Sunday, August 23, 2026
Sunday, August 23, 2026

S N Channabasappa ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ರಾಜ್ಯದಲ್ಲಿ ಗೂಂಡಾರಾಜ್ – ಶಾಸಕ ಚನ್ನಬಸಪ್ಪ

Date:

S N Channabasappa ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಕರ್ನಾಟಕದಲ್ಲಿ ಗೂಂಡಾ ರಾಜ್‌ ನಡೆಯುತ್ತಲೇ ಬಂದಿದೆ. ಇದಕ್ಕೆ ಮತ್ತೊಂದು ಉದಾಹರಣೆ ಎಂಬಂತೆ ನಮ್ಮ ಜಿಲ್ಲೆಯ ಹೊಸನಗರ ತಾಲೂಕಿನ ಯುವ ಮೋರ್ಚಾ ಅಧ್ಯಕ್ಷರಾದ ನಿತೀನ್ ಅವರ ಮೇಲೆ ಕಾಂಗ್ರೆಸ್ ಪಕ್ಷದ ಗೂಂಡಗಳಿಂದ ನಡೆದ ಹಲ್ಲೆ ಪ್ರಕರಣ. ದಿನದಿಂದ ದಿನಕ್ಕೆ ಕಾಂಗ್ರೆಸ್ ಸರ್ಕಾರದ ಸಚಿವರು ಮತ್ತು ಶಾಸಕರು ಗೂಂಡಾಗಳನ್ನಿಟ್ಟು ದಬ್ಬಾಳಿಕೆ ಮಾಡುತ್ತಿದ್ದು, ಕೆಳ ಹಂತದಲ್ಲಿ ಕಾಂಗ್ರೆಸ್ ಮುಖಂಡರೇ ಗೂಂಡಾಗಳಾಗಿ ಅಖಾಡಕ್ಕೆ ಇಳಿಯುತ್ತಿದ್ದಾರೆ. ಇಷ್ಟೆಲ್ಲಾ ನಡೆಯುತ್ತಿದ್ದರೂ ಗೃಹ ಸಚಿವರು ಸುಮ್ಮನಿರುವುದು ದುರ್ದೈವದ ಸಂಗತಿ ಎಂದು ಶಿವಮೊಗ್ಗ ನಗರದ ಶಾಸಕರಾದ ಎಸ್.ಎನ್. ಚೆನ್ನಬಸಪ್ಪ ಅವರು ಹೇಳಿದರು.

S N Channabasappa ಇಂದು ಬೆಳಗ್ಗೆ ಶಿವಮೊಗ್ಗ ನಗರದ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಂದ ಹಲ್ಲೆಗೊಳಗಾಗಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹೊಸನಗರ ತಾಲೂಕಿನ ಯುವ ಮೋರ್ಚಾ ಅಧ್ಯಕ್ಷರಾದ ನಿತೀನ್ ಮತ್ತು ಅವರ ಸಹೋದರ ನವೀನ್ ಹಾಗೂ ಹಲ್ಲೆಗೊಳಗಾಗಿ ಚಿಕಿತ್ಸೆಗಾಗಿ ದಾಖಲಾಗಿರುವ ಭದ್ರಾವತಿಯ ಕಾರ್ಯಕರ್ತ ಪರಮೇಶ್ ಅವರ ಆರೋಗ್ಯವನ್ನು ವಿಚಾರಿಸಿ, ಅವರಿಗೆ ಧೈರ್ಯ ತುಂಬುವಂತ ಕೆಲಸವನ್ನು ಮಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...