Monday, May 4, 2026
Monday, May 4, 2026

Bhadra Jaljeevan Yojana ಭದ್ರಾ ಜಲಜೀವನ್ ಯೋಜನೆ ಆರಂಭಕ್ಕೆ ಗುದ್ದಲಿಪೂಜೆ

Date:

Bhadra Jaljeevan Yojana ಚಿಕ್ಕಮಗಳೂರು, ತಾಲ್ಲೂಕಿನ ಮಾಗಡಿ-ಕೈಮರ ಹಾಗೂ ರಾಮೇದೇವರಹಳ್ಳಿಯ ಗ್ರಾಮ ಸ್ಥರಿಗೆ ಭದ್ರಾ ಜಲಜೀವನ್ ಯೋಜನೆಯಡಿ 29 ಲಕ್ಷ ರೂ. ಅನುದಾನದಲ್ಲಿ ಮಂಜೂರಾಗಿರುವ ಶುದ್ಧ ಕುಡಿಯುವ ನೀರಿನ ಪೈಪ್‌ಲೈನ್ ಕಾಮಗಾರಿಗೆ ಶಾಸಕಿ ನಯನ ಮೋಟಮ್ಮ ಮಾಗಡಿಯಲ್ಲಿ ಗುರುವಾರ ಗುದ್ದಲಿಪೂಜೆ ನೆರವೇ ರಿಸಿ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಶಾಸಕರು ಮುಂದಿನ ಮರ‍್ನಾಲ್ಕು ತಿಂಗಳಲ್ಲಿ ಭದ್ರಾ ಜಲಾಶಯದಿಂದ ಗ್ರಾಮಗಳಿಗೆ ಪೈಪ್‌ಲೈನ್ ಮುಖಾಂತರ ನೀರು ಹರಿಸುತ್ತಿರುವ ಹಿನ್ನೆಲೆಯಲ್ಲಿ ಕಾಮಗಾರಿಯನ್ನು ಗುಣಮಟ್ಟದಿಂದ ಕೂಡಿರುವ ಜೊತೆಗೆ ತ್ವರಿತವಾಗಿ ಪೂರೈಸಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಿದರು.

ಬಯಲುಸೀಮೆ ಪ್ರದೇಶವಾಗಿರುವ ಈ ಭಾಗದಲ್ಲಿ ಕುಡಿಯುವ ನೀರು ಅತ್ಯಂತ ಮಹತ್ವವನ್ನು ಪಡೆದುಕೊಳ್ಳ ಲಿದೆ. ಆ ನಿಟ್ಟಿನಲ್ಲಿ ಗ್ರಾಮಸ್ಥರು ಕುಡಿಯುವ ನೀರು ಕಾಮಗಾರಿ ಪೂರ್ಣಗೊಂಡ ಬಳಿಕ ಹೆಚ್ಚು ವ್ಯರ್ಥಗೊಳಿಸ ದಂತೆ ಕ್ರಮ ವಹಿಸಬೇಕು ಎಂದು ಮನವಿ ಮಾಡಿದರು.

ಪ್ರಸ್ತುತ ಮಾಗಡಿ ಗ್ರಾಮದಲ್ಲಿ 12 ಎಕರೆ ಸರ್ಕಾರಿ ಜಾಗವಿರುವ ಹಿನ್ನೆಲೆಯಲ್ಲಿ ನಿವೇಶನವನ್ನಾಗಿ ಮಾರ್ಪಾ ಡಿಸಿ ಅರ್ಹ ನಿವೇಶನರಹಿತರಿಗೆ ಹಂಚುವ ಗುರಿ ಹೊಂದಿದ್ದು ಆ ನಿಟ್ಟಿನಲ್ಲಿ ಜಾಗವನ್ನು ಮಟ್ಟಗೊಳಿಸುವ ಕಾರ್ಯ ಕ್ಕೆ ಗುದ್ದಲಿ ಪೂಜೆ ನೆರವೇರಿಸಿದ್ದು ನಿವೇಶನ ಹಂಚುವ ಸಂಬoಧ ಜಾಗಕ್ಕೆ ಶಾಸಕರ ಅನುದಾನದಲ್ಲಿ 5 ಲಕ್ಷ ರೂ. ಗಳನ್ನು ಮೀಸಲಿಡಲಾಗಿದೆ ಎಂದು ತಿಳಿಸಿದರು.

Bhadra Jaljeevan Yojana ಸಂದರ್ಭದಲ್ಲಿ ಜಿ.ಪಂ. ಮಾಜಿ ಸದಸ್ಯ ಕೆ.ವಿ.ಮಂಜುನಾಥ್, ಮುಗುಳುವಳ್ಳಿ ಗ್ರಾ.ಪಂ. ಅಧ್ಯಕ್ಷೆ ಭಾಗ್ಯ, ಸದಸ್ಯರುಗಳಾದ ಕಲಾವತಿ, ರಘುನಾಥನ್, ಮಲ್ಲೇಶ್, ವನಿತಾ, ಮಾಜಿ ಅಧ್ಯಕ್ಷ ಕೆ.ಎಸ್.ಪ್ರಕಾಶ್, ಕಾಂಗ್ರೆಸ್ ಮು ಖಂಡರುಗಳಾದ ಮುದಪೀರ್, ಎಂ.ವಿಜಯ್‌ಕುಮಾರ್, ಗ್ರಾ.ಪಂ. ಮಾಜಿ ಸದಸ್ಯ ಕೆ.ವಿ.ವಿರೂಪಾಕ್ಷಪ್ಪ, ಗುತ್ತಿಗೆ ದಾರ ರೋಹಿತ್ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...