Thursday, March 19, 2026
Thursday, March 19, 2026

DC Shivamogga ಉಪಖನಿಜ ಸಾಗಣೆ ವಾಹನಗಳಿಗೆ ಜಿಪಿಎಸ್ ಉಪಕರಣ ಅಳವಡಿಸಲು ಜಿಲ್ಲಾಧಿಕಾರಿ ಸೂಚನೆ

Date:

DC Shivamogga ಉಪ ಖನಿಜಗಳ ಅಕ್ರಮ ಗಣಿಗಾರಿಕೆ / ಸಾಗಾಣಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕರ್ನಾಟಕ ಪ್ರಿವೆನ್ಷನ್ ಆಫ್ ಇಲ್ಲೀಗಲ್ ಮೈನಿಂಗ್, ಟ್ರಾನ್ಸ್ಪೋರ್ಟ್ ಆಂಡ್ ಸ್ಟೋರೇಜ್ ಆಫ್ ಮೈನರಲ್ ರೂಲ್, 2011 ರೂಲ್ (7)ರ ಅನ್ವಯ ಕಟ್ಟಡ ಕಲ್ಲು, ಜಲ್ಲಿ, ಎಂ ಸ್ಯಾಂಡ್, ಮರಳು ಹಾಗೂ ಮಣ್ಣು ಇತ್ಯಾದಿ ಉಪ ಖನಿಜ ಸಾಗಾಣ ಕೆ ವಾಹನಗಳಿಗೆ ಕಡ್ಡಾಯವಾಗಿ ಜಿಪಿಎಸ್ ಉಪಕರಣಗಳನ್ನು ಅಳವಡಿಸುವಂತೆ ಜಿಲ್ಲಾಧಿಕಾರಿಗಳು/ ಜಿಲ್ಲಾ ಟಾಸ್ಕ್ ಪೋರ್ಸ್ (ಗಣ ) ಸಮಿತಿ ಅಧ್ಯಕ್ಷರು ಆದ ಡಾ. ಆರ್. ಸೆಲ್ವಮಣಿ ತಿಳಿಸಿದ್ದಾರೆ.

DC Shivamogga ಶಿವಮೊಗ್ಗ ಜಿಲ್ಲೆಯಲ್ಲಿ ಈವರೆಗೆ ಒಟ್ಟು 583 ಖನಿಜ ಸಾಗಾಣಿಕೆ ವಾಹನಗಳಿಗೆ ಜಿಪಿಎಸ್ ಉಪಕರಣಗಳನ್ನು ಅಳವಡಿಸಲಾಗಿದ್ದು, ಜಿಪಿಎಸ್ ಉಪಕರಣವನ್ನು ಅಳವಡಿಸಿಕೊಳ್ಳದ/ ಜಿಪಿಎಸ್ ಉಪಕರಣವನ್ನು ಅಳವಡಿಕೆ ಮಾಡಿಕೊಂಡು ಒಂದು ಪರವಾನಿಗೆಯಿಂದ ಒಂದಕ್ಕಿಂತ ಹೆಚ್ಚು ಬಾರಿ ಮರಳು ಸಾಗಾಣ ಕೆ ಮಾಡಿರುವುದು, ವಾಹನ ಸಾಮರ್ಥ್ಯಕ್ಕಿಂತ ಕಡಿಮೆ ಪ್ರಮಾಣವನ್ನು ಪರವಾನಿಗೆಯಲ್ಲಿ ನಮೂದಿಸುವುದು, ಜಿ.ಪಿ.ಎಸ್. ಅಳವಡಿಸಿಕೊಂಡು ಸೇವಾದಾರ ಸಂಸ್ಥೆಯೊಂದಿಗೆ ಸಂಪರ್ಕದಲ್ಲಿರಿಸಿಕೊಳ್ಳದ, ಪರವಾನಿಗೆ ಪ್ರಮಾಣಕ್ಕಿಂತ ಹೆಚ್ಚಿನ ಮರಳನ್ನು ಸಾಗಾಣ ಕೆ ಮಾಡುವಂತಹ ವಾಹನಗಳ ಮೇಲೆ ಕ.ಉ.ಖ.ರಿಯಾಯಿತಿ ನಿಯಮಾಳಿಯನ್ವಯ ಅಗತ್ಯ ಕ್ರಮಗಳನ್ನು ಕೈಗೊಂಡು ನಿಯಮಾನುಸಾರ ದಂಡ/ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...