Saturday, April 19, 2025
Saturday, April 19, 2025

Agriculture News ರೈತರಿಗೆ ಮೇವು ಬೆಳೆಗಳ ತರಬೇತಿ ಶಿಬಿರ

Date:

Agriculture News ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ, ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ ಸಹಯೋಗದೊಂದಿಗೆ ಜ.10 ಮತ್ತು 11 ರಂದು ನಗರದ ವಿನೋಬನಗರದಲ್ಲಿರುವ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ರೈತರಿಗೆ ಮೇವು ಬೆಳೆಗಳ ಕುರಿತು ತರಬೇತಿಯನ್ನು ಆಯೋಜಿಸಲಾಗಿದೆ.

ತರಬೇತಿ ಕಾರ್ಯಕ್ರಮದಲ್ಲಿ ಮಲೆನಾಡು ಗಿಡ್ಡತಳಿ ಹೊಂದಿರುವ ಸಣ್ಣ ಹಿಡುವಳಿದಾರಿಗೆ ಹಸಿರು ಮೇವಿನ ತಳಿಗಳ ಪ್ರದರ್ಶನ ಹಾಗೂ ಮೇವಿನ ಬೆಳೆಗಳ ಬೇಸಾಯ ಕ್ರಮಗಳು, ಮೇವು ಬೀಜಗಳ ಸಂಸ್ಕರಣೆ ಹಾಗೂ ಮೇವಿನ ತಳಿಗಳ ಪಸರಣೆ (ಪ್ರಾಯೋಗಿಕ ತರಬೇತಿ), ಹುಲ್ಲುಗಾವಲು ನಿರ್ವಹಣೆಯ ಅಗತ್ಯತೆಯ ಕುರಿತಾದ ವಿವಿಧ ವಿಷಯಗಳು ಒಳಗೊಂಡಿರುತ್ತದೆ. ಮಲೆನಾಡು ಗಿಡ್ಡ ತಳಿಯ ಹಾಲು, ಸಗಣಿ ಮತ್ತು ಗಂಜಳದಿಂದ ತಯಾರಿಸಲಾದ ವಿವಿಧ ಉತ್ಪನ್ನಗಳ ಪ್ರದರ್ಶನವನ್ನು ಏರ್ಪಡಿಸಲಾಗಿದೆ.

Agriculture News ಈ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಸಕ್ತಿಯುಳ್ಳವರು ತಮ್ಮ ಹೆಸರನ್ನು ಡಾ. ಹರೀಶ್ ಎಂ.-9470747820 ಹಾಗೂ ಡಾ. ವೆಂಕಟೇಶ್ -9482373685 ಮೊಬೈಲ್ ನಂ.ಗಳಿಗೆ ಎಸ್.ಎಂ.ಎಸ್./ವಾಟ್ಸ್‍ಪ್ ಮೂಲಕ ಅಥವಾ ರಾ.ಕೃ.ವಿಕಾಸ ಯೋಜನಾ ಸಂಯೋಜಕರು, ಪ್ರಾಣಿ ಅನುವಂಶೀಯತೆ ಹಾಗೂ ತಳಿಶಾಸ್ತ್ರ ವಿಭಾಗ, ಪಶುವೈದ್ಯಕೀಯ ಮಹಾವಿದ್ಯಾಲಯ, ವಿನೋಬನಗರ, ಶಿವಮೊಗ್ಗ ಇಲ್ಲಿ ನೇರ ಸಂಪರ್ಕ ಮಾಡಿ ನೊಂದಾಯಿಸಿಕೊಳ್ಳುವಂತೆ ವಿಭಾಗದ ಸಹ ಪ್ರಾಧ್ಯಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Akhila Karnataka Sports Karate Association ಕರಾಟೆ ತೀರ್ಪುಗಾರರ ಪರೀಕ್ಷೆಯಲ್ಲಿ ಶಿವಮೊಗ್ಗದ ಶ್ರೀಹರ್ಷ ಉತ್ತೀರ್ಣ

Akhila Karnataka Sports Karate Association ಹುಬ್ಬಳ್ಳಿಯಲ್ಲಿ ಇತ್ತೀಚಿಗೆ ಅಖಿಲ...

ಶಿವಮೊಗ್ಗದಲ್ಲಿ ಯಶಸ್ವಿಯಾಗಿ ನಡೆದ ಕನಕದಾಸರ ಕೀರ್ತನೆ ಗಾಯನ ಸ್ಪರ್ಧೆ

ಶಿವಮೊಗ್ಗ ಕನಕ ಭಜನಾ ಮಂಡಳಿಯವರು ದಶಮಾನೋತ್ಸವ ಕಾರ್ಯಕ್ರಮವನ್ನು ಜಯಂತಿ ಪರಮೇಶ್ವರ್ ರವರ...

Madhu Bangarappa ವಿದ್ಯಾರ್ಥಿಯ ಜನಿವಾರ ತೆಗೆಸಿದ ಪ್ರಕರಣ ಖಂಡನೀಯ- ಸಚಿವ‌ ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಯ...