Saturday, September 28, 2024
Saturday, September 28, 2024

Red Cross Sanjeevini Blood Centre ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೇ ರಕ್ತದಾನ ಮಾಡಬೇಕು- ಎಂ.ಜಯದೇವ್

Date:

Red Cross Sanjeevini Blood Centre ಇಂದಿನ ದಿನಗಳಲ್ಲಿ ರಕ್ತದ ಅವಶ್ಯಕತೆ ತುಂಬಾ ಇದ್ದು, ರಕ್ತ ಉತ್ಪಾದಿಸಲು ಸಾಧ್ಯವಿಲ್ಲ. ರಕ್ತದಾನ ಶಿಬಿರಗಳಿಂದಲೇ ರಕ್ತ ಸಂಗ್ರಹಿಸಬೇಕಿದೆ. ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿ ರಕ್ತದಾನ ಮಾಡಬೇಕು ಎಂದು ಕಾಸ್ಮೋ ಪಾಲಿಟನ್ ಅಧ್ಯಕ್ಷ ಜಯದೇವ್ ಎಂ ಹೇಳಿದರು.

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಗೋಪಾಲಗೌಡ ಬಡಾವಣೆಯಲ್ಲಿ ನಿಸರ್ಗ ಉದ್ಯಾನವನ ಸಂಘ, ನಿಸರ್ಗ ಮಹಿಳಾ ಸಂಘ, ಕಾಸ್ಮೋಪಾಲಿಟನ್ ಲಯನ್ಸ್ ಕ್ಲಬ್, ರೆಡ್‌ಕ್ರಾಸ್ ಸಂಜೀವಿನಿ ರಕ್ತಕೇಂದ್ರ, ನಮ್ಮ ಯೋಗ ಕುಟುಂಬ ಶಿವಮೊಗ್ಗ ಸಂಯುಕ್ತ ಆಶ್ರಯದಲ್ಲಿ “ಸ್ವಯಂ ಪ್ರೇರಿತ ರಕ್ತದಾನ ಶಿಬಿರ”ದಲ್ಲಿ ಮಾತನಾಡಿದರು.

ಗರ್ಭಿಣಿ ಸ್ತೀಯರಿಗೆ ಚಿಕಿತ್ಸೆ ಮಾಡುವ ಸಂದರ್ಭದಲ್ಲಿ, ವ್ಯಕ್ತಿ ಅಪಘಾತಕ್ಕಿಡಾದ ಚಿಕಿತ್ಸೆ ಸಂದರ್ಭಗಳಲ್ಲಿ ರಕ್ತದ ಅವಶ್ಯಕತೆ ತುಂಬಾ ಇರುತ್ತದೆ. ಒಂದು ಜೀವವನ್ನು ಉಳಿಸಲು ರಕ್ತವೇ ಮುಖ್ಯ. ಯಾವುದೇ ಪ್ರತಿಫಲ ನೀರೀಕ್ಷಿಸದೆ ರಕ್ತದಾನ ಮಾಡಬೇಕು ಎಂದು ತಿಳಿಸಿದರು.

Red Cross Sanjeevini Blood Centre ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್ ಮಾತನಾಡಿ, ರಕ್ತದಾನ ಮಾಡುವುದರಿಂದ ದಾನಿಯು ಕ್ಯಾನ್ಸರ್, ಹೃದಯಾಘಾತದಂತಹ ದೊಡ ದೊಡ್ದ ಕಾಯಿಲೆಗಳಿಂದ ದೂರವಾಗಬಹುದೆಂದು ವೈದ್ಯಕೀಯ ವರದಿಗಳಿಂದ ಕಂಡುಬರುತ್ತದೆ. ರಕ್ತವನ್ನು 18 ವರ್ಷ ವಯಸ್ಸಿನಿಂದ 65 ವಯಸ್ಸಿನ ಯಾರೊಬ್ಬರು ರಕ್ತದಾನ ಮಾಡಬಹುದು. ರಕ್ತದಾನ ಮಾಡುವುರಿಂದ ದೇಹದಲ್ಲಿ ಹೊಸ ರಕ್ತ ಉತ್ಪತ್ತಿಯಾಗಲು ಸಹಕಾರಿಯಾಗುವ ಜೊತೆಗೆ ಕೊಬ್ಬಿನ ಅಂಶ ಕರಗಿ ಸುಲಲಿತ ರಕ್ತ ಸಂಚಾರಕ್ಕೆ ಸಹಾಯವಾಗುತ್ತದೆ ಎಂದರು.

