Friday, April 3, 2026
Friday, April 3, 2026

Ayodhya Ram Mandir ಹಿರೇಮಗಳೂರಿನ ಕೋದಂಡರಾಮನ ಸನ್ನಿಧಿಯಲ್ಲಿ ಆಯೋಧ್ಯೆಯ ಮಂತ್ರಾಕ್ಷತೆಗೆ ಪೂಜೆ ಸಲ್ಲಿಕೆ

Date:

Ayodhya Ram Mandir ಚಿಕ್ಕಮಗಳೂರು, ನಗರದ ಹಿರೇಮಗಳೂರಿನ ಶ್ರೀ ಕೋದಂಡರಾಮಚoದ್ರ ಸ್ವಾಮಿ ದೇವಾ ಲಯದಲ್ಲಿ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವತಿಯಿಂದ ಅಯೋಧ್ಯೆಯ ಮಂತ್ರಾಕ್ಷತೆ ಹಾಗೂ ಆಹ್ವಾನ ಪತ್ರಿಕೆಯನ್ನು ಮನೆಗಳಿಗೆ ತಲುಪಿಸುವ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಲಾಯಿತು.

ಚಾಲನೆ ನೀಡಿ ಮಾತನಾಡಿದ ದೇವಾಲಯ ಪ್ರಧಾನ ಅರ್ಚಕ ಹಿರೇಮಗಳೂರು ಕಣ್ಣನ್ ಶ್ರೀ ರಾಮ ಜನ್ಮ ಸ್ಥಾನದಲ್ಲಿ ನಿರ್ಮಾಣ ವಾಗುತ್ತಿರುವ ಭವ್ಯ ಮಂದಿರದ ಶ್ರೀ ರಾಮಲಲ್ಲಾ ಪ್ರತಿಷ್ಠಾಪನೆ ಅಂಗವಾಗಿ ಮಂತ್ರಾಕ್ಷತೆ ಹಾಗೂ ಆಹ್ವಾನ ಪತ್ರಿಕೆ ವಾರ್ಡಿನ ನಿವಾಸಿಗಳಿಗೆ ತಲುಪಿಸುವ ಗುರಿ ಹೊಂದಿರುವುದು ಉತ್ತಮ ಸಂಗತಿ ಎಂದರು.

ನಿವಾಸಿಗಳಲ್ಲಿ ಭಾವತ್ಮಕ ಸಂಬoಧ ಬೆಳೆಸುವ ನಿಟ್ಟಿನಲ್ಲಿ ದೇವಾಲಯಲ್ಲಿ ಪೂಜೆ ಸಲ್ಲಿಸಿದ ಬಳಿಕ ಮಂತ್ರ ಪಠಿಸಿ ಹಾಗೂ ಆಹ್ವಾನ ಪತ್ರಿಕೆ ಹಂಚಲು ಟ್ರಸ್ಟ್ ಮುನ್ನಡೆಯುತ್ತಿರುವುದು ಹೆಮ್ಮೆಯ ಸಂಗತಿ. ಪ್ರತಿ ಮನಸ್ಸಿನಲ್ಲಿ ರಾಮನಜಪ, ಆರಾಧನಾ ಮನೋಭಾವ ಮೂಡುವಂತ ಸತ್ಕಾರ್ಯಕ್ಕಾಗಿ ಟ್ರಸ್ಟ್ ಹಾಗೂ ಗ್ರಾಮಸ್ಥರು ಮುಂದಾಗಿ ರುವುದು ಒಳಿತು ಎಂದರು.

ಇದೇ ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀರಾಮನ ನೂತನ ವಿಗ್ರಹ ಪ್ರಾಣಪ್ರತಿಷ್ಟೇ ನಡೆಯುತ್ತಿದೆ. ಹೀಗಾಗಿ ಕೋಟ್ಯಂತರ ಹಿಂದೂಗಳು ನಂಬಿಕೊoಡಿರುವ ಪ್ರಕಾರ ರಾಮಮಂದಿರ ಮತ್ತು ರಾಮ ಹುಟ್ಟಿದ್ದು ಅಯೋಧ್ಯೆಯಲ್ಲೇ. ಅಯೋಧ್ಯೆಯ ಚಕ್ರವರ್ಥಿ ದಶರಥ ಮತ್ತು ಕೌಸಲ್ಯರ ಹಿರಿಯ ಪುತ್ರನಾಗಿದ್ದ ರಾಮ, ಮರ್ಯಾದ ಪುರುಷೋತ್ತಮ ಎಂದೇ ಭಕ್ತರ ಹೃದಯದಲ್ಲಿ ನೆಲೆಸಿದ್ದಾರೆ ಎಂದು ತಿಳಿಸಿದರು.

ಟ್ರಸ್ಟ್ ನಗರ ಸಂಚಾಲಕ ಕೇಶವ ಮಾತನಾಡಿ ಇಂದು ಮಂತ್ರಾಕ್ಷತೆ ಹಾಗೂ ಆಹ್ವಾನ ಪತ್ರಿಕೆಗಳಿಗೆ ವಿಶೇಷ ಪೂಜೆ ಜರುಗಿಸಿ ವಾರ್ಡಿನ ಪ್ರತಿ ಹಿಂದೂಗಳ ಮನೆಗಳಿಗೂ ತಲುಪಿಸುವ ಕಾರ್ಯಕ್ಕೆ ಹೊಸ ವರ್ಷಾರಾಂಭದ ದಿನದಂದು ಚಾಲನೆ ನೀಡಲಾಗಿದೆ. ಹಿರೇಮಗಳೂರು ಗ್ರಾಮಸ್ಥರು ಮಂತ್ರಾಕ್ಷತೆ ಪಡೆಯುವ ಮೂಲಕ ಶ್ರೀರಾಮನ ಸ್ಮರಣೆಯಲ್ಲಿ ನಿರತರಾಗಬೇಕು ಎಂದು ಹೇಳಿದರು.

Ayodhya Ram Mandir ಈ ಸಂದರ್ಭದಲ್ಲಿ ಸಹಾಯಕ ಅರ್ಚಕ ವೈಷ್ಣವಸಿಂಹ, ಟ್ರಸ್ಟ್ನ ನಗರ ಸಂಯೋಜಕ ಡಾ.ರಾಮಾನುಜ, ನಗರ ಸಂಚಾಲಕರಾದ ಸುನಿಲ್ ಆಚಾರ್ಯ, ಹೆಚ್.ಎಸ್.ಪುಟ್ಟಸ್ವಾಮಿ, ಬಿ.ರೇವನಾಥ್, ಹೆಚ್.ಎಸ್. ಧನಂಜಯ, ರವಿಕುಮಾರ್, ರಾಜು, ಶ್ರೀಮತಿ ರಮಾ ಮೋಹನ್, ಜಯಣ್ಣ, ಮೋಹನ್ ಹಾಗೂ ಗ್ರಾಮಸ್ಥರು, ಹಿಂದೂ ಸಮಾಜ ಭಾಂದವರು, ಉಪಸ್ಥಿತರಿ ದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.S. Arun ಸೂಕ್ತ ವಿಲೇವಾರಿಯಾಗದ ಘನತ್ಯಾಜ್ಯ: ಸಾರ್ವಜನಿಕ ಆರೋಗ್ಯ, ಪರಿಸರದ ಮೇಲೆ ಪರಿಣಾಮ- ಡಿ‌.ಎಸ್.ಅರುಣ್

D.S. Arun ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ...

S.N. Channabasappa ಸತ್ತಮೇಲೆಯೂ ಹಗೆತನ ಸಾಧಿಸುವ ವಿಕೃತ ಮನಸ್ಥಿತಿಯನ್ನು ಹಿಂದೂ ಸಮಾಜ‌ ಒಪ್ಪುವುದಿಲ್ಲ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಶಿವಮೊಗ್ಗ ನಗರದ ಸೂಳೆಬೈಲಿನ ಹಿಂದೂ ರುದ್ರಭೂಮಿಯಲ್ಲಿ ಹತ್ಯೆಯಾದ ಬಾಲಕ...

Karnataka Sahitya Academy ಸಾಹಿತ್ಯ ಅಕಾಡೆಮಿಯಿಂದ ವಿವಿಧ ಪ್ರಕಾರಗಳ ಕೃತಿಗಳ ಪುಸ್ತಕ ಬಹುಮಾನಕ್ಕೆ ಆರ್ಜಿ ಆಹ್ವಾನ

Karnataka Sahitya Academy ಕರ್ನಾಟಕ ಸಾಹಿತ್ಯ ಅಕಾಡೆಮಿಯು 2025 ನೇ ವರ್ಷದಲ್ಲಿ...

Karnataka University ನಾಯಕತ್ವ ಗುಣ ರೂಪುಸುವಲ್ಲಿ ವಿದ್ಯಾರ್ಥಿ ಸಂಸತ್ತು ಸಹಕಾರಿ-ಪ್ರೊ.ಜೆ.ಎಂ.ನಾಗಯ್ಯ

Karnataka University ಪ್ರಜಾಪ್ರಭುತ್ವದ ಸಬಲತೆಗೆ ಸಮರ್ಥ ನಾಯಕತ್ವ ಅಗತ್ಯ. ಪರಿಣಾಮಕಾರಿಯಾಗಿ ವಿಷಯ...