Madhu Bangarappa ಶಿಕ್ಷಣ ಸಚಿವರ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕರಣ ದಾಖಲಿಸುವ ಬಗ್ಗೆ ಶರತ್ ಕಲ್ಯಾಣಿ ಎಂಬಾತ ಫೇಸ್ಬುಕ್ನಲ್ಲಿ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅವರ ವಿರುದ್ಧ ಅವಹೇಳನಕಾರಿಯಾಗಿ ಬರೆಯುವ ಮೂಲಕ ತೇಜೋವಧೆ ಮಾಡಿದ್ದಾರೆ . ಅವರ ವಿರುದ್ಧ ಎಫ್ ಐ ಆರ್ ದಾಖಲಿಸುವಂತೆ ಶಿವಮೊಗ್ಗದ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಒತ್ತಾಯಿಸಲಾಯಿತು.
ಸಚಿವರಿಗೆ ಅವಮಾನ ಮಾಡಿರುವ ಶರತ್ ಕಲ್ಯಾಣಿ ಎಂಬಾತನ ವಿರುದ್ಧ ಎಫ್ಐಆರ್ ದಾಖಲಿಸಿ, ತಕ್ಷಣವೇ ಬಂಧಿಸಬೇಕು ಹಾಗೂ ಈತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೈಬರ್ ಅಪರಾಧ ವಿಭಾಗಕ್ಕೆ ಮನವಿ ಸಲ್ಲಿಸಲಾಯಿತು.
Madhu Bangarappa ಈ ಸಂದರ್ಭದಲ್ಲಿ ಶಿವಮೊಗ್ಗ ದಕ್ಷಿಣ ಬ್ಲಾಕ್ ಅಧ್ಯಕ್ಷ ರಾದ ವಿನಯ್ ತಾಂದ್ಲೆ. ಹಾಗೂ ಯುವ ಕಾಂಗ್ರೆಸ್ ಮುಖಂಡರಾದ ಡಾ.ಶರತ್ ಮರಿಯಪ್ಪ NSUI ನ ರಾಜ್ಯ ಕಾರ್ಯದರ್ಶಿ ಬಾಲಾಜಿ ಹೆಚ್ ಎಸ್. ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂದೀಪ್ ಆಟೋಕ್.ಭರತ್ ದರ್ಶನ್. ಮಂಜುನಾಥ್ ಸೊರಬ. ದರ್ಶನ್.ಬಿ. ಜಗದೀಶ್. ಕಿಸಾನ್ ಸೆಲ್ ಅಧ್ಯಕ್ಷ ರಾದ
ಗಿರೀಶ್. ಪ್ರದೀಪ್. ಸುಕೇಶ್ .ಜಿ ಕಾಂಗ್ರೆಸ್ ಪದವೀಧರ ಘಟಕದ ಅರ್ಜುನ ಪಂಡಿತ್.ಪುನೀಲ್ .ನವೀನ ಮತ್ತಿತರರು ಹಾಜರಿದ್ದರು.