ರಕ್ತದ ಒತ್ತಡ ಕಡಿಮೆಯಾಗಿ ಕಾರ್ಯತತ್ವರತೆ ಹಾಗೂ ಜ್ಞಾಪಕಾ ಶಕ್ತಿ ವೃದ್ದಿಯಾಗಲು ಸಹಕಾರಿ ಆಗುತ್ತದೆ. ರಕ್ತದಾನದ ಅರಿವು ಮಾಡಿಸಲು ಪ್ರತಿ ವರ್ಷ ಜೂನ್ 14ರಂದು ವಿಶ್ವ ರಕ್ತದಾನ ದಿನ ಆಚರಿಸಲಾಗುತ್ತದೆ ಎಂದು ಹೇಳಿದರು.

ನಮ್ಮ ಯೋಗ ಕುಟುಂಬದ ಅಧ್ಯಕ್ಷ ಹೊನ್ನಪ್ಪ ಅವರು ಗಿಡಕ್ಕೆ ನೀರು ಹಾಕುವುದರ ಮುಖಾಂತರ ಉದ್ಘಾಟಿಸಿದರು. ಶಿಬಿರದಲ್ಲಿ ಯೋಗ ಕುಟುಂಬದವರು, ಬಡಾವಣೆಯ ನಿವಾಸಿಗಳು ಮತ್ತು ಲಯನ್ಸ್ ಕ್ಲಬ್ ಸದಸ್ಯರು ರಕ್ತದಾನ ಮಾಡಿದರು.
ಗೋಪಾಲಗೌಡ ನಿವಾಸಿಗಳ ಸಂಘದ ಅಧ್ಯಕ್ಷ ಮೋಹನ್‌ಮೂರ್ತಿ, ಕಾರ್ಯದರ್ಶಿ ಕೃಷ್ಣಮೂರ್ತಿ, ಖಜಾಂಚಿ ಮುರುಗೇಶ್, ನಿರ್ದೇಶಕರು, 113 ಬಾರಿ ರಕ್ತದಾನ ಮಾಡಿದ ಧರಣೇಂದ್ರ ದಿನಕರ್, ಡಾ. ಮೇಘನಾ, ಸಿಂಧೂ, ರೆಡ್ ಕ್ರಾಸ್ ಕಾರ್ಯದರ್ಶಿ ಡಾ. ದಿನೇಶ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shikaripura News ಅಹಿಂದ ಸಂಘಟನೆ ಕರೆ ನೀಡಿದ್ದ ಶಿಕಾರಿಪುರ ಬಂದ್ ಯಶಸ್ವಿ

Shikaripura News ನಾಡಿನ ಅಹಿಂದ ವರ್ಗಕ್ಕೆ ಸೇರಿದ ಜನರ ಹಿತ ಕಾಯುವ...

New Delhi News ಅಪಹರಣಕ್ಕೊಳಗಾಗಿದ್ದ ಬಾಲಕನೇ ಇಂದು ವಕೀಲನಾಗಿ ಅದೇ ಕಿಡ್ನಾಪರ್ಸ್ ಗೆ ಶಿಕ್ಷೆ ಕೊಡಿಸಿದ

New Delhi News ಈ ಹಿಂದೆ 7 ವರ್ಷದವನಾಗಿದ್ದಾಗ ಅಪಹರಣಕ್ಕೊಳಗಾಗಿದ್ದ ಬಾಲಕ...

Kasturi Rangan Comittee Report ಕಸ್ತೂರಿ ರಂಗನ್ ವರದಿ ತಿರಸ್ಕಾರ: ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

Kasturi Rangan Comittee Report ಜುಲೈನಲ್ಲಿ ಕೇಂದ್ರ ಸರ್ಕಾರ 6ನೇ ಕರಡು...

Hosanagara News ಇಸ್ಪೀಟ್ ಅಡ್ಡೆಗೆ ಪೊಲೀಸರ ದಾಳಿ – 11 ಜನರ ಬಂಧನ 17,640 ರೂಪಾಯಿ ವಶ

Hosanagara News ಹೊಸನಗರ ತಾಲ್ಲೂಕು ಮಾರುತೀಪುರ ಗ್ರಾಮ ಪಂಚಾಯಿತಿಯ ಹಳೆಬಾಣಿಗ ರಸ್ತೆಯ...