್, ನರಸಿಂಹ ಮೂರ್ತಿ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...