Sunday, December 7, 2025
Sunday, December 7, 2025

Dattatreya Sivananda Tirtha Guru ಚಿತ್ತ ಬುದ್ಧಿ ಮನಸ್ಸುಗಳ ಏಕಾಗ್ರತೆಯಿಂದ ಭಗವದಾನಂದ ಪ್ರಾಪ್ತಿ- ಎಚ್.ಬಿ.ಮಂಜುನಾಥ್

Date:

Dattatreya Sivananda Tirtha Guru ಚಂಚಲಶೀಲ ಮನಸ್ಸನ್ನು ಬುದ್ಧಿಯಿಂದ ನಿಗ್ರಹಿಸುತ್ತಾ ಚಿತ್ತೈಕಾಗ್ರತೆಯಿಂದ ಅದನ್ನು ಆತ್ಮಾನುಭವದ ಕಡೆಗೆ ಹರಿಸಿದಾಗ ಭಗವದಾನಂದ ಪ್ರಾಪ್ತಿಯಾಗುತ್ತದೆ ಎಂದು ಹಿರಿಯ ಪತ್ರಕರ್ತ ಎಚ್ ಬಿ ಮಂಜುನಾಥ ಅಭಿಪ್ರಾಯ ಪಟ್ಟರು.

ಅವರಿಂದು ಜಯದೇವ ವೃತ್ತದ ಶ್ರೀ ದತ್ತಾತ್ರೇಯ ಶಿವಾನಂದ ತೀರ್ಥ ಗುರು ಆಧ್ಯಾತ್ಮ ಮಂದಿರದಲ್ಲಿ ದತ್ತ ಜಯಂತಿ ಅಂಗವಾಗಿ ಏರ್ಪಾಡಾಗಿದ್ದ ಪೂಜಾ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಬ್ರಹ್ಮ ವಿಷ್ಣು ಪರಮೇಶ್ವರರ ಸಂಯುಕ್ತ ರೂಪವಾದ ದತ್ತಾತ್ರೇಯರ ಸಂಕೇತವೆಂದರೆ ಜ್ನಾನಾರ್ಜನೆಯು ಬ್ರಹ್ಮವಾಗಿಯೂ, ಪಡೆದ ಜ್ಞಾನದ ಉಳಿಸಿಕೊಳ್ಳುವಿಕೆಯು ವಿಷ್ಣುವಾಗಿಯೂ, ಅಜ್ಞಾನ ನಾಶವು ಶಿವ ಸಂಕೇತವಾಗಿ ಶುಭವಾಗುತ್ತದೆ, ಹೀಗಾಗಿಯೇ ದತ್ತಾತ್ರೇಯರು ಪರಮ ಗುರು ಎನಿಸಿಕೊಳ್ಳುತ್ತಾರೆ. ನಿರ್ಗುಣ ನಿರಾಕಾರ ಸತ್ ಚಿತ್ ಆನಂದದಾಯಕ ಪರಬ್ರಹ್ಮ ವಸ್ತುವಿನ ಅನುಭವ ಬರಬೇಕೆಂದರೆ ಋತ ಸತ್ಯಗಳ ಅರಿವಾಗಬೇಕು, ಇದಕ್ಕಾಗಿ ಜ್ಞಾನ ಸೃಷ್ಟಿಯಾಗಬೇಕು, ಸೃಷ್ಟಿಯಾದ ಜ್ಞಾನ ಶಾಶ್ವತವಾಗಿ ಉಳಿಯಬೇಕು, ಅಂತರದಲ್ಲಿ ಬರುವ ಅಜ್ಞಾನವು ನಾಶವಾಗಲೇ ಬೇಕು, ದತ್ತಾತ್ರೇಯ ರೂಪವು ತ್ರಿಮೂರ್ತಿ ಏಕತ್ರದ ಪರಮ ಸತ್ಯ ಸಂಕೇತವಾಗಿದೆ, ಇದನ್ನು ಅರಿತು ಪಾಲಿಸುವುದೇ ನಿಜವಾದ ದತ್ತಾತ್ರೇಯ ಪೂಜೆ ಮತ್ತು ಆರಾಧನೆ ಎನಿಸುತ್ತದೆ ಎಂದರು.

Dattatreya Sivananda Tirtha Guru ಇದೇ ಸಂದರ್ಭದಲ್ಲಿ ಇಂದಿನ ಪುಷ್ಪಾಲಂಕಾರ ಸೇವಾಕರ್ಕರಾದ ಡಾ. ಜಾದವ್ ರನ್ನು ಗೌರವಿಸಿ ಆಶೀರ್ವದಿಸಲಾಯಿತು. ರಾಜನಹಳ್ಳಿ ಹರಿಹರಪ್ಪ ಟ್ರಸ್ಟಿನ ಶ್ರೀಧರ ಶ್ರೇಷ್ಟಿ, ಶ್ರೀಮತಿ ಗೀತಾ ಶ್ರೀಧರ್, ಅಧ್ಯಾತ್ಮ ಮಂದಿರದ ಶ್ರೀಯುತ ಆರ್ ಜಿ ದತ್ತರಾಜ್ ಮುಂತಾದವರು ಭಾಗವಹಿಸಿದ್ದರು.

ವೇದ ಮೂರ್ತಿ ಶಿವರಾಮ ಶಾಸ್ತ್ರೀ ಮುಂತಾದವರು ಪೂಜಾದಿಗಳನ್ನು ನೆರವೇರಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...