Thursday, March 19, 2026
Thursday, March 19, 2026

BJP Karnataka ರಾಮಭಕ್ತರನ್ನ ಕೆಣಕಿದರೆ ಕಾಂಗ್ರೆಸ್ ಸರ್ಕಾರ ಧೂಳಿಪಟವಾದೀತು- ಬಿಜೆಪಿ ಎಚ್ಚರಿಕೆ

Date:

BJP Karnataka ರಾಮಭಕ್ತರನ್ನು ಕೆಣಕಿದರೆ
ಕಾಂಗ್ರೆಸ್ ಸರ್ಕಾರ ಧೂಳಿಪಟವಾದೀತು ಎಚ್ಚರ”
ದೇಶದ ಜನರ 5 ದಶಕಗಳ ಕನಸು ನನಸಾಗುತ್ತಿರುವ ಪವಿತ್ರ ರಾಮಮಂದಿರ ಉದ್ಘಾಟನೆಯ ಸಂಭ್ರಮದಲ್ಲಿರುವ ಹೊತ್ತಿನಲ್ಲಿ ಹುಬ್ಬಳ್ಳಿಯಲ್ಲಿ ರಾಮ ಮಂದಿರ ನಿರ್ಮಾಣ ಹೋರಾಟದಲ್ಲಿ ಭಾಗಿಯಾಗಿದ್ದ, 31 ವರ್ಷದ ಹಳೆಯ ಪ್ರಕರಣಗಳನ್ನು ಕೆದಕಿ ಶ್ರೀಕಾಂತ್ ಪೂಜಾರಿ ಸೇರಿದಂತೆ ರಾಮ ಭಕ್ತರನ್ನು ಬಂಧಿಸಿರುವ ಕ್ರಮವನ್ನು ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಭವ್ಯ ಶ್ರೀರಾಮ ಮಂದಿರ ತಲೆಯೆತ್ತಿರುವುದನ್ನು ಸಹಿಸದೆ, ಓಲೈಕೆ ರಾಜಕಾರಣಕ್ಕೆ ಕಟಿಬಿದ್ದು ಹಿಂದೂ ಕಾರ್ಯಕರ್ತರು ಹಾಗೂ ರಾಮಭಕ್ತರನ್ನು ಜೈಲಿಗಟ್ಟುವ ಹುನ್ನಾರ ನಡೆಸಲು ರೂಪಿಸಿರುವ ಕಾಂಗ್ರೆಸ್ ಸರ್ಕಾರದ ಷಡ್ಯಂತ್ರವನ್ನು ಖಂಡಿಸಿ, ತಕ್ಷಣ ಹಿಂದೂ ಕಾರ್ಯಕರ್ತರನ್ನು ಬಿಡುಗಡೆಗೊಳಿಸಿ ರಾಮವಿರೋಧಿ ನಿಲುವುಗಳನ್ನು ಕೈಬಿಡುವಂತೆ ಆಗ್ರಹಿಸಲಾಯಿತು.

BJP Karnataka ಈ ಸಂದರ್ಭದಲ್ಲಿ ಕೇಂದ್ರದ ಮಾಜಿ ಸಚಿವರು ಹಾಗೂ ಸಂಸದರಾದ ಶ್ರೀ ಡಿ.ವಿ ಸದಾನಂದ ಗೌಡ, ಸಂಸದರಾದ ಶ್ರೀ ಪಿ.ಸಿ ಮೋಹನ್, ಮಾಜಿ ಉಪಮುಖ್ಯಮಂತ್ರಿಗಳಾದ ಶ್ರೀ ಡಾ.ಅಶ್ವಥ್ ನಾರಾಯಣ್ ಅವರು ಸೇರಿದಂತೆ ಬೆಂಗಳೂರಿನ ಎಲ್ಲಾ ಶಾಸಕರುಗಳು, ರಾಜ್ಯ ಉಪಾಧ್ಯಕ್ಷರುಗಳು, ರಾಜ್ಯ ಪ್ರಧಾನ ಕಾರ್ಯದರ್ಶಿಗಳು, ಪಕ್ಷದ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು, ಸಹಸ್ರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಶ್ರೀರಾಮ ಭಕ್ತರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...