Monday, May 4, 2026
Monday, May 4, 2026

Coffee Bean ಒಂದೇ ಸಮನೆ ಮಳೆ ಸುರಿದು ಕಾಫಿ ಬೆಳೆ ನಾಶದತ್ತ ಪರಿಹಾರಕ್ಕೆ ಒತ್ತಾಯ

Date:

Coffee Bean ಹಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕಾಫಿ ಬೆಳೆ ನೆಲಕಚ್ಚು ತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಕೂಡಲೇ ಬೆಳೆಗಾರರಿಗೆ ಪರಿಹಾರ ಒದಗಿಸಿಕೊಡಬೇಕು ಎಂದು ಕಾಫಿ ಬೆಳೆಗಾರರ ಹಿತರಕ್ಷಣಾ ವೇದಿಕೆ ಪ್ರಧಾನ ಕಾರ್ಯದರ್ಶಿ ಹೊಲದಗದ್ದೆ ಗಿರೀಶ್ ಒತ್ತಾಯಿಸಿದ್ದಾರೆ.

ಈ ಕುರಿತು ಶುಕ್ರವಾರ ಹೇಳಿಕೆಯಲ್ಲಿ ತಿಳಿಸಿರುವ ಅವರು ಬೆಳೆಗಾರರು ಹಲವಾರು ವರ್ಷಗಳಿಂದ ಪ್ರಕೃತಿ ವಿಕೋಪ ಹಾಗೂ ಸಮಯಕ್ಕೆ ಪರಿಹಾರ ದೊರಕದೇ ಕಷ್ಟ-ನಷ್ಟ ಅನುಭವಿಸುವಂತಾಗಿದೆ. ಇದೀಗ ಕಾಫಿ ಹಣ್ಣು ಕಟಾವಿಗೆ ಸಿದ್ದವಾಗಿರುವ ಸಮಯದಲ್ಲಿ ಡಿಸೆಂಬರ್ ಹಾಗೂ ಜನವರಿಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆಹಾನಿ ಸಂಭವಿಸಿದೆ ಎಂದಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಬಹುತೇಕ ಭಾಗಗಳಲ್ಲಿ ರಾತ್ರಿ-ಹಗಲು ಎನ್ನದೇ ಮಳೆ ಸುರಿದಿದ ಪರಿಣಾಮ ಬೆಳೆಹಾನಿಯಾಗಿ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ತೋಟಗಳ ನಿರ್ವಹಣೆ ಸಂಬoಧ ಗೊಬ್ಬರ, ಕೀಟೋಪಕರಣ ಔಷಧಿ ಗಳನ್ನು ಬ್ಯಾಂಕ್‌ನಿoದ ಸಾಲಸೋಲ ಮಾಡಿಕೊಂಡು ತೋಟಕ್ಕೆ ಸಿಂಪಡಿಸಿದ್ದು ಕಟಾವಿಗೆ ಬಂದ ಕಾಫಿ ಸಂಪೂರ್ಣ ನೆಲಕ್ಕುದುರಿದೆ ಎಂದು ಆತಂಕ ವ್ಯಕ್ತಪಡಿಸಿದರು.

Coffee Bean ಇನ್ನುಳಿದ ಅಲ್ಪಸ್ವಲ್ಪ ಕಾಫಿಯು ಕಣಕ್ಕೆ ತಂದoತಹ ವೇಳೆಯಲ್ಲಿ ಧಾರಾಕಾರ ಮಳೆಯಿಂದ ಕರಗುವ ಸ್ಥಿತಿ ತಂದೊಡ್ಡಿದಲ್ಲದೇ ಕಾಫಿ ಗುಣಮಟ್ಟವು ಕುಸಿದಿದೆ. ಈ ಬಗ್ಗೆ ಹಲವಾರು ಭಾರಿ ಕೇಂದ್ರ ಹಾಗೂ ರಾಜ್ಯಸರ್ಕಾರಕ್ಕೆ ಬೆಳೆಗಾರರು ವೇದಿಕೆ ಮೂಲಕ ಒತ್ತಾಯಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಜೊತೆಗೆ ಕಾಫಿ ಮಂಡಳಿಯು ಹೋರಾಟದ ಮೂಲಕ ಬೆಳೆಗಾರರಿಗೆ ಪರಿಹಾರ ಹಾಗೂ ಸಹಾಯಧನ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.
ಪ್ರಸ್ತುತ ಕಾಫಿ ಬೆಳೆಗಾರರಿಗೆ ಮೂಲ ಸಮಸ್ಯೆಯಾಗಿರುವ ಕಾಫಿ ಒಣಗಿಸುವ ಸಂಬoಧ ಶಾಶ್ವತವಾಗಿ ಸರ್ಕಾರದ ಸಹಾಯಧನದಡಿ ಕಾಫಿ ಒಣಗಿಸುವ ಯಂತ್ರವನ್ನು ಪ್ರತಿ ಬೆಳೆಗಾರರಿಗೆ ನೀಡಬೇಕು. ಈ ಕುರಿತು ಸಂಸ ದರು ಹಾಗೂ ಕಾಫಿ ಮಂಡಳಿಗಳು ಹೆಚ್ಚು ಹೋರಾಟ ಮಾಡಿ ಸಹಾಯಧನ ಕಲ್ಪಿಸಿಕೊಡಬೇಕು ಎಂದು ಒತ್ತಾಯಿ ಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...