Wednesday, July 8, 2026
Wednesday, July 8, 2026

S N Channabasappa ಶಿಲ್ಪಕಲೆ ದೇಶದ ಅಸ್ಮಿತೆ. ದೇಶ ಕಟ್ಟುವ ಕಲೆ ಶಿಲ್ಪಿಗಳಿಂದಾಗಿದೆ- ಶಾಸಕ ಚನ್ನಬಸಪ್ಪ

Date:

S N Channabasappa ಇಡೀ ಜಗತ್ತಿಗೆ ದೇವರು ಹೇಗಿದ್ದಾನೆ ಎಂದು ತಮ್ಮ ಶಿಲ್ಪಕಲೆಯ ಮೂಲಕ ತೋರಿಸಿಕೊಟ್ಟವರು ಅಮರ ಶಿಲ್ಪಿ ಜಕಣಾಚಾರಿಯವರು ಎಂದು ಶಾಸಕರಾದ ಎಸ್.ಎನ್.ಚನ್ನಬಸಪ್ಪ ಅಭಿಪ್ರಾಯಪಟ್ಟರು.

ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಜಿಲ್ಲಾ ವಿಶ್ವಕರ್ಮ ಮಹಾಸಭಾ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಇಂದು ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮದು ಸಾಂಸ್ಕoತಿಕ ನೆಲೆಗಟ್ಟಿನ ಮತ್ತು ಉನ್ನತ ಪರಂಪರೆಯ ರಾಷ್ಟ್ರವಾಗಿದ್ದು, ತಮ್ಮದೇ ಆದ ರೀತಿಯಲ್ಲಿ ಶಿಲ್ಪಕಲೆಯ ಮೂಲಕ ದೇಶ ಕಟ್ಟುವ ಕಾರ್ಯವನ್ನು ಜಕಣಾಚಾರಿಯಂತಹ ಶಿಲ್ಪಿಗಳು ಮಾಡಿದ್ದಾರೆ. ಮೇರು ವ್ಯಕ್ತಿತ್ವದ ಇವರು ಸೋಮನಾಥ ದೇವಾಲಯ, ಬೇಲೂರು, ಹಳೇಬೀಡಿನಂತಹ ದೇವಾಲಯ ನಿರ್ಮಿಸಿದ ಪುಣ್ಯಾತ್ಮರು.

ಇಡೀ ಜಗತ್ತು ನಮ್ಮೆಡೆ ನೋಡುವಂತೆ ಮಾಡಿರುವುದು ಇಂತಹ ಶಿಲ್ಪಿಗಳು. ದೇಶದ ಶಿಲ್ಪಕಲೆಗೆ ದೊಡ್ಡ ಕೊಡುಗೆಯನ್ನು ನೀಡಿದ್ದಾರೆ. ನಮ್ಮ ದೇಶಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದ್ದು ಶಿಲ್ಪಕಲೆ ದೇಶದ ಅಸ್ಮಿತೆ. ದೇವಾಲಯಗಳ ಬಗ್ಗೆ ಶ್ರದ್ದೆ, ನಂಬಿಕೆ ಮತ್ತು ಆಸಕ್ತಿ ಹೊಂದಿರುವವರು ನಾವು. ನಮ್ಮದು ಸನಾತನ, ದೇವನಿರ್ಮಿತ ದೇಶ. ಸೋಮನಾಥ ಪುರ ಸೇರಿದಂತೆ ಅಯೋಧ್ಯ, ಕಾಶಿ ವಿಶ್ವನಾಥ ಹೀಗೆ ಅನೇಕ ದೇವಾಲಯಗಳನ್ನು ಭಗ್ನಗೊಳಿಸಲಾಗಿದೆ.ಹೋರಾಟದ ಮೂಲಕ ನಮ್ಮ ದೇವಾಲಯಗಳು ಮತ್ತು ಪರಂಪರೆಯನ್ನು ಉಳಿಸಿಕೊಂಡಿದ್ದೇವೆ ಎಂದರು.

ಶೃಂಗೇರಿಯ ಕನ್ನಡ ಪ್ರಾಧ್ಯಾಪಕರಾದ ಡಾ.ಕೆ.ಎಸ್.ವೆಂಕಪ್ಪ ಆಚಾರ್ಯ ಇವರು ವಿಶೇಷ ಉಪನ್ಯಾಸ ನೀಡಿ ಮಾತನಾಡಿ, ನಮ್ಮ ದೇಶದಲ್ಲಿರುವ ಕಲೆ, ಕೌಶಲ್ಯ, ಸಾಧನೆಗಳಿಂದಾಗಿ ವಿಶ್ವ ಇಂದು ನಮ್ಮನ್ನು ಗುರುತಿಸುತ್ತಿದೆ. ಆದರೆ ಹಿಂದಿನ ಅನೇಕ ಶಿಲ್ಪಕಲೆಗಳ ನಿರ್ಮಾತೃಗಳನ್ನು ಎಲ್ಲೂ ತೋರಿಸಿಲ್ಲ. ಕಲೆಯ ನಿರ್ಮಾತೃಗಳನ್ನು ಜಗತ್ತಿಗೆ ತೋರಿಸಬೇಕಿದೆ. ಶಿಲ್ಪಿ ಅಥವಾ ಕಲಾವಿದನನ್ನು ಮುಂದಿನ ಪೀಳಿಗೆಗೆ ತಿಳಿಯಪಡಿಸಬೇಕಿದ್ದು ಈ ಸಂಸ್ಮರಣಾ ದಿನಚರಣೆಯು ಇಂತಹ ಶಿಲ್ಪಿಗಳನ್ನು ಸಂಸ್ಮರಿಸಲು ಮತ್ತು ಸಮುದಾಯದವರೆಲ್ಲ ಒಟ್ಟುಗೂಡಲು ಒಂದು ಉತ್ತಮ ವೇದಿಕೆಯಾಗಿದೆ ಎಂದರು.

S N Channabasappa 12 ನೇ ಶತಮಾನದಲ್ಲಿ ತುಮಕೂರು ಬಳಿಯ ಕ್ರೀಡಾಪುರದಲ್ಲಿ ಜಕಣಾಚಾರಿಯವರು ಜನಿಸಿದರು. ವಿಶ್ವ ಪ್ರಸಿದ್ದ ಬೇಲೂರು, ಹಳೇಬೀಡು, ಸೋಮನಾಥ ದೇವಾಲಯ ನಿರ್ಮಾಣ ಮಾಡಿ ತಮ್ಮ ಕಲೆ, ಕೌಶಲ್ಯ, ಜಾಣ್ಮೆ, ಶ್ರದ್ದೆ ಮತ್ತು ಹಠವನ್ನು ಈ ಶಿಲ್ಪಕಲೆ ಮೂಲಕ ವಿಶ್ವಕ್ಕೇ ಸಾರಿದ್ದಾರೆ. ನಾವೆಲ್ಲ ಈ ಕುರಿತು ಚಿಂತಿಸಬೇಕು ಎಂದರು.

ಅತ್ಯಂತ ಚಾಣಾಕ್ಷ, ಕುಶಲಿ ಜಕಣಾಚಾರಿಯವರ ನೇತೃತ್ವದಲ್ಲಿ ಸಮುದಾಯದ ಅನೇಕ ಶಿಲ್ಪಿಗಳು ಕಾರ್ಯ ನಿರ್ವಹಿಸಿದ್ದು ದೇಶಕ್ಕೆ ವಿಶ್ವಕರ್ಮ ಸಮಾಜದ ಕೊಡುಗೆ ಅನನ್ಯವಾಗಿದೆ. ಅಯೋಧ್ಯೆಯ ರಾಮಮಂದಿರ ನಿರ್ಮಾಣದ ಭಾಗವಾಗಿ ರಥವನ್ನು ಹಾಗೂ ಒಂದು ಮೂರ್ತಿಯನ್ನು ನಮ್ಮ ಸಮುದಾಯದವರು ನಿರ್ಮಿಸಿರುವುದು ಹೆಮ್ಮೆಯ ವಿಷಯ. ನಮ್ಮ ಕೌಶಲ್ಯ, ಪ್ರತಿಭೆಗೆ ಜನಮನ್ನಣೆ ಸಿಗುತ್ತಿದ್ದು, ಈ ಕಲೆಯನ್ನು ಮುಂದಿನ ಪೀಳಿಗೆಗೆ ಕೊಂಡಯ್ಯಬೇಕು.

ಯುವಜನತೆ ಪಾಲ್ಗೊಳ್ಳುವಂತಹ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಅವರಿಗೂ ಇತಿಹಾಸದ ಜ್ಞಾನ ಹೆಚ್ಚಬೇಕು. ಸಮಾಜ ಸಂಘಟನೆ ಆಗಬೇಕು. ಕಲೆಗೆ ಪ್ರೋತ್ಸಾಹ ದೊರಕಬೇಕು. ಹಾಗೂ ಗೌರವ, ಮನ್ನಣೆ ಸಿಗುಂತಹ ಕಾರ್ಯಗಳನ್ನು ಸಮಾಜಬಾಂಧವರು ಕೈಗೊಳ್ಳಬೇಕೆಂದು ಆಶಿಸಿದರು.

ಇದೇ ವೇಳೆ ಸಮಾಜದ ಇಬ್ಬರು ಸಾಧಕರಾದ ಶ್ರೀ ನವೀನ್ ಮತ್ತು ಶ್ರೀ ಭರತ್ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು

ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್ ಹೆಚ್ ಸ್ವಾಗತಿಸಿದರು. ಜಿಲ್ಲಾ ವಿಶ್ವಕರ್ಮ ಮಹಾಸಭಾದ ಅಧ್ಯಕ್ಷ ಆಗರದಹಳ್ಳಿ ನಿರಂಜನಮೂರ್ತಿ, ಗೌರವಾಧ್ಯಕ್ಷ ಸತ್ಯನಾರಾಯಣ್, ಕಾರ್ಯದರ್ಶಿ ಎನ್.ಟಿ.ಬಸವರಾಜ್, ಜಿಲ್ಲಾ ವಿಶ್ವಕರ್ಮ ಬ್ರಾಹ್ಮಣರ ಸಮಾಜದ ಅಧ್ಯಕ್ಷ ಸೋಮಾಚಾರಿ, ಮಾಜಿ ನಗರಸಭಾ ಉಪಾಧ್ಯಕ್ಷ ರಮೇಶ್, ಕಾಳಿಕಾಂಬ ದೇವಸ್ಥಾನದ ಶ್ರೀನಿವಾಸ ಮೂರ್ತಿ, ಸಮಾಜದ ಮುಖಂಡರು, ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...

B.Y. Raghavendra ಮನೆ ಬಾಗಿಲಿಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ಮತ್ತು ದಾಖಲೆಗಳನ್ನುನೀಡಿ- ಬಿ.ವೈ.ರಾಘವೇಂದ್ರ

B.Y. Raghavendra ರಾಜ್ಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ...