Saturday, May 23, 2026
Saturday, May 23, 2026

Malanadu Vidya Samasthe Chikmagalur ಮಕ್ಕಳು ಭವಿಷ್ಯದಲ್ಲಿ ಏನಾಗಬೇಕೆಂಬ ಗುರಿ ಹೊಂದಿರ ಬೇಕು‌- ಡಿ.ಎಲ್.ವಿಜಯಕುಮಾರ್

Date:

Malanadu Vidya Samasthe Chikmagalur ವಿದ್ಯಾರ್ಥಿದೆಸೆಯಿಂದಲೇ ಮಕ್ಕಳು ಭವಿಷ್ಯದಲ್ಲ್ಲಿ ಏನಾಗಬೇಕೆೆಂಬ ನಿರ್ದಿ ಷ್ಟ ಗುರಿ ಹೊಂದಿ ಮುನ್ನೆಡೆದರೆ ಯಶಸ್ವಿ ಜೀವನ ರೂಪಿಸಿಕೊಳ್ಳಲು ಸಾಧ್ಯ ಎಂದು ಮಲೆನಾಡು ವಿದ್ಯಾಸಂಸ್ಥೆ ಗೌರವ ಕಾರ್ಯದರ್ಶಿ ಡಾ. ಡಿ.ಎಲ್.ವಿಜಯ್‌ಕುಮಾರ್ ಹೇಳಿದರು.

ಚಿಕ್ಕಮಗಳೂರಿನ ಜ್ಯೋತಿನಗರ ಸಮೀಪ ಮಲೆನಾಡು ವಿದ್ಯಾಸಂಸ್ಥೆ ಪ್ರಾಯೋಗಿಕ ಪ್ರೌಢಶಾಲೆಯ 30ನೇ ವರ್ಷದ ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ಶನಿವಾರ ಸಂಜೆ ಚಾಲನೆ ನೀಡಿ ಅವರು ಮಾತನಾಡಿದರು.

ಬದುಕಿನಲ್ಲಿ ಹಲವಾರು ಏರು-ಪೇರುಗಳಿವೆ. ಎಲ್ಲವನ್ನು ನಿಭಾಯಿಸಿಕೊಂಡು ಹೋಗುವುದು ಮಾನವನ ಸಹಜ ಗುಣ. ಹೀಗಾಗಿ ವಿದ್ಯಾರ್ಥಿಗಳು ಬಾಲ್ಯದಿಂದಲೇ ಆಸಕ್ತಿಯಿರುವ ವಿಷಯಗಳಲ್ಲಿ ಪರಿಣಿತಿ ಹೊಂದುವ ಮೂಲಕ ಶಕ್ತಿಮೀರಿ ಪ್ರಯತ್ನಿಸಿದರೆ ಖಂಡಿತ ಸಫಲರಾಗಲು ಸಾಧ್ಯ ಎಂದು ಕಿವಿಮಾತು ಹೇಳಿದರು.
ಪ್ರೌಢಶಾಲೆಯಲ್ಲಿ ಮಕ್ಕಳ ಪ್ರತಿಭೆ ಅನಾವರಣಗೊಳಿಸಲು ಪ್ರಾಮಾಣಿಕವಾಗಿ ಪ್ರೋತ್ಸಾಹಿಸುವ ಕಾರ್ಯ ವನ್ನು ಪ್ರಾಂಶುಪಾಲರು ಹಾಗೂ ಶಿಕ್ಷಕರ ವೃಂದ ಮಾಡಲಾಗುತ್ತಿದೆ. ಇಂತಹ ಅವಕಾಶಗಳಿಂದ ಹಿಂದೆ ಸರಿಯದೇ ಮುಕ್ತವಾಗಿ ಭಾಗವಹಿಸಿ ಹುದುಗಿರುವ ಕಲಾಪ್ರತಿಭೆಯನ್ನು ಹೊರಚಿಮ್ಮಿಸಬೇಕು ಎಂದರು.

ಶಾಲಾ ಶಿಕ್ಷಣ ಇಲಾಖೆ ಸಂಯೋಜಕ ಟಿ.ಜಿ.ಕೃಷ್ಣಮೂರ್ತಿ ಅರಸ್ ಮಾತನಾಡಿ ಪ್ರಾಯೋಗಿಕ ಪ್ರೌಢಶಾಲೆ ಯು ಹಲವಾರು ವರ್ಷಗಳ ಹಿಂದೆಯೇ ಸ್ಥಾಪಿತಗೊಂಡಿತು. ಅಂದಿನ ಕಾಲದಲ್ಲಿ ಶಾಲೆ ನಗರದ ಹೊರವಲಯ ವೆಂದು ಬಿಂಬಿತವಾಗಿತ್ತು. ಸೂಕ್ತ ರಸ್ತೆ ಮತ್ತು ಬೀದಿದೀಪದ ಕೊರತೆಯಿತ್ತು. ಇದೀಗ ನಗರ ಬೆಳೆದಂತೆ ಪ್ರಮುಖ ಭಾಗದಲ್ಲಿ ಒಂದಾಗಿರುವ ಶಾಲೆಗೆ ಸುತ್ತಮುತ್ತಲಿನ ನೂರಾರು ಮಕ್ಕಳು ಸೇರ್ಪಡೆಗೊಳ್ಳುತ್ತಿದ್ದಾರೆ ಎಂದರು.

Malanadu Vidya Samasthe Chikmagalur ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಎಂಇಎಸ್ ಉಪಾಧ್ಯಕ್ಷೆ ರಾಧಾ ಸುಂದರೇಶ್ ಗುಣಮಟ್ಟ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಸಂಸ್ಥೆಯ ಹಿರಿಯರು ಶಾಲೆಯನ್ನು ಸ್ಥಾಪಿಸಿದ್ದು ಅಂದಿನಿ0ದ ಇಂದಿವರೆಗೂ ಸಾಗುತ್ತಾ ಮೂರು ದಶಕಗಳನ್ನು ಪೂರೈಸಿ ಮುನ್ನೆಡೆಯುತ್ತಿರುವುದು ಹೆಮ್ಮೆಯ ಸಂಗತಿ ಎಂದರು.
ಇದೇ ವೇಳೆ ಪ್ರೌಢಶಾಲೆಯ ೪೦ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ ಎಂಇಎಸ್ ಸಹ ಕಾರ್ಯದರ್ಶಿ ಎಸ್.ಶಂಕರನಾರಾಯಣಭಟ್, ಶೈಕ್ಷಣಿಕ ಸಲಹೆಗಾರ ಮಂಜುನಾಥ್‌ಭಟ್, ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಕೌಸರ್ ಫಾತಿಮಾ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ತಾತ್ಕಾಲಿಕ ನೇರ ನೇಮಕಾತಿ ಮೂಲಕಖಾಯಂ ಶಿಕ್ಷಕರ ನೇಮಕಾತಿವರೆಗೆ ಅತಿಥಿ ಶಿಕ್ಷಕರ ನೇಮಕ

Shimoga News 2026-27ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು...

Klive Special Article ನೇಪಾಳದಲ್ಲಿ ಶೃಂಗೇರಿ ಜಗದ್ಗುರುಗಳು.

ವಿಶೇಷ ವರದಿ: ಪ್ರಭಾಕರ ಕಾರಂತ Klive Special Article ಜಗದ್ಗುರು ಶ್ರೀ ವಿಧುಶೇಖರ ಭಾರತೀ...

Eshwara Khandre ಶ್ರಾವ್ಯಾ ಸಾಗರ್ ನಿರ್ಮಾಣದ ಸಾಕ್ಷ್ಯಚಿತ್ರಕ್ಕೆ ಜೀವವೈವಿಧ್ಯ ಪ್ರಶಸ್ತಿ.

Eshwara Khandre ಕರ್ನಾಟಕ ಸರ್ಕಾರದ ಜೀವವೈವಿದ್ಯ ಮಂಡಳಿ ಕೊಡಮಾಡುವ ೨೦೨೫-೨೬ನೇ ಸಾಲಿನ...