Wednesday, December 17, 2025
Wednesday, December 17, 2025

Kannadasene ಕನ್ನಡಪರ ಹೋರಾಟಗಾರರನ್ನು ಕೂಡಲೇ ಬಿಡುಗಡೆ ಮಾಡಲು ಒತ್ತಾಯ

Date:

Kannadasene ಆಂಗ್ಲಭಾಷೆಯ ನಾಮಫಲಕ ತೆರವುಗೊಳಿಸುವ ವೇಳೆಯಲ್ಲಿ ಕನ್ನಡಪರ ಹೋರಾಟಗಾರರನ್ನು ಬಂಧಿಸಿದ್ದು ಸರಿಯಲ್ಲ. ಕೂಡಲೇ ಅವರನ್ನು ಬಿಡುಗಡೆಗೊಳಿಸಬೇಕು ಎಂದು ಕನ್ನಡಸೇನೆ ಜಿಲ್ಲಾ ಘಟಕವು ಮುಖ್ಯಮಂತ್ರಿಗಳಿಗೆ ಶನಿವಾರ ಮನವಿ ಸಲ್ಲಿಸಿ ಒತ್ತಾಯಿಸಿದರು.

ಈ ಸಂಬಂಧ ಉಪವಿಭಾಗಾಧಿಕಾರಿ ದಲ್ಜಿತ್‌ಕುಮಾರ್ ಅವರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಕನ್ನಡಸೇನೆ ಮುಖಂಡರುಗಳು ರಾಜ್ಯಮಟ್ಟದ ಕನ್ನಡಪರ ಹೋರಾಟಗಾರರನ್ನು ಬಂಧಿಸಿರುವುದು ಖಂಡನೀಯ. ತಕ್ಷಣ ಬಿಡುಗಡೆಗೊಳಿಸಬೇಕು ಎಂದರು.

ಬಳಿಕ ಮಾತನಾಡಿದ ಕನ್ನಡಸೇನೆ ಜಿಲ್ಲಾಧ್ಯಕ್ಷ ಪಿ.ಸಿ.ರಾಜೇಗೌಡ ನಾಡಿನಲ್ಲಿ ಅಂಗಡಿ ಮುಂಗಟ್ಟುದಾರರು ಶೇ. 70ರಷ್ಟು ಭಾಗ ಕನ್ನಡ ಹಾಗೂ ಶೇ.30ರಷ್ಟು ಭಾಗ ಆಂಗ್ಲಭಾಷೆಯ ನಾಮಫಲಕ ಅಳವಡಿಸಲು ಸರ್ಕಾರದ ಸೂಚನೆಗಳಿದ್ದರೂ ಸಹ ಅವುಗಳನ್ನು ಧಿಕ್ಕರಿಸಿ ರಾಜಾರೋಷವಾಗಿ ಆಂಗ್ಲಭಾಷೆಗೆ ಬೆಲೆ ಕೊಟ್ಟಿರುವುದು ಸರಿಯಲ್ಲ ಎಂದರು.

Kannadasene ಈ ವಿಚಾರವಾಗಿ ರಾಜ್ಯದ ಹಲವಾರು ಕನ್ನಡಪರ ಸಂಘಟನೆಗಳು ನಾಮಫಲಕ ತೆರವುಗೊಳಿಸುವ ಸಂಬಂಧ ಅಂಗಡಿದಾರರ ಮಳಿಗೆಗಳ ನಾಮಫಲಕ ತೆರವಿಗೆ ಮುಂದಾದ ವೇಳೆಯಲ್ಲಿ ಪೊಲೀಸ್ ಇಲಾಖೆ ಅವರನ್ನು ಬಂಧಿಸಿ ಪ್ರಕರಣ ದಾಖಲಿಸಿ ಜೈಲಿಗೆ ಕಳಿಸಿರುವುದು ಸರಿಯಾದ ಕ್ರಮವಲ್ಲ ಎಂದು ಹೇಳಿದರು.

ಹೀಗಾಗಿ ಮುಖ್ಯಮಂತ್ರಿಗಳು ಕನ್ನಡಪರ ಸಂಘಟನೆಗಳ ಹೋರಾಟಗಾರರ ಮೇಲೆ ದಾಖಲಿಸಿರುವ ಪ್ರಕರಣ ಹಿಂಪಡೆದು ಅವರನ್ನು ಬಿಡುಗಡೆಗೊಳಿಸಬೇಕು. ವಿಳಂಭಧೋರಣೆ ವಹಿಸಿದರೆ ರಾಜ್ಯಾದ್ಯಂತ ಹೋರಾಟ ರೂಪಿಸ ಬೇಕಾಗುತ್ತದೆ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಕನ್ನಡಸೇನೆ ಆಟೋಘಟಕದ ಅಧ್ಯಕ್ಷ ಜಯಪ್ರಕಾಶ್, ಮುಖಂಡರುಗಳಾದ ಹರಿಶಂಕರ್, ಪಾಲಾಕ್ಷಿ, ಹೆಚ್.ಎನ್.ಶಿವಕುಮಾರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...