Monday, February 2, 2026
Monday, February 2, 2026

Red Cross Sanjeevini Blood Centre ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೇ ರಕ್ತದಾನ ಮಾಡಬೇಕು- ಎಂ.ಜಯದೇವ್

Date:

Red Cross Sanjeevini Blood Centre ಇಂದಿನ ದಿನಗಳಲ್ಲಿ ರಕ್ತದ ಅವಶ್ಯಕತೆ ತುಂಬಾ ಇದ್ದು, ರಕ್ತ ಉತ್ಪಾದಿಸಲು ಸಾಧ್ಯವಿಲ್ಲ. ರಕ್ತದಾನ ಶಿಬಿರಗಳಿಂದಲೇ ರಕ್ತ ಸಂಗ್ರಹಿಸಬೇಕಿದೆ. ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿ ರಕ್ತದಾನ ಮಾಡಬೇಕು ಎಂದು ಕಾಸ್ಮೋ ಪಾಲಿಟನ್ ಅಧ್ಯಕ್ಷ ಜಯದೇವ್ ಎಂ ಹೇಳಿದರು.

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಗೋಪಾಲಗೌಡ ಬಡಾವಣೆಯಲ್ಲಿ ನಿಸರ್ಗ ಉದ್ಯಾನವನ ಸಂಘ, ನಿಸರ್ಗ ಮಹಿಳಾ ಸಂಘ, ಕಾಸ್ಮೋಪಾಲಿಟನ್ ಲಯನ್ಸ್ ಕ್ಲಬ್, ರೆಡ್‌ಕ್ರಾಸ್ ಸಂಜೀವಿನಿ ರಕ್ತಕೇಂದ್ರ, ನಮ್ಮ ಯೋಗ ಕುಟುಂಬ ಶಿವಮೊಗ್ಗ ಸಂಯುಕ್ತ ಆಶ್ರಯದಲ್ಲಿ “ಸ್ವಯಂ ಪ್ರೇರಿತ ರಕ್ತದಾನ ಶಿಬಿರ”ದಲ್ಲಿ ಮಾತನಾಡಿದರು.

ಗರ್ಭಿಣಿ ಸ್ತೀಯರಿಗೆ ಚಿಕಿತ್ಸೆ ಮಾಡುವ ಸಂದರ್ಭದಲ್ಲಿ, ವ್ಯಕ್ತಿ ಅಪಘಾತಕ್ಕಿಡಾದ ಚಿಕಿತ್ಸೆ ಸಂದರ್ಭಗಳಲ್ಲಿ ರಕ್ತದ ಅವಶ್ಯಕತೆ ತುಂಬಾ ಇರುತ್ತದೆ. ಒಂದು ಜೀವವನ್ನು ಉಳಿಸಲು ರಕ್ತವೇ ಮುಖ್ಯ. ಯಾವುದೇ ಪ್ರತಿಫಲ ನೀರೀಕ್ಷಿಸದೆ ರಕ್ತದಾನ ಮಾಡಬೇಕು ಎಂದು ತಿಳಿಸಿದರು.

Red Cross Sanjeevini Blood Centre ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್ ಮಾತನಾಡಿ, ರಕ್ತದಾನ ಮಾಡುವುದರಿಂದ ದಾನಿಯು ಕ್ಯಾನ್ಸರ್, ಹೃದಯಾಘಾತದಂತಹ ದೊಡ ದೊಡ್ದ ಕಾಯಿಲೆಗಳಿಂದ ದೂರವಾಗಬಹುದೆಂದು ವೈದ್ಯಕೀಯ ವರದಿಗಳಿಂದ ಕಂಡುಬರುತ್ತದೆ. ರಕ್ತವನ್ನು 18 ವರ್ಷ ವಯಸ್ಸಿನಿಂದ 65 ವಯಸ್ಸಿನ ಯಾರೊಬ್ಬರು ರಕ್ತದಾನ ಮಾಡಬಹುದು. ರಕ್ತದಾನ ಮಾಡುವುರಿಂದ ದೇಹದಲ್ಲಿ ಹೊಸ ರಕ್ತ ಉತ್ಪತ್ತಿಯಾಗಲು ಸಹಕಾರಿಯಾಗುವ ಜೊತೆಗೆ ಕೊಬ್ಬಿನ ಅಂಶ ಕರಗಿ ಸುಲಲಿತ ರಕ್ತ ಸಂಚಾರಕ್ಕೆ ಸಹಾಯವಾಗುತ್ತದೆ ಎಂದರು.

ರಕ್ತದ ಒತ್ತಡ ಕಡಿಮೆಯಾಗಿ ಕಾರ್ಯತತ್ವರತೆ ಹಾಗೂ ಜ್ಞಾಪಕಾ ಶಕ್ತಿ ವೃದ್ದಿಯಾಗಲು ಸಹಕಾರಿ ಆಗುತ್ತದೆ. ರಕ್ತದಾನದ ಅರಿವು ಮಾಡಿಸಲು ಪ್ರತಿ ವರ್ಷ ಜೂನ್ 14ರಂದು ವಿಶ್ವ ರಕ್ತದಾನ ದಿನ ಆಚರಿಸಲಾಗುತ್ತದೆ ಎಂದು ಹೇಳಿದರು.

ನಮ್ಮ ಯೋಗ ಕುಟುಂಬದ ಅಧ್ಯಕ್ಷ ಹೊನ್ನಪ್ಪ ಅವರು ಗಿಡಕ್ಕೆ ನೀರು ಹಾಕುವುದರ ಮುಖಾಂತರ ಉದ್ಘಾಟಿಸಿದರು. ಶಿಬಿರದಲ್ಲಿ ಯೋಗ ಕುಟುಂಬದವರು, ಬಡಾವಣೆಯ ನಿವಾಸಿಗಳು ಮತ್ತು ಲಯನ್ಸ್ ಕ್ಲಬ್ ಸದಸ್ಯರು ರಕ್ತದಾನ ಮಾಡಿದರು.
ಗೋಪಾಲಗೌಡ ನಿವಾಸಿಗಳ ಸಂಘದ ಅಧ್ಯಕ್ಷ ಮೋಹನ್‌ಮೂರ್ತಿ, ಕಾರ್ಯದರ್ಶಿ ಕೃಷ್ಣಮೂರ್ತಿ, ಖಜಾಂಚಿ ಮುರುಗೇಶ್, ನಿರ್ದೇಶಕರು, 113 ಬಾರಿ ರಕ್ತದಾನ ಮಾಡಿದ ಧರಣೇಂದ್ರ ದಿನಕರ್, ಡಾ. ಮೇಘನಾ, ಸಿಂಧೂ, ರೆಡ್ ಕ್ರಾಸ್ ಕಾರ್ಯದರ್ಶಿ ಡಾ. ದಿನೇಶ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...