Sunday, August 23, 2026
Sunday, August 23, 2026

Department of Sports ಯುವ ಪರಿವರ್ತಕರು & ಯುವ ಸಮಾಲೋಚಕರ ಆಯ್ಕೆಗೆ ಅರ್ಜಿ ಆಹ್ವಾನ

Date:

Department of Sports ಜನ ಆರೋಗ್ಯ ಕೇಂದ್ರ, ಎಪಡಿಮಿಯಾಲಜಿ ವಿಭಾಗ, ನಿಮ್ಹಾನ್ಸ್-ಬೆಂಗಳೂರು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಅನುಷ್ಠಾನಗೊಂಡಿರುವ ಯುವ ಸ್ಪಂದನ ಕಾರ್ಯಕ್ರಮದಡಿಯಲ್ಲಿ ಕಾರ್ಯನಿರ್ವಹಿಸಲು ಹೊಸದಾಗಿ ಯುವ ಪರಿವರ್ತಕರು ಹಾಗೂ ಯುವ ಸಮಾಲೋಚಕರನ್ನು ಅಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಪ್ರತಿ ಜಿಲ್ಲೆಗೆ 3 ಪುರುಷ ಹಾಗೂ 2 ಮಹಿಳೆಯರು ಸೇರಿ 5 ಜನ ಯುವ ಪರಿವರ್ತಕರನ್ನು ಅಯ್ಕೆ ಮಾಡಲಾಗುವುದು. ಪದವಿ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಮತ್ತು ಉತ್ತಮ ಸಂವಹನ ಕೌಶಲ್ಯ, ಸ್ಪಷ್ಟವಾದ ಕನ್ನಡ ಉಚ್ಛಾರಣೆ ಹಾಗೂ 21 ರಿಂದ 35 ವರ್ಷದೊಳಗಿನ ಅಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.

ಪ್ರತಿ ತಿಂಗಳು ಗೌರವಧನವಾಗಿ ರೂ. 7,000/-ಗಳನ್ನು ನೀಡಲಾಗುವುದು.

ಪ್ರತಿ ಜಿಲ್ಲೆಗೆ ಓರ್ವ ಯುವ ಸಮಾಲೋಚಕರನ್ನು ಆಯ್ಕೆ ಮಾಡಲಾಗುವುದು. ಪದವಿ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ ಆಪ್ತ ಸಮಾಲೋಚನೆಯನ್ನು ಒದಗಿಸುವ ಕೌಶಲ್ಯ, ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಮತ್ತು ಉತ್ತಮ ಸಂವಹನ ಕೌಶಲ್ಯ, ಸ್ಪಷ್ಟವಾದ ಕನ್ನಡ ಉಚ್ಛಾರಣೆ ಹಾಗೂ 21 ರಿಂದ 35 ವರ್ಷದೊಳಗಿನ ಅಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.

ಪ್ರತಿ ತಿಂಗಳು ಗೌರವಧನವಾಗಿ ರೂ. 9,000/-ಗಳನ್ನು ನೀಡಲಾಗುವುದು.

Department of Sports ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರೂ ಕ್ರೀಡಾಂಗಣ, ಶಿವಮೊಗ್ಗ, ದೂ.ಸಂ.: 08182-223328 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